<p><strong>ಬೆಂಗಳೂರು: </strong>ಸಹಕಾರ ಸಮ್ಮೇಳನದಲ್ಲಿ ಭಾಗವಹಿಸಲು ರಾಜ್ಯಕ್ಕೆ ಆಗಮಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.</p>.<p>ನೋಟು ಅಮಾನ್ಯೀಕರಣದ ಘೋಷಣೆ ಆದ ದಿನವೇ ನೀವು ನಿರ್ದೇಶಕರಾಗಿದ್ದ ಎಡಿಸಿ ಬ್ಯಾಂಕ್ಗೆ ₹ 500 ಕೋಟಿ ಜಮೆಯಾಗಿತ್ತು. ನೋಟು ಅಮಾನ್ಯೀಕರಣದ ಸಮನ್ವಯದ ಬಗ್ಗೆ ಸಹಕಾರ ಸಮ್ಮೇಳನದಲ್ಲಿ ಬಹಿರಂಗಪಡಿಸುತ್ತೀರಾ? ಎಂದು ಪ್ರಶ್ನಿಸಿದ್ದಾರೆ.</p>.<p>ಕೃಷಿ ಕಾನೂನುಗಳನ್ನು ಹಿಂಪಡೆಯುವ ಮೂಲಕ ಕೇಂದ್ರ ಸರ್ಕಾರ ರೈತರಿಗೆ ತಲೆಬಾಗಿದೆ. ಆದರೆ, ರಾಜ್ಯ ಸರ್ಕಾರವೇಕೆ ಅದನ್ನು ಮಾಡುತ್ತಿಲ್ಲ? ಕೇಂದ್ರ ಸರ್ಕಾರ ಮಾತ್ರ ಕಾನೂನನ್ನು ಹಿಂಪಡೆದು, ರಾಜ್ಯ ಸರ್ಕಾರಗಳು ಈ ರೀತಿ ಮೊಂಡುತನ ಪ್ರದರ್ಶಿಸುವುದು ನಿಮ್ಮ ಯೋಜನೆಯಾಗಿತ್ತೇ? ಈ ಮೂಲಕ ರೈತರನ್ನು ಮೂರ್ಖರನ್ನಾಗಿ ಮಾಡುತ್ತಿದ್ದೀರಾ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಇದೇವೇಳೆ, ಕೃಷಿ ಕಾಯ್ದೆ ಹಿಂಪಡೆಯಲು ಸಿಎಂ ಬಸವರಾಜ ಬೊಮ್ಮಾಯಿಗೆ ಸೂಚಿಸುವಿರಾ? ಅಥವಾ ಮೌನವಾಗಿದ್ದು ನಮ್ಮ ರೈತರನ್ನು ವಂಚಿಸುತ್ತೀರಾ? ಎಂದು ಪ್ರಶ್ನಿಸಿದ್ದಾರೆ.</p>.<p>ಇನ್ನು, ಯಶಸ್ವಿನಿ ಯೋಜನೆಯನ್ನು ರೀಲಾಂಚ್ ಮಾಡುತ್ತಿರುವ ನೀವು ಆಯುಷ್ಮಾನ್ ಭಾರತ್ ಪಿಎಂ ಜನಾರೋಗ್ಯ ಯೋಜನೆ ವಿಫಲ ಎಂದು ಹೇಳುವಿರಾ? ಎಂದು ಸಿದ್ದರಾಮಯ್ಯ ಕುಟುಕಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಸಹಕಾರ ಸಮ್ಮೇಳನದಲ್ಲಿ ಭಾಗವಹಿಸಲು ರಾಜ್ಯಕ್ಕೆ ಆಗಮಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.</p>.<p>ನೋಟು ಅಮಾನ್ಯೀಕರಣದ ಘೋಷಣೆ ಆದ ದಿನವೇ ನೀವು ನಿರ್ದೇಶಕರಾಗಿದ್ದ ಎಡಿಸಿ ಬ್ಯಾಂಕ್ಗೆ ₹ 500 ಕೋಟಿ ಜಮೆಯಾಗಿತ್ತು. ನೋಟು ಅಮಾನ್ಯೀಕರಣದ ಸಮನ್ವಯದ ಬಗ್ಗೆ ಸಹಕಾರ ಸಮ್ಮೇಳನದಲ್ಲಿ ಬಹಿರಂಗಪಡಿಸುತ್ತೀರಾ? ಎಂದು ಪ್ರಶ್ನಿಸಿದ್ದಾರೆ.</p>.<p>ಕೃಷಿ ಕಾನೂನುಗಳನ್ನು ಹಿಂಪಡೆಯುವ ಮೂಲಕ ಕೇಂದ್ರ ಸರ್ಕಾರ ರೈತರಿಗೆ ತಲೆಬಾಗಿದೆ. ಆದರೆ, ರಾಜ್ಯ ಸರ್ಕಾರವೇಕೆ ಅದನ್ನು ಮಾಡುತ್ತಿಲ್ಲ? ಕೇಂದ್ರ ಸರ್ಕಾರ ಮಾತ್ರ ಕಾನೂನನ್ನು ಹಿಂಪಡೆದು, ರಾಜ್ಯ ಸರ್ಕಾರಗಳು ಈ ರೀತಿ ಮೊಂಡುತನ ಪ್ರದರ್ಶಿಸುವುದು ನಿಮ್ಮ ಯೋಜನೆಯಾಗಿತ್ತೇ? ಈ ಮೂಲಕ ರೈತರನ್ನು ಮೂರ್ಖರನ್ನಾಗಿ ಮಾಡುತ್ತಿದ್ದೀರಾ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಇದೇವೇಳೆ, ಕೃಷಿ ಕಾಯ್ದೆ ಹಿಂಪಡೆಯಲು ಸಿಎಂ ಬಸವರಾಜ ಬೊಮ್ಮಾಯಿಗೆ ಸೂಚಿಸುವಿರಾ? ಅಥವಾ ಮೌನವಾಗಿದ್ದು ನಮ್ಮ ರೈತರನ್ನು ವಂಚಿಸುತ್ತೀರಾ? ಎಂದು ಪ್ರಶ್ನಿಸಿದ್ದಾರೆ.</p>.<p>ಇನ್ನು, ಯಶಸ್ವಿನಿ ಯೋಜನೆಯನ್ನು ರೀಲಾಂಚ್ ಮಾಡುತ್ತಿರುವ ನೀವು ಆಯುಷ್ಮಾನ್ ಭಾರತ್ ಪಿಎಂ ಜನಾರೋಗ್ಯ ಯೋಜನೆ ವಿಫಲ ಎಂದು ಹೇಳುವಿರಾ? ಎಂದು ಸಿದ್ದರಾಮಯ್ಯ ಕುಟುಕಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>