ಶುಕ್ರವಾರ, 24 ಅಕ್ಟೋಬರ್ 2025
×
ADVERTISEMENT
ADVERTISEMENT

ಸಿದ್ದರಾಮಯ್ಯ ಉತ್ತರಾಧಿಕಾರಿ ಯಾರು: ಕಾಂಗ್ರೆಸ್‌ನಲ್ಲಿ ಭಾರಿ ಚರ್ಚೆ

ಯತೀಂದ್ರ ಹೇಳಿಕೆ ಎಬ್ಬಿಸಿದ ಕೋಲಾಹಲ l ಕಾಂಗ್ರೆಸ್‌ನಲ್ಲಿ ಭಾರಿ ಚರ್ಚೆ
Published : 23 ಅಕ್ಟೋಬರ್ 2025, 23:30 IST
Last Updated : 23 ಅಕ್ಟೋಬರ್ 2025, 23:30 IST
ಫಾಲೋ ಮಾಡಿ
Comments
‘ಸತೀಶ ಜಾರಕಿಹೊಳಿ ಅವರಲ್ಲಿ ನಾಯಕತ್ವ ಇದೆ. ಅವರು ಮುಂದೆ ಮುಖ್ಯಮಂತ್ರಿ ಆಗುವರೆಂದು ನಾನೇ ಹೇಳಿದ್ದೇನೆ. ಮುಂದಿನ ಮುಖ್ಯಮಂತ್ರಿ ಬಗ್ಗೆ ಯತೀಂದ್ರ ಅಭಿಪ್ರಾಯ ವೈಯಕ್ತಿಕವಾದದ್ದು
ಆರ್‌.ಬಿ. ತಿಮ್ಮಾಪುರ  ,ಅಬಕಾರಿ ಸಚಿವ
‘ಕಾಂಗ್ರೆಸ್‌ ಪಕ್ಷದಲ್ಲಿ ಸೈದ್ಧಾಂತಿಕವಾಗಿ ಬದ್ಧರಾದವರು ಇದ್ದಾರೆ. ಸಂವಿಧಾನ ಪರವಾಗಿ, ಮೂಢನಂಬಿಕೆ ವಿರುದ್ಧ ಸತೀಶ ಜಾರಕಿಹೊಳಿ ಜನಜಾಗೃತಿ ಮೂಡಿಸುತ್ತಿದ್ದಾರೆ. ಹೀಗಾಗಿ ಯತೀಂದ್ರ ಹೇಳಿದ್ದರಲ್ಲಿ ತಪ್ಪೇನಿಲ್ಲ
ಪ್ರಿಯಾಂಕ್‌ ಖರ್ಗೆ, ಗ್ರಾಮೀಣಾಭಿವೃದ್ಧಿ ಸಚಿವ 
‘ಸಿ.ಎಂ ಸ್ಥಾನ ಉಲ್ಲೇಖಿಸಿ ಹೇಳಿದ್ದಲ್ಲ’
‘ಯತೀಂದ್ರ ಅವರು ಸೈದ್ಧಾಂತಿಕವಾಗಿ ಸತೀಶ ಜಾರಕಿಹೊಳಿ ಹೆಸರು ಹೇಳಿ ದ್ದಾರೆ, ತಪ್ಪೇನಿದೆ? ಹಿಂದೆ ಅವರು ಅಹಿಂದ ಚಳವಳಿಯಲ್ಲಿ ಇದ್ದರು. ಅವರಿಗೆ ಬದ್ಧತೆ ಇದೆ ಎಂದು ಹೆಸರು ಹೇಳಿರಬಹುದು. ಮುಖ್ಯಮಂತ್ರಿ ಸ್ಥಾನ ಉಲ್ಲೇಖಿಸಿ ಆ ಹೇಳಿಕೆ ನೀಡಿಲ್ಲ’ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು. ‘ಮುಖ್ಯಮಂತ್ರಿ ಬದಲಾವಣೆ ಸಂದರ್ಭ ಬಂದಾಗ ಕಾಂಗ್ರೆಸ್‌ ಶಾಸಕಾಂಗ ಪಕ್ಷದ (ಸಿಎಲ್​ಪಿ) ಸಭೆಯನ್ನು ಹೈಕಮಾಂಡ್‌ನವರು ಕರೆಯುತ್ತಾರೆ. ಅಲ್ಲಿ ಶಾಸಕರ ಅಭಿಪ್ರಾಯ ಪಡೆದ ವೀಕ್ಷಕರು ಹೈಕಮಾಂಡ್​ಗೆ ವರದಿ ಕೊಡುತ್ತಾರೆ. ಆ ನಂತರ ಯಾರು, ಏನು ಎನ್ನುವುದು ಘೋಷಿಸಲಾಗುತ್ತದೆ. ಇದು ನಮ್ಮಲ್ಲಿರುವ ಪದ್ಧತಿ’ ಎಂದರು.
‘ಸಿ.ಎಂ ಧ್ವನಿಯಂತೆ ಬಿಂಬಿಸಬಾರದು’
‘ಯತೀಂದ್ರ ಅವರ ಮಾತುಗಳನ್ನು ಮುಖ್ಯಮಂತ್ರಿಯ ಧ್ವನಿ ಎಂಬಂತೆ ಬಿಂಬಿಸುವುದು ಸರಿಯಲ್ಲ. ಈಗಾಗಲೇ ಯತೀಂದ್ರ ಅವರೇ ತಮ್ಮ ಹೇಳಿಕೆಗೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿದ್ದಾರೆ’ ಎಂದು ಅರಣ್ಯ ಸಚಿವಈಶ್ವರ ಖಂಡ್ರೆ ಹೇಳಿದರು. ‘ಯಾವುದೇ ಜಾತಿ, ಮತ, ಧರ್ಮದ ಆಧಾರದ ಮೇಲೆ ನಾಯಕತ್ವ ನಿರ್ಧಾರ ಆಗುವುದಿಲ್ಲ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT