<p><strong>ಬೆಂಗಳೂರು:</strong> ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜತೆಗೆ ಕಾಂಗ್ರೆಸ್ ಹೈಕಮಾಂಡ್ ಸತತ ಮೂರು ದಿನಗಳ ಕಾಲ ಸಮಾಲೋಚನೆ ನಡೆಸಿ ಸಂಪುಟ ವಿಸ್ತರಣೆಯ ಕಗ್ಗಂಟನ್ನು ಬಗೆಹರಿಸಿದ್ದು, 24 ಶಾಸಕರು ಸಂಪುಟಕ್ಕೆ ಇಂದು ಸೇರ್ಪಡೆಯಾಗಲಿದ್ದಾರೆ.</p>.<p>ಉಭಯ ಸದನಗಳ ಸದಸ್ಯರೂ ಅಲ್ಲದ ಪಕ್ಷದ ಹಿರಿಯ ಮುಖಂಡ ಎನ್.ಎಸ್.ಬೋಸರಾಜು ಅವರಿಗೆ ಸಚಿವರಾಗುವ ‘ಭಾಗ್ಯ’ ದೊರಕಿದೆ. ಸಚಿವರಾಗುವ ‘ಗ್ಯಾರಂಟಿ’ಯಲ್ಲಿದ್ದ ಹಲವು ಹಿರಿಯ ಶಾಸಕರಿಗೆ ಅವಕಾಶ ಕೈ ತಪ್ಪಿದೆ.</p>.<p>ನೂತನ ಸಚಿವರ ಪ್ರಮಾಣವಚನ ಸಮಾರಂಭ ಇಂದು (ಶನಿವಾರ) ಬೆಳಿಗ್ಗೆ 11.45ಕ್ಕೆ ರಾಜಭವನದಲ್ಲಿ ನಡೆಯಲಿದೆ. ಪ್ರಮಾಣವಚನಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ರಾಜಭವನಕ್ಕೆ ಶುಕ್ರವಾರ ಮಧ್ಯಾಹ್ನವೇ ಮುಖ್ಯಮಂತ್ರಿ ಸಚಿವಾಲಯ ಸಂದೇಶ ರವಾನಿಸಿತ್ತು. ನೂತನ ಸಚಿವರ ಪಟ್ಟಿಯನ್ನು ಶುಕ್ರವಾರ ರಾತ್ರಿ ರಾಜಭವನಕ್ಕೆ ಕಳುಹಿಸಲಾಗಿದೆ. </p>.<p>ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್ ಹಾಗೂ ಎಂಟು ಶಾಸಕರು ಸಚಿವರಾಗಿ ಕಳೆದ ಶನಿವಾರ ಪ್ರಮಾಣವಚನ ಸ್ವೀಕರಿಸಿದ್ದರು. ಸಚಿವ ಸಂಪುಟದಲ್ಲಿ ಒಟ್ಟು 34 ಮಂದಿಯ ಸೇರ್ಪಡೆಗೆ ಅವಕಾಶ ಇದೆ. 24 ಮಂದಿಯ ಸೇರ್ಪಡೆಯಿಂದ ಸಂಪುಟ ಭರ್ತಿಯಾದಂತೆ ಆಗುತ್ತದೆ.</p>.<p>ಎರಡು ವರ್ಷದ ಬಳಿಕ ಸಂಪುಟ ಪುನಾರಚರಣೆ ಮಾಡಿ ನಿಮಗೆ ಅವಕಾಶ ನೀಡಲಾಗುತ್ತದೆ ಎಂದು ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಸಚಿವ ಸ್ಥಾನ ಕೈ ತಪ್ಪಿದ ಕೂಡಲೇ ಕೆಲವು ಶಾಸಕರು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. </p>.<p>ಜಾತಿವಾರು ಮತ್ತು ಪ್ರಾದೇಶಿಕ ಪ್ರಾತಿನಿಧ್ಯದ ಜತೆಗೆ ಸಾಮಾಜಿಕ ನ್ಯಾಯದ ಮಾನದಂಡದಲ್ಲಿ ಹಿರಿಯ ಹಾಗೂ ಕಿರಿಯ ಶಾಸಕರನ್ನು ಸಂಪುಟಕ್ಕೆ ಆಯ್ಕೆ ಮಾಡಿಕೊಳ್ಳುವ ಮೂಲಕ ಸಮತೋಲನ ಕಾಪಾಡಲಾಗಿದೆ ಎಂದು ಮುಖ್ಯಮಂತ್ರಿ ಪ್ರತಿಪಾದಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜತೆಗೆ ಕಾಂಗ್ರೆಸ್ ಹೈಕಮಾಂಡ್ ಸತತ ಮೂರು ದಿನಗಳ ಕಾಲ ಸಮಾಲೋಚನೆ ನಡೆಸಿ ಸಂಪುಟ ವಿಸ್ತರಣೆಯ ಕಗ್ಗಂಟನ್ನು ಬಗೆಹರಿಸಿದ್ದು, 24 ಶಾಸಕರು ಸಂಪುಟಕ್ಕೆ ಇಂದು ಸೇರ್ಪಡೆಯಾಗಲಿದ್ದಾರೆ.</p>.<p>ಉಭಯ ಸದನಗಳ ಸದಸ್ಯರೂ ಅಲ್ಲದ ಪಕ್ಷದ ಹಿರಿಯ ಮುಖಂಡ ಎನ್.ಎಸ್.ಬೋಸರಾಜು ಅವರಿಗೆ ಸಚಿವರಾಗುವ ‘ಭಾಗ್ಯ’ ದೊರಕಿದೆ. ಸಚಿವರಾಗುವ ‘ಗ್ಯಾರಂಟಿ’ಯಲ್ಲಿದ್ದ ಹಲವು ಹಿರಿಯ ಶಾಸಕರಿಗೆ ಅವಕಾಶ ಕೈ ತಪ್ಪಿದೆ.</p>.<p>ನೂತನ ಸಚಿವರ ಪ್ರಮಾಣವಚನ ಸಮಾರಂಭ ಇಂದು (ಶನಿವಾರ) ಬೆಳಿಗ್ಗೆ 11.45ಕ್ಕೆ ರಾಜಭವನದಲ್ಲಿ ನಡೆಯಲಿದೆ. ಪ್ರಮಾಣವಚನಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ರಾಜಭವನಕ್ಕೆ ಶುಕ್ರವಾರ ಮಧ್ಯಾಹ್ನವೇ ಮುಖ್ಯಮಂತ್ರಿ ಸಚಿವಾಲಯ ಸಂದೇಶ ರವಾನಿಸಿತ್ತು. ನೂತನ ಸಚಿವರ ಪಟ್ಟಿಯನ್ನು ಶುಕ್ರವಾರ ರಾತ್ರಿ ರಾಜಭವನಕ್ಕೆ ಕಳುಹಿಸಲಾಗಿದೆ. </p>.<p>ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್ ಹಾಗೂ ಎಂಟು ಶಾಸಕರು ಸಚಿವರಾಗಿ ಕಳೆದ ಶನಿವಾರ ಪ್ರಮಾಣವಚನ ಸ್ವೀಕರಿಸಿದ್ದರು. ಸಚಿವ ಸಂಪುಟದಲ್ಲಿ ಒಟ್ಟು 34 ಮಂದಿಯ ಸೇರ್ಪಡೆಗೆ ಅವಕಾಶ ಇದೆ. 24 ಮಂದಿಯ ಸೇರ್ಪಡೆಯಿಂದ ಸಂಪುಟ ಭರ್ತಿಯಾದಂತೆ ಆಗುತ್ತದೆ.</p>.<p>ಎರಡು ವರ್ಷದ ಬಳಿಕ ಸಂಪುಟ ಪುನಾರಚರಣೆ ಮಾಡಿ ನಿಮಗೆ ಅವಕಾಶ ನೀಡಲಾಗುತ್ತದೆ ಎಂದು ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಸಚಿವ ಸ್ಥಾನ ಕೈ ತಪ್ಪಿದ ಕೂಡಲೇ ಕೆಲವು ಶಾಸಕರು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. </p>.<p>ಜಾತಿವಾರು ಮತ್ತು ಪ್ರಾದೇಶಿಕ ಪ್ರಾತಿನಿಧ್ಯದ ಜತೆಗೆ ಸಾಮಾಜಿಕ ನ್ಯಾಯದ ಮಾನದಂಡದಲ್ಲಿ ಹಿರಿಯ ಹಾಗೂ ಕಿರಿಯ ಶಾಸಕರನ್ನು ಸಂಪುಟಕ್ಕೆ ಆಯ್ಕೆ ಮಾಡಿಕೊಳ್ಳುವ ಮೂಲಕ ಸಮತೋಲನ ಕಾಪಾಡಲಾಗಿದೆ ಎಂದು ಮುಖ್ಯಮಂತ್ರಿ ಪ್ರತಿಪಾದಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>