<p><strong>ಕೊಪ್ಪಳ</strong>: ‘ಮುಖ್ಯಮಂತ್ರಿ ಬದಲಾವಣೆ ಆಗುವುದಿಲ್ಲ ಎಂದು ಈಗಾಗಲೇ ಎಲ್ಲ ನಾಯಕರೂ ಹೇಳಿದ್ದು, ಹೈಕಮಾಂಡ್ ಹೇಳಿದರೆ ರಾಜೀನಾಮೆ ಕೊಡುತ್ತೇನೆ ಎಂದು ಈಗಾಗಲೇ ಖುದ್ದು ಸಿದ್ದರಾಮಯ್ಯನವರೇ ತಿಳಿಸಿದ್ದಾರೆ. ಹೀಗಾಗಿ ತ್ಯಾಗದ ಪ್ರಶ್ನೆ ಬರುವುದಿಲ್ಲ. ಅವರು ತ್ಯಾಗ ಮಾಡುವುದಿಲ್ಲ’ ಎಂದು ಶಾಸಕ ಅಶೋಕ ಪಟ್ಟಣ ಹೇಳಿದರು.</p><p>ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಇಬ್ಬರ ನಡುವೆಯೂ ಉತ್ತಮ ಬಾಂಧವ್ಯವಿದೆ. ಡಿಕೆಶಿ ಸಿ.ಎಂ. ಆದರೂ ನನಗೆ ಸಂತೋಷ. ರಾಹುಲ್ ಗಾಂಧಿ ಹಾಗೂ ಎಲ್ಲ ಶಾಸಕರ ಭಾವನೆ ಸಿದ್ದರಾಮಯ್ಯನವರೇ ಮುಂದುವರಿಯಬೇಕು ಎನ್ನುವುದಾಗಿದೆ’ ಎಂದರು. </p><p>‘ಸಿದ್ದರಾಮಯ್ಯ ಎರಡೂವರೆ ವರ್ಷ ಉತ್ತಮ ಆಡಳಿತ ನೀಡಿದ್ದು, 2028ರ ಚುನಾವಣೆಗೆ ಬೇಕಾದರೆ ಶಿವಕುಮಾರ್ ತಮ್ಮ ಬೇಡಿಕೆ ಸಲ್ಲಿಸಲಿ. ಈಗ ಬೇರೆ ಯಾರೇ ಸಿ.ಎಂ. ಆದರೂ ಸರ್ಕಾರ ನಡೆಸುವುದು ಕಷ್ಟವಿದೆ. ಆದ್ದರಿಂದ ಸಿದ್ದರಾಮಯ್ಯ ಮುಂದುವರಿಯಲಿ ಎನ್ನುವ ಆಸೆಯಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ</strong>: ‘ಮುಖ್ಯಮಂತ್ರಿ ಬದಲಾವಣೆ ಆಗುವುದಿಲ್ಲ ಎಂದು ಈಗಾಗಲೇ ಎಲ್ಲ ನಾಯಕರೂ ಹೇಳಿದ್ದು, ಹೈಕಮಾಂಡ್ ಹೇಳಿದರೆ ರಾಜೀನಾಮೆ ಕೊಡುತ್ತೇನೆ ಎಂದು ಈಗಾಗಲೇ ಖುದ್ದು ಸಿದ್ದರಾಮಯ್ಯನವರೇ ತಿಳಿಸಿದ್ದಾರೆ. ಹೀಗಾಗಿ ತ್ಯಾಗದ ಪ್ರಶ್ನೆ ಬರುವುದಿಲ್ಲ. ಅವರು ತ್ಯಾಗ ಮಾಡುವುದಿಲ್ಲ’ ಎಂದು ಶಾಸಕ ಅಶೋಕ ಪಟ್ಟಣ ಹೇಳಿದರು.</p><p>ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಇಬ್ಬರ ನಡುವೆಯೂ ಉತ್ತಮ ಬಾಂಧವ್ಯವಿದೆ. ಡಿಕೆಶಿ ಸಿ.ಎಂ. ಆದರೂ ನನಗೆ ಸಂತೋಷ. ರಾಹುಲ್ ಗಾಂಧಿ ಹಾಗೂ ಎಲ್ಲ ಶಾಸಕರ ಭಾವನೆ ಸಿದ್ದರಾಮಯ್ಯನವರೇ ಮುಂದುವರಿಯಬೇಕು ಎನ್ನುವುದಾಗಿದೆ’ ಎಂದರು. </p><p>‘ಸಿದ್ದರಾಮಯ್ಯ ಎರಡೂವರೆ ವರ್ಷ ಉತ್ತಮ ಆಡಳಿತ ನೀಡಿದ್ದು, 2028ರ ಚುನಾವಣೆಗೆ ಬೇಕಾದರೆ ಶಿವಕುಮಾರ್ ತಮ್ಮ ಬೇಡಿಕೆ ಸಲ್ಲಿಸಲಿ. ಈಗ ಬೇರೆ ಯಾರೇ ಸಿ.ಎಂ. ಆದರೂ ಸರ್ಕಾರ ನಡೆಸುವುದು ಕಷ್ಟವಿದೆ. ಆದ್ದರಿಂದ ಸಿದ್ದರಾಮಯ್ಯ ಮುಂದುವರಿಯಲಿ ಎನ್ನುವ ಆಸೆಯಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>