<p><strong>ಮೈಸೂರು:</strong> ನನ್ನ ಕೊನೆಯ ಉಸಿರು ಇರುವವರೆಗೂ ರಾಜಕೀಯದಲ್ಲಿ ಇರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.</p><p>ತಾಲ್ಲೂಕಿನ ವರುಣ ಹೋಬಳಿಯ ವರಕೋಡು ಗ್ರಾಮದಲ್ಲಿ ಶುಕ್ರವಾರ ಬೀರೇಶ್ವರ ದೇವರ ದೇವಸ್ಥಾನವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p><p>ನಾನು ರಾಜಕೀಯದಲ್ಲಿ ಸೋಲು, ಗೆಲುವು ಎರಡನ್ನೂ ಕಂಡಿದ್ದೇನೆ. ಆದರೆ ಜನ ಸೇವೆ ಮಾಡುವುದನ್ನು ಮರೆತಿಲ್ಲ. ಕೈಲಾದಷ್ಟು ಜನ ಸೇವೆ ಮಾಡಿಕೊಂಡು ಬರುತ್ತಿದ್ದೇನೆ ಎಂದರು.</p><p>ನಾನು ಕ್ಷೇತ್ರಕ್ಕೆ ಈಗ ಜಾಸ್ತಿ ಬರಲು ಆಗುತ್ತಿಲ್ಲ. ಯತೀಂದ್ರ ಸಿದ್ದರಾಮಯ್ಯ ಕ್ಷೇತ್ರವನ್ನು ನೋಡಿಕೊಳ್ಳುತ್ತಾನೆ. ಅಭಿವೃದ್ಧಿ ದೃಷ್ಟಿಯಿಂದ ಅವನು ಹೇಳಿದ ಕೆಲಸವನ್ನೆಲ್ಲ ಮಾಡಿಕೊಡುತ್ತೇನೆ. ನೀವು ನನ್ನನ್ನು ಬೆಳೆಸಿದಂತೆ ಯತೀಂದ್ರನನ್ನೂ ಮುಂದೆಯೂ ಬೆಳೆಸಬೇಕು. ಬೆಳೆಸುತ್ತೀರಿ ಎಂಬ ವಿಶ್ವಾಸವಿದೆ ಎಂದು ಹೇಳಿದರು.</p><p>ಹುಂಡಿಗಳು ನನಗೆ ಪ್ರಿಯವಾದ ಊರುಗಳು. ನನಗೆ ರಾಜಕೀಯ ಜೀವನ ಸಿಕ್ಕಿದ್ದೇ ಇಲ್ಲಿಂದ. ಶಾಸಕ, ಸಚಿವ, ಮುಖ್ಯಮಂತ್ರಿ ಆಗಿದ್ದೇ ಇಲ್ಲಿನ ಜನರ ಆಶೀರ್ವಾದದಿಂದ. ಹೀಗಾಗಿ ಮೈಸೂರು ತಾಲ್ಲೂಕಿನ ಜನರನ್ನು ಮರೆಯಲಾಗದು ಎಂದರು. </p><p>ಗ್ರಾಮದ ಮುಖಂಡರು ಸಿದ್ದರಾಮಯ್ಯ ಅವರಿಗೆ ಬೆಳ್ಳಿಗದೆ ನೀಡಿ, ರೇಷ್ಮೆ ಶಾಲು ಹೊದಿಸಿ, ರೇಷ್ಮೆಗೂಡಿನ ಹಾರ ಹಾಕಿ ಸನ್ಮಾನಿಸಿದರು. ಶಿವಾನಂದ ಪುರಿ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.</p><p>ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ, ಮಾಜಿ ಶಾಸಕ ಎಂ.ಕೆ. ಸೋಮಶೇಖರ್, ಕಾಂಗ್ರೆಸ್ ಗ್ರಾಮಾಂತರ ಜಿಲ್ಲಾ ಸಮಿತಿಯ ಅಧ್ಯಕ್ಷ ಬಿ.ಜೆ. ವಿಜಯ್ಕುಮಾರ್ ಪಾಲ್ಗೊಂಡಿದ್ದರು.</p>.<h2>‘ಶಾಸಕ ಎಚ್.ವೈ.ಮೇಟಿ ಕುಟುಂಬಕ್ಕೆ ಟಿಕೆಟ್’</h2><p>ಬೆಳಗಾವಿ/ಬಾಗಲಕೋಟೆ: ‘ಶಾಸಕ ಎಚ್.ವೈ.ಮೇಟಿ ನಿಧನದಿಂದ ತೆರವಾಗಿರುವ ಬಾಗಲಕೋಟೆ ವಿಧಾನಸಭೆ ಕ್ಷೇತ್ರದ ಉಪಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್ನಿಂದ ಮೇಟಿ ಕುಟುಂಬದವರಿಗೆ ಟಿಕೆಟ್ ಕೊಡುತ್ತೇವೆ’ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.</p><p>‘ಉಪಚುನಾವಣೆಯನ್ನು ಗೆಲ್ಲಲು ಎಲ್ಲ ತಯಾರಿ ಪೂರ್ಣಗೊಂಡಿದೆ. ಪಕ್ಷದ ಹೈಕಮಾಂಡ್ ಹಾಗೂ ಕುಟುಂಬದವರ ನಿರ್ಧಾರ ಆಧರಿಸಿ, ಮೇಟಿ ಕುಟುಂಬದ ಒಬ್ಬರಿಗೆ ಟಿಕೆಟ್ ನೀಡುತ್ತೇವೆ’ ಎಂದು ಅವರು ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದರು.</p><p>ಬಾಗಲಕೋಟೆಯಲ್ಲಿ ಸಚಿವ ಆರ್.ಬಿ.ತಿಮ್ಮಾಪುರ ಮಾತನಾಡಿ, ‘ಉಪಚುನಾವಣೆಗೆ ಸ್ಪರ್ಧಿಸಲು ಸಾಕಷ್ಟು ಅಭ್ಯರ್ಥಿಗಳಿದ್ದಾರೆ. ಬೇರೆಯವರಿಗೆ ಟಿಕೆಟ್ ನೀಡುವ ಪ್ರಶ್ನೆಯೇ ಇಲ್ಲ. ಸಿ.ಎಂ., ಕೆಪಿಸಿಸಿ ಅಧ್ಯಕ್ಷ, ಹೈಕಮಾಂಡ್ ಚರ್ಚಿಸಿ, ಅಭ್ಯರ್ಥಿ ಹೆಸರು ಅಂತಿಮವಾಗಲಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ನನ್ನ ಕೊನೆಯ ಉಸಿರು ಇರುವವರೆಗೂ ರಾಜಕೀಯದಲ್ಲಿ ಇರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.</p><p>ತಾಲ್ಲೂಕಿನ ವರುಣ ಹೋಬಳಿಯ ವರಕೋಡು ಗ್ರಾಮದಲ್ಲಿ ಶುಕ್ರವಾರ ಬೀರೇಶ್ವರ ದೇವರ ದೇವಸ್ಥಾನವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p><p>ನಾನು ರಾಜಕೀಯದಲ್ಲಿ ಸೋಲು, ಗೆಲುವು ಎರಡನ್ನೂ ಕಂಡಿದ್ದೇನೆ. ಆದರೆ ಜನ ಸೇವೆ ಮಾಡುವುದನ್ನು ಮರೆತಿಲ್ಲ. ಕೈಲಾದಷ್ಟು ಜನ ಸೇವೆ ಮಾಡಿಕೊಂಡು ಬರುತ್ತಿದ್ದೇನೆ ಎಂದರು.</p><p>ನಾನು ಕ್ಷೇತ್ರಕ್ಕೆ ಈಗ ಜಾಸ್ತಿ ಬರಲು ಆಗುತ್ತಿಲ್ಲ. ಯತೀಂದ್ರ ಸಿದ್ದರಾಮಯ್ಯ ಕ್ಷೇತ್ರವನ್ನು ನೋಡಿಕೊಳ್ಳುತ್ತಾನೆ. ಅಭಿವೃದ್ಧಿ ದೃಷ್ಟಿಯಿಂದ ಅವನು ಹೇಳಿದ ಕೆಲಸವನ್ನೆಲ್ಲ ಮಾಡಿಕೊಡುತ್ತೇನೆ. ನೀವು ನನ್ನನ್ನು ಬೆಳೆಸಿದಂತೆ ಯತೀಂದ್ರನನ್ನೂ ಮುಂದೆಯೂ ಬೆಳೆಸಬೇಕು. ಬೆಳೆಸುತ್ತೀರಿ ಎಂಬ ವಿಶ್ವಾಸವಿದೆ ಎಂದು ಹೇಳಿದರು.</p><p>ಹುಂಡಿಗಳು ನನಗೆ ಪ್ರಿಯವಾದ ಊರುಗಳು. ನನಗೆ ರಾಜಕೀಯ ಜೀವನ ಸಿಕ್ಕಿದ್ದೇ ಇಲ್ಲಿಂದ. ಶಾಸಕ, ಸಚಿವ, ಮುಖ್ಯಮಂತ್ರಿ ಆಗಿದ್ದೇ ಇಲ್ಲಿನ ಜನರ ಆಶೀರ್ವಾದದಿಂದ. ಹೀಗಾಗಿ ಮೈಸೂರು ತಾಲ್ಲೂಕಿನ ಜನರನ್ನು ಮರೆಯಲಾಗದು ಎಂದರು. </p><p>ಗ್ರಾಮದ ಮುಖಂಡರು ಸಿದ್ದರಾಮಯ್ಯ ಅವರಿಗೆ ಬೆಳ್ಳಿಗದೆ ನೀಡಿ, ರೇಷ್ಮೆ ಶಾಲು ಹೊದಿಸಿ, ರೇಷ್ಮೆಗೂಡಿನ ಹಾರ ಹಾಕಿ ಸನ್ಮಾನಿಸಿದರು. ಶಿವಾನಂದ ಪುರಿ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.</p><p>ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ, ಮಾಜಿ ಶಾಸಕ ಎಂ.ಕೆ. ಸೋಮಶೇಖರ್, ಕಾಂಗ್ರೆಸ್ ಗ್ರಾಮಾಂತರ ಜಿಲ್ಲಾ ಸಮಿತಿಯ ಅಧ್ಯಕ್ಷ ಬಿ.ಜೆ. ವಿಜಯ್ಕುಮಾರ್ ಪಾಲ್ಗೊಂಡಿದ್ದರು.</p>.<h2>‘ಶಾಸಕ ಎಚ್.ವೈ.ಮೇಟಿ ಕುಟುಂಬಕ್ಕೆ ಟಿಕೆಟ್’</h2><p>ಬೆಳಗಾವಿ/ಬಾಗಲಕೋಟೆ: ‘ಶಾಸಕ ಎಚ್.ವೈ.ಮೇಟಿ ನಿಧನದಿಂದ ತೆರವಾಗಿರುವ ಬಾಗಲಕೋಟೆ ವಿಧಾನಸಭೆ ಕ್ಷೇತ್ರದ ಉಪಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್ನಿಂದ ಮೇಟಿ ಕುಟುಂಬದವರಿಗೆ ಟಿಕೆಟ್ ಕೊಡುತ್ತೇವೆ’ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.</p><p>‘ಉಪಚುನಾವಣೆಯನ್ನು ಗೆಲ್ಲಲು ಎಲ್ಲ ತಯಾರಿ ಪೂರ್ಣಗೊಂಡಿದೆ. ಪಕ್ಷದ ಹೈಕಮಾಂಡ್ ಹಾಗೂ ಕುಟುಂಬದವರ ನಿರ್ಧಾರ ಆಧರಿಸಿ, ಮೇಟಿ ಕುಟುಂಬದ ಒಬ್ಬರಿಗೆ ಟಿಕೆಟ್ ನೀಡುತ್ತೇವೆ’ ಎಂದು ಅವರು ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದರು.</p><p>ಬಾಗಲಕೋಟೆಯಲ್ಲಿ ಸಚಿವ ಆರ್.ಬಿ.ತಿಮ್ಮಾಪುರ ಮಾತನಾಡಿ, ‘ಉಪಚುನಾವಣೆಗೆ ಸ್ಪರ್ಧಿಸಲು ಸಾಕಷ್ಟು ಅಭ್ಯರ್ಥಿಗಳಿದ್ದಾರೆ. ಬೇರೆಯವರಿಗೆ ಟಿಕೆಟ್ ನೀಡುವ ಪ್ರಶ್ನೆಯೇ ಇಲ್ಲ. ಸಿ.ಎಂ., ಕೆಪಿಸಿಸಿ ಅಧ್ಯಕ್ಷ, ಹೈಕಮಾಂಡ್ ಚರ್ಚಿಸಿ, ಅಭ್ಯರ್ಥಿ ಹೆಸರು ಅಂತಿಮವಾಗಲಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>