<p><strong>ಬೆಂಗಳೂರು</strong>: ‘ಲಿಂಗನಮಕ್ಕಿ ಹಿನ್ನೀರಿನಲ್ಲಿ ನಿರ್ಮಿಸಿರುವ ಸೇತುವೆ ಉದ್ಘಾಟನೆಯ ಕಾರ್ಯಕ್ರಮದ ಕರಡು ಆಹ್ವಾನ ಪತ್ರಿಕೆಯ, ಆಹ್ವಾನಿತರ ಪಟ್ಟಿಯಲ್ಲಿ ನನ್ನ ಹೆಸರನ್ನು ಮುದ್ರಿಸಲಾಗಿದೆ. ಆದರೆ ಈ ಬಗ್ಗೆ ನಿಮ್ಮ ಸಚಿವಾಲಯದಿಂದ ನನಗೆ ಮಾಹಿತಿಯನ್ನೇ ನೀಡಿಲ್ಲ’ ಎಂದು ಆಕ್ಷೇಪ ವ್ಯಕ್ತಪಡಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಪತ್ರ ಬರೆದಿದ್ದಾರೆ.</p>.<p>ಶಿವಮೊಗ್ಗದ ಸಾಗರ ತಾಲ್ಲೂಕಿನಲ್ಲಿ ಸೋಮವಾರ (ಜುಲೈ 14) ಸೇತುವೆ ಉದ್ಘಾಟನೆ ಕಾರ್ಯಕ್ರಮವನ್ನು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ ಆಯೋಜಿಸಿದೆ. ಈ ಕಾರ್ಯಕ್ರಮದಲ್ಲಿ ನಿತಿನ್ ಗಡ್ಕರಿ ಅವರು ಭಾಗಿಯಾಗಲಿದ್ದಾರೆ. </p>.<p>ಇದೇ 11ರಂದು ಪತ್ರ ಬರೆದಿರುವ ಅವರು, ‘ಸಾಧ್ಯವಾದರೆ ಕಾರ್ಯಕ್ರಮ ಮುಂದೂಡಿ. ನಿಮ್ಮ ಅನುಕೂಲದ ದಿನಾಂಕಗಳನ್ನು ತಿಳಿಸಿದರೆ ನಾನೂ ಜತೆಯಾಗುತ್ತೇನೆ’ ಎಂದಿದ್ದಾರೆ.</p>.<p>‘ಇನ್ನು ಮುಂದೆ, ರಾಜ್ಯ ಮಟ್ಟದ ಕಾರ್ಯಕ್ರಮಗಳನ್ನು ಆಯೋಜಿಸುವ ಮುನ್ನ ರಾಜ್ಯ ಸರ್ಕಾರದ ಜತೆಗೆ ನಿಮ್ಮ ಸಚಿವಾಲಯವು ಸಮಾಲೋಚನೆ ನಡೆಸುವುದು ಸಮಂಜಸ. ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುವುದಕ್ಕೂ ಮುನ್ನ ರಾಜ್ಯ ಸರ್ಕಾರದ ಜತೆಗೆ ವ್ಯವಹರಿಸಿ ಎಂದು ನಿಮ್ಮ ಸಚಿವಾಲಯಕ್ಕೆ ನಿರ್ದೇಶನ ನೀಡಿ’ ಎಂದು ಕೋರಿದ್ದಾರೆ.</p>.<p>‘ಅದೇ ದಿನ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನಲ್ಲಿ ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡುವ ಕಾರ್ಯಕ್ರಮ ಇದೆ. ಅಲ್ಲಿ ಪಾಲ್ಗೊಳ್ಳುವುದು ಪೂರ್ವ ನಿಗದಿಯಾಗಿರುವುದರಿಂದ, ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗುತ್ತಿಲ್ಲ’ ಎಂದಿದ್ದಾರೆ.</p>.ಸೇತುವೆ ಲೋಕಾರ್ಪಣೆ ನಿಗದಿಯಂತೆ ನಡೆಯಲಿದೆ: ಸಂಸದ ಬಿ.ವೈ.ರಾಘವೇಂದ್ರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಲಿಂಗನಮಕ್ಕಿ ಹಿನ್ನೀರಿನಲ್ಲಿ ನಿರ್ಮಿಸಿರುವ ಸೇತುವೆ ಉದ್ಘಾಟನೆಯ ಕಾರ್ಯಕ್ರಮದ ಕರಡು ಆಹ್ವಾನ ಪತ್ರಿಕೆಯ, ಆಹ್ವಾನಿತರ ಪಟ್ಟಿಯಲ್ಲಿ ನನ್ನ ಹೆಸರನ್ನು ಮುದ್ರಿಸಲಾಗಿದೆ. ಆದರೆ ಈ ಬಗ್ಗೆ ನಿಮ್ಮ ಸಚಿವಾಲಯದಿಂದ ನನಗೆ ಮಾಹಿತಿಯನ್ನೇ ನೀಡಿಲ್ಲ’ ಎಂದು ಆಕ್ಷೇಪ ವ್ಯಕ್ತಪಡಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಪತ್ರ ಬರೆದಿದ್ದಾರೆ.</p>.<p>ಶಿವಮೊಗ್ಗದ ಸಾಗರ ತಾಲ್ಲೂಕಿನಲ್ಲಿ ಸೋಮವಾರ (ಜುಲೈ 14) ಸೇತುವೆ ಉದ್ಘಾಟನೆ ಕಾರ್ಯಕ್ರಮವನ್ನು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ ಆಯೋಜಿಸಿದೆ. ಈ ಕಾರ್ಯಕ್ರಮದಲ್ಲಿ ನಿತಿನ್ ಗಡ್ಕರಿ ಅವರು ಭಾಗಿಯಾಗಲಿದ್ದಾರೆ. </p>.<p>ಇದೇ 11ರಂದು ಪತ್ರ ಬರೆದಿರುವ ಅವರು, ‘ಸಾಧ್ಯವಾದರೆ ಕಾರ್ಯಕ್ರಮ ಮುಂದೂಡಿ. ನಿಮ್ಮ ಅನುಕೂಲದ ದಿನಾಂಕಗಳನ್ನು ತಿಳಿಸಿದರೆ ನಾನೂ ಜತೆಯಾಗುತ್ತೇನೆ’ ಎಂದಿದ್ದಾರೆ.</p>.<p>‘ಇನ್ನು ಮುಂದೆ, ರಾಜ್ಯ ಮಟ್ಟದ ಕಾರ್ಯಕ್ರಮಗಳನ್ನು ಆಯೋಜಿಸುವ ಮುನ್ನ ರಾಜ್ಯ ಸರ್ಕಾರದ ಜತೆಗೆ ನಿಮ್ಮ ಸಚಿವಾಲಯವು ಸಮಾಲೋಚನೆ ನಡೆಸುವುದು ಸಮಂಜಸ. ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುವುದಕ್ಕೂ ಮುನ್ನ ರಾಜ್ಯ ಸರ್ಕಾರದ ಜತೆಗೆ ವ್ಯವಹರಿಸಿ ಎಂದು ನಿಮ್ಮ ಸಚಿವಾಲಯಕ್ಕೆ ನಿರ್ದೇಶನ ನೀಡಿ’ ಎಂದು ಕೋರಿದ್ದಾರೆ.</p>.<p>‘ಅದೇ ದಿನ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನಲ್ಲಿ ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡುವ ಕಾರ್ಯಕ್ರಮ ಇದೆ. ಅಲ್ಲಿ ಪಾಲ್ಗೊಳ್ಳುವುದು ಪೂರ್ವ ನಿಗದಿಯಾಗಿರುವುದರಿಂದ, ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗುತ್ತಿಲ್ಲ’ ಎಂದಿದ್ದಾರೆ.</p>.ಸೇತುವೆ ಲೋಕಾರ್ಪಣೆ ನಿಗದಿಯಂತೆ ನಡೆಯಲಿದೆ: ಸಂಸದ ಬಿ.ವೈ.ರಾಘವೇಂದ್ರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>