<p><strong>ನವದೆಹಲಿ</strong>: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ದೆಹಲಿಯಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾದರು. </p><p>ಇದೇವೇಳೆ, ಮಗ ಯತೀಂದ್ರ ಸಿದ್ದರಾಮಯ್ಯ ಅವರನ್ನು ಜೊತೆಗೇ ಕರೆದೊಯ್ದಿದ್ದ ಅವರು, ರಾಹುಲ್ ಗಾಂಧಿಗೆ ಪರಿಚಯ ಮಾಡಿಕೊಟ್ಟು ಹೊಸ ಸಂಪುಟದಲ್ಲಿ ಅವಕಾಶ ಕಲ್ಪಿಸಲು ಪ್ರಯತ್ನ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.</p><p>ಈ ಭೇಟಿ ವೇಳೆ, ನಿರ್ಗಮಿತ ಇಂಧನ ಸಚಿವ ಕೆ.ಜೆ. ಜಾರ್ಜ್ ಸಹ ಹಾಜರಿದ್ದರು. ತಮ್ಮ ಆಪ್ತರಿಗೂ ಸಂಪುಟದಲ್ಲಿ ಅವಕಾಶ ನೀಡುವಂತೆ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.</p><p>ಮಂಗಳವಾರ, ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸಿದ್ದರಾಮಯ್ಯ ಅವರಿಗೆ ಸೂಚಿಸಿದ್ದ ರಾಹುಲ್ ಗಾಂಧಿ, ಹೊಸ ಸರ್ಕಾರದಲ್ಲಿ ಮಗನಿಗೆ ಅವಕಾಶ ಕಲ್ಪಿಸುವುದಾಗಿ ಭರವಸೆ ನೀಡಿದ್ದರು ಎಂದು ತಿಳಿದು ಬಂದಿದೆ.</p><p>‘ಅದೊಂದು ಉತ್ತಮ ಭೇಟಿಯಾಗಿತ್ತು. ರಾಜಕೀಯದ ಹಲವು ವಿಷಯಗಳ ಬಗ್ಗೆ ಚರ್ಚಿಸಿದ್ದಾರೆ. ಈ ಬಗ್ಗೆ ಹೇಳಲು ಹೆಚ್ಚು ಏನೂ ಇಲ್ಲ’ಎಂದು ಸಿದ್ದರಾಮಯ್ಯ ಮತ್ತು ರಾಹುಲ್ ಭೇಟಿ ಬಳಿಕ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲಾ ಪ್ರತಿಕ್ರಿಯಿಸಿದ್ದಾರೆ.</p><p>ನಿರ್ಗಮಿತ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಜೊತೆ ಸಿದ್ದರಾಮಯ್ಯ ಗುರುವಾರವೇ ವಿಶೇಷ ವಿಮಾನದಲ್ಲಿ ನವದೆಹಲಿಗೆ ತೆರಳಿದ್ದರು.</p> .ಅನ್ನಭಾಗ್ಯ ಯೋಜನೆಗೆ ಸಿದ್ದರಾಮಯ್ಯರನ್ನು ಪ್ರೇರೇಪಿಸಿದ್ದ ಹುಟ್ಟೂರಿನ ಆ ಘಟನೆಗಳು...<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ದೆಹಲಿಯಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾದರು. </p><p>ಇದೇವೇಳೆ, ಮಗ ಯತೀಂದ್ರ ಸಿದ್ದರಾಮಯ್ಯ ಅವರನ್ನು ಜೊತೆಗೇ ಕರೆದೊಯ್ದಿದ್ದ ಅವರು, ರಾಹುಲ್ ಗಾಂಧಿಗೆ ಪರಿಚಯ ಮಾಡಿಕೊಟ್ಟು ಹೊಸ ಸಂಪುಟದಲ್ಲಿ ಅವಕಾಶ ಕಲ್ಪಿಸಲು ಪ್ರಯತ್ನ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.</p><p>ಈ ಭೇಟಿ ವೇಳೆ, ನಿರ್ಗಮಿತ ಇಂಧನ ಸಚಿವ ಕೆ.ಜೆ. ಜಾರ್ಜ್ ಸಹ ಹಾಜರಿದ್ದರು. ತಮ್ಮ ಆಪ್ತರಿಗೂ ಸಂಪುಟದಲ್ಲಿ ಅವಕಾಶ ನೀಡುವಂತೆ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.</p><p>ಮಂಗಳವಾರ, ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸಿದ್ದರಾಮಯ್ಯ ಅವರಿಗೆ ಸೂಚಿಸಿದ್ದ ರಾಹುಲ್ ಗಾಂಧಿ, ಹೊಸ ಸರ್ಕಾರದಲ್ಲಿ ಮಗನಿಗೆ ಅವಕಾಶ ಕಲ್ಪಿಸುವುದಾಗಿ ಭರವಸೆ ನೀಡಿದ್ದರು ಎಂದು ತಿಳಿದು ಬಂದಿದೆ.</p><p>‘ಅದೊಂದು ಉತ್ತಮ ಭೇಟಿಯಾಗಿತ್ತು. ರಾಜಕೀಯದ ಹಲವು ವಿಷಯಗಳ ಬಗ್ಗೆ ಚರ್ಚಿಸಿದ್ದಾರೆ. ಈ ಬಗ್ಗೆ ಹೇಳಲು ಹೆಚ್ಚು ಏನೂ ಇಲ್ಲ’ಎಂದು ಸಿದ್ದರಾಮಯ್ಯ ಮತ್ತು ರಾಹುಲ್ ಭೇಟಿ ಬಳಿಕ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲಾ ಪ್ರತಿಕ್ರಿಯಿಸಿದ್ದಾರೆ.</p><p>ನಿರ್ಗಮಿತ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಜೊತೆ ಸಿದ್ದರಾಮಯ್ಯ ಗುರುವಾರವೇ ವಿಶೇಷ ವಿಮಾನದಲ್ಲಿ ನವದೆಹಲಿಗೆ ತೆರಳಿದ್ದರು.</p> .ಅನ್ನಭಾಗ್ಯ ಯೋಜನೆಗೆ ಸಿದ್ದರಾಮಯ್ಯರನ್ನು ಪ್ರೇರೇಪಿಸಿದ್ದ ಹುಟ್ಟೂರಿನ ಆ ಘಟನೆಗಳು...<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>