ಚಿಕ್ಕೋಡಿ ತಾಲ್ಲೂಕಿನ ಕೇರೂರ ಗ್ರಾಮದಲ್ಲಿ ‘ಆಧ್ಯಾತ್ಮಿಕ ಪ್ರವಚನ ಸೇವಾ ಸಮಿತಿ’ಯಿಂದ ಆಯೋಜಿಸಿದ್ದ ಪ್ರವಚನ ಕಾರ್ಯಕ್ರಮಕ್ಕೆಂದು ಬಂದಿದ್ದ ಅವರು, ಜ.10ರಂದು ತಮಗೆ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಿದ್ದ ಭಕ್ತರೊಬ್ಬರ ತೋಟದ ಮನೆಯಲ್ಲಿ ಜಾರಿ ಬಿದ್ದಿದ್ದರು. ಬಲ ಭುಜ ಹಾಗೂ ತೊಡೆಯ ಮೇಲ್ಭಾಗದ ಮೂಳೆ ಮುರಿತವಾಗಿತ್ತು. ಇದರಿಂದ ಭಕ್ತರು ಆತಂಕಕ್ಕೆ ಒಳಗಾಗಿದ್ದರು.