<p><strong>ಬೆಂಗಳೂರು</strong>: ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಅಂಬಾರಗೋಡ್ಲು–ಕಳಸವಳ್ಳಿ (ಸಿಗಂದೂರು) ನಡುವೆ ಶರಾವತಿ ಹಿನ್ನೀರಿನಲ್ಲಿ ನಿರ್ಮಾಣಗೊಂಡಿರುವ ನೂತನ ಸೇತುವೆ ಇದೇ ಜುಲೈ 14ರಂದು ಲೋಕಾರ್ಪಣೆಯಾಗಲಿದೆ.</p><p>ಸೇತುವೆಯ ಬಗ್ಗೆ ಹಾಗೂ ನಿರ್ಮಾಣದ ಬಗ್ಗೆ ರಾಜ್ಯ ಬಿಜೆಪಿ ಎಕ್ಸ್ ಖಾತೆಯಲ್ಲಿ ವಿಡಿಯೊ ಹಂಚಿಕೊಂಡು ಅತ್ಯಾಧುನಿಕ ಸಿಗಂದೂರು ಕೇಬಲ್ ಸೇತುವೆ ಎಂದು ಹೇಳಿದೆ.</p><p>ಈಗಾಗಲೇ ಸೇತುವೆ ಉದ್ಘಾಟನೆಗೆ ತಯಾರಿ ನಡೆದಿದ್ದು ಸೇತುವೆ ನಿರ್ಮಾಣದ ಕ್ರೆಡಿಟ್ ವಾರ್ ಶಿವಮೊಗ್ಗ ಜಿಲ್ಲೆಯಲ್ಲಿ ಜೋರಾಗಿ ನಡೆದಿದೆ.</p><p>ಸೇತುವೆ ಉದ್ಘಾಟನೆಯ ಸಭಾ ಕಾರ್ಯಕ್ರಮ ಸಾಗರ ನಗರದ ನೆಹರೂ ಮೈದಾನದಲ್ಲಿ ನಡೆಯುವುದು ನಿಶ್ಚಯವಾಗಿದೆ. ಸಂಸದ ಬಿ.ವೈ. ರಾಘವೇಂದ್ರ ಅವರು ಬುಧವಾರ ನೆಹರೂ ಮೈದಾನದಲ್ಲಿ ಸಭಾ ಕಾರ್ಯಕ್ರಮದ ವೇದಿಕೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸುವ ಮೂಲಕ ಸಭೆ ನಡೆಯುವ ಸ್ಥಳವನ್ನು ಅಂತಿಮಗೊಳಿಸಿದ್ದಾರೆ.</p><p>ಕೇಂದ್ರ ಸಚಿವರಾದ ನಿತಿನ್ ಗಡ್ಕರಿ, ಪ್ರಲ್ಹಾದ ಜೋಶಿ ಅವರು ಸಭೆಯಲ್ಲಿ ಭಾಗವಹಿಸುವುದು ಖಚಿತವಾಗಿದ್ದು, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಕೂಡ ಆಗಮಿಸುವ ಸಾಧ್ಯತೆಯಿದೆ.</p><p>ಕೇಂದ್ರ ಸಚಿವರು ಜುಲೈ 14ರಂದು ಬೆಳಿಗ್ಗೆ ಸಿಗಂದೂರು ಕ್ಷೇತ್ರಕ್ಕೆ ತೆರಳಿ ಪೂಜೆ ಸಲ್ಲಿಸಿ ಸೇತುವೆಯನ್ನು ಉದ್ಘಾಟಿಸಿ, ಮಧ್ಯಾಹ್ನ 12ಕ್ಕೆ ಸಭಾ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ ಎನ್ನಲಾಗಿದೆ.</p>.<p><strong>ಸೇತುವೆ ನಿರ್ಮಾಣದ ವಿವರಗಳು</strong></p><p>ಅಂಬಾರಗೋಡ್ಲು ಮತ್ತು ಕಳಸವಳ್ಳಿ (ಸಿಗಂದೂರು) ಸೇತುವೆಯ ವಿವರಗಳು..</p><p>* ಟೆಂಡರ್ ಮೊತ್ತ - ₹473 ಕೋಟಿ<br>* ಕಾಮಗಾರಿ ಪ್ರಾರಂಭವಾದ ದಿನ - 2019ರ ಡಿಸೆಂಬರ್ 12<br>* ಕಾಮಗಾರಿ ಮುಕ್ತಾಯದ ದಿನ- 2025ರ ಜುಲೈ 14<br>* ಕಾಮಗಾರಿ ನಿರ್ವಹಿಸಿದ ಏಜೆನ್ಸಿ - ದಿಲೀಪ್ ಬಿಲ್ಡ್ ಕಾನ್<br>* ಸೇತುವೆಯ ಉದ್ದ - 2125 ಮೀಟರ್<br>* ಸೇತುವೆಯ ಅಗಲ - 16 ಮೀಟರ್ (ಜೊತೆಗೆ ಫುಟ್ಪಾತ್ 2x1.5 ಮೀಟರ್)<br>* ಸಂಪರ್ಕ ರಸ್ತೆ - 1.05 ಕಿ.ಮೀ ನಿಂದ 3 ಕಿ.ಮೀ</p><p>* ತಳಪಾಯ- 164 ಪೈಲ್ಸ್ </p><p>* ಉಕ್ಕಿನ ಕೇಬಲ್ ಉದ್ದ - 740 ಮೀಟರ್ </p><p>* ಕೇಬಲ್ ಎತ್ತರ– 38.50 ಮೀಟರ್</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಅಂಬಾರಗೋಡ್ಲು–ಕಳಸವಳ್ಳಿ (ಸಿಗಂದೂರು) ನಡುವೆ ಶರಾವತಿ ಹಿನ್ನೀರಿನಲ್ಲಿ ನಿರ್ಮಾಣಗೊಂಡಿರುವ ನೂತನ ಸೇತುವೆ ಇದೇ ಜುಲೈ 14ರಂದು ಲೋಕಾರ್ಪಣೆಯಾಗಲಿದೆ.</p><p>ಸೇತುವೆಯ ಬಗ್ಗೆ ಹಾಗೂ ನಿರ್ಮಾಣದ ಬಗ್ಗೆ ರಾಜ್ಯ ಬಿಜೆಪಿ ಎಕ್ಸ್ ಖಾತೆಯಲ್ಲಿ ವಿಡಿಯೊ ಹಂಚಿಕೊಂಡು ಅತ್ಯಾಧುನಿಕ ಸಿಗಂದೂರು ಕೇಬಲ್ ಸೇತುವೆ ಎಂದು ಹೇಳಿದೆ.</p><p>ಈಗಾಗಲೇ ಸೇತುವೆ ಉದ್ಘಾಟನೆಗೆ ತಯಾರಿ ನಡೆದಿದ್ದು ಸೇತುವೆ ನಿರ್ಮಾಣದ ಕ್ರೆಡಿಟ್ ವಾರ್ ಶಿವಮೊಗ್ಗ ಜಿಲ್ಲೆಯಲ್ಲಿ ಜೋರಾಗಿ ನಡೆದಿದೆ.</p><p>ಸೇತುವೆ ಉದ್ಘಾಟನೆಯ ಸಭಾ ಕಾರ್ಯಕ್ರಮ ಸಾಗರ ನಗರದ ನೆಹರೂ ಮೈದಾನದಲ್ಲಿ ನಡೆಯುವುದು ನಿಶ್ಚಯವಾಗಿದೆ. ಸಂಸದ ಬಿ.ವೈ. ರಾಘವೇಂದ್ರ ಅವರು ಬುಧವಾರ ನೆಹರೂ ಮೈದಾನದಲ್ಲಿ ಸಭಾ ಕಾರ್ಯಕ್ರಮದ ವೇದಿಕೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸುವ ಮೂಲಕ ಸಭೆ ನಡೆಯುವ ಸ್ಥಳವನ್ನು ಅಂತಿಮಗೊಳಿಸಿದ್ದಾರೆ.</p><p>ಕೇಂದ್ರ ಸಚಿವರಾದ ನಿತಿನ್ ಗಡ್ಕರಿ, ಪ್ರಲ್ಹಾದ ಜೋಶಿ ಅವರು ಸಭೆಯಲ್ಲಿ ಭಾಗವಹಿಸುವುದು ಖಚಿತವಾಗಿದ್ದು, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಕೂಡ ಆಗಮಿಸುವ ಸಾಧ್ಯತೆಯಿದೆ.</p><p>ಕೇಂದ್ರ ಸಚಿವರು ಜುಲೈ 14ರಂದು ಬೆಳಿಗ್ಗೆ ಸಿಗಂದೂರು ಕ್ಷೇತ್ರಕ್ಕೆ ತೆರಳಿ ಪೂಜೆ ಸಲ್ಲಿಸಿ ಸೇತುವೆಯನ್ನು ಉದ್ಘಾಟಿಸಿ, ಮಧ್ಯಾಹ್ನ 12ಕ್ಕೆ ಸಭಾ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ ಎನ್ನಲಾಗಿದೆ.</p>.<p><strong>ಸೇತುವೆ ನಿರ್ಮಾಣದ ವಿವರಗಳು</strong></p><p>ಅಂಬಾರಗೋಡ್ಲು ಮತ್ತು ಕಳಸವಳ್ಳಿ (ಸಿಗಂದೂರು) ಸೇತುವೆಯ ವಿವರಗಳು..</p><p>* ಟೆಂಡರ್ ಮೊತ್ತ - ₹473 ಕೋಟಿ<br>* ಕಾಮಗಾರಿ ಪ್ರಾರಂಭವಾದ ದಿನ - 2019ರ ಡಿಸೆಂಬರ್ 12<br>* ಕಾಮಗಾರಿ ಮುಕ್ತಾಯದ ದಿನ- 2025ರ ಜುಲೈ 14<br>* ಕಾಮಗಾರಿ ನಿರ್ವಹಿಸಿದ ಏಜೆನ್ಸಿ - ದಿಲೀಪ್ ಬಿಲ್ಡ್ ಕಾನ್<br>* ಸೇತುವೆಯ ಉದ್ದ - 2125 ಮೀಟರ್<br>* ಸೇತುವೆಯ ಅಗಲ - 16 ಮೀಟರ್ (ಜೊತೆಗೆ ಫುಟ್ಪಾತ್ 2x1.5 ಮೀಟರ್)<br>* ಸಂಪರ್ಕ ರಸ್ತೆ - 1.05 ಕಿ.ಮೀ ನಿಂದ 3 ಕಿ.ಮೀ</p><p>* ತಳಪಾಯ- 164 ಪೈಲ್ಸ್ </p><p>* ಉಕ್ಕಿನ ಕೇಬಲ್ ಉದ್ದ - 740 ಮೀಟರ್ </p><p>* ಕೇಬಲ್ ಎತ್ತರ– 38.50 ಮೀಟರ್</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>