ಜೆಡಿಎಸ್ ಪ್ರಧಾನ ಕಚೇರಿ ಜೆ.ಪಿ. ಭವನದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,‘ಸಿಂದಗಿಯಲ್ಲಿ ಎಂ.ಸಿ. ಮನಗೂಳಿ ಅವರಿಗೆ ಅವಕಾಶ ನೀಡಿದ್ದೇ ನಾನು. ಸಂಕಷ್ಟದಲ್ಲೂ ಅವರನ್ನು ಮಂತ್ರಿ ಮಾಡಿದ್ದೆವು. ಮನೆಯ ಮಗನಂತೆ ಬೆಳೆಸಿದ್ದೆ. ಆದರೆ, ಅವರ ಮಗ ಈಗ ಕಾಂಗ್ರೆಸ್ಗೆ ಹೋಗಿದ್ದಾರೆ. ಕಾಂಗ್ರೆಸ್ನವರಿಗೆ ನಮ್ಮ ಅಭ್ಯರ್ಥಿಯೇ ಬೇಕಾ’ ಎಂದು ಕೇಳಿದರು.