<p>ಸಿಂದಗಿ: ನಗರದ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸರ್ಕಾರ ನೂತನ ವಾಹನ ನೀಡಿದೆ. ಈ ಹಿನ್ನೆಲೆಯಲ್ಲಿ ಕಾರ್ಯಾಲಯದ ಆವರಣದಲ್ಲಿ ಬುಧವಾರ ಶಾಸಕ ಅಶೊಕ ಮನಗೂಳಿ ಅವರು ಕುಂಬಳಕಾಯಿ ಒಡೆದು ವಾಹನಕ್ಕೆ ಪೂಜೆ ಸಲ್ಲಿಸಿದರು.</p>.<p>ಶಾಸಕ ಅಶೋಕ ಮನಗೂಳಿ ಮಾತನಾಡಿ, ಹಲವಾರು ವರ್ಷಗಳಿಂದ ತಾಲ್ಲೂಕು ಪಂಚಾಯಿತಿ ಕಾರ್ಯಾಲಯಕ್ಕೆ ಒಂದು ಸರ್ಕಾರ ವಾಹನ ಇರಲಿಲ್ಲ. ವಾಹನ ಖರೀದಿಸಲು ಹಲವು ಅಡಚಣೆಗಳು ಇದ್ದಾಗ್ಯೂ ಮೇಲಧಿಕಾರಿಗಳ ಗಮನಕ್ಕೆ ತಂದು ಸುಗಮ ಆಡಳಿತ ಹಿತದೃಷ್ಠಿಯಿಂದ ತುರ್ತಾಗಿ ವಾಹನ ದೊರಕುವಂತೆ ಕ್ರಮ ಜರುಗಿಸಿದ್ದಾಗಿ ತಿಳಿಸಿದರು.</p>.<p>ದಶಕಗಳಿಂದ ನಮ್ಮ ಕಾರ್ಯಾಲಯಕ್ಕೆ ಸರ್ಕಾರಿ ವಾಹನವಿಲ್ಲದ ಕಾರಣ ಬಾಡಿಗೆ ವಾಹನ ಮೂಲಕ ಕಾರ್ಯ ನಿರ್ವಹಿಸಲಾಗುತ್ತಿತ್ತು. ಆದರೆ, ಈಗ ಶಾಸಕರು ಮುತವರ್ಜಿ ವಹಿಸಿ ಸರ್ಕಾರಿ ವಾಹನ ಸಿಗುವಂತೆ ಮಾಡಿದ್ದಾರೆ ಎಂದು ತಾಲ್ಲೂಕು ಪಂಚಾಯಿತಿ ಇಒ ರಾಮು ಜಿ.ಅಗ್ನಿ ಶಾಸಕರಿಗೆ ಅಭಿನಂದಿಸಿದರು.</p>.<p>ಪುರಸಭೆ ಮಾಜಿ ಉಪಾಧ್ಯಕ್ಷ ಸಂದೀಪ ಚೌರ, ಪಂಚಾಯತ ರಾಜ್ ಸಹಾಯಕ ನಿರ್ದೇಶಕ ಎ.ಎ.ದುರ್ಗದ, ಅಕ್ಷರದಾಸೋಹ ಇಲಾಖೆ ಸಹಾಯಕ ನಿರ್ದೇಶಕ ಅರವಿಂದ ಡೋಣೂರ, ಕಾರ್ಯಾಲಯದ ವ್ಯವಸ್ಥಾಪಕಿ ಎ.ಎಚ್.ಯಾಳಗಿ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260409-26-1663801567</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಿಂದಗಿ: ನಗರದ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸರ್ಕಾರ ನೂತನ ವಾಹನ ನೀಡಿದೆ. ಈ ಹಿನ್ನೆಲೆಯಲ್ಲಿ ಕಾರ್ಯಾಲಯದ ಆವರಣದಲ್ಲಿ ಬುಧವಾರ ಶಾಸಕ ಅಶೊಕ ಮನಗೂಳಿ ಅವರು ಕುಂಬಳಕಾಯಿ ಒಡೆದು ವಾಹನಕ್ಕೆ ಪೂಜೆ ಸಲ್ಲಿಸಿದರು.</p>.<p>ಶಾಸಕ ಅಶೋಕ ಮನಗೂಳಿ ಮಾತನಾಡಿ, ಹಲವಾರು ವರ್ಷಗಳಿಂದ ತಾಲ್ಲೂಕು ಪಂಚಾಯಿತಿ ಕಾರ್ಯಾಲಯಕ್ಕೆ ಒಂದು ಸರ್ಕಾರ ವಾಹನ ಇರಲಿಲ್ಲ. ವಾಹನ ಖರೀದಿಸಲು ಹಲವು ಅಡಚಣೆಗಳು ಇದ್ದಾಗ್ಯೂ ಮೇಲಧಿಕಾರಿಗಳ ಗಮನಕ್ಕೆ ತಂದು ಸುಗಮ ಆಡಳಿತ ಹಿತದೃಷ್ಠಿಯಿಂದ ತುರ್ತಾಗಿ ವಾಹನ ದೊರಕುವಂತೆ ಕ್ರಮ ಜರುಗಿಸಿದ್ದಾಗಿ ತಿಳಿಸಿದರು.</p>.<p>ದಶಕಗಳಿಂದ ನಮ್ಮ ಕಾರ್ಯಾಲಯಕ್ಕೆ ಸರ್ಕಾರಿ ವಾಹನವಿಲ್ಲದ ಕಾರಣ ಬಾಡಿಗೆ ವಾಹನ ಮೂಲಕ ಕಾರ್ಯ ನಿರ್ವಹಿಸಲಾಗುತ್ತಿತ್ತು. ಆದರೆ, ಈಗ ಶಾಸಕರು ಮುತವರ್ಜಿ ವಹಿಸಿ ಸರ್ಕಾರಿ ವಾಹನ ಸಿಗುವಂತೆ ಮಾಡಿದ್ದಾರೆ ಎಂದು ತಾಲ್ಲೂಕು ಪಂಚಾಯಿತಿ ಇಒ ರಾಮು ಜಿ.ಅಗ್ನಿ ಶಾಸಕರಿಗೆ ಅಭಿನಂದಿಸಿದರು.</p>.<p>ಪುರಸಭೆ ಮಾಜಿ ಉಪಾಧ್ಯಕ್ಷ ಸಂದೀಪ ಚೌರ, ಪಂಚಾಯತ ರಾಜ್ ಸಹಾಯಕ ನಿರ್ದೇಶಕ ಎ.ಎ.ದುರ್ಗದ, ಅಕ್ಷರದಾಸೋಹ ಇಲಾಖೆ ಸಹಾಯಕ ನಿರ್ದೇಶಕ ಅರವಿಂದ ಡೋಣೂರ, ಕಾರ್ಯಾಲಯದ ವ್ಯವಸ್ಥಾಪಕಿ ಎ.ಎಚ್.ಯಾಳಗಿ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260409-26-1663801567</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>