<p><strong>ಬೆಂಗಳೂರು:</strong> ಶಿರಾ ಕ್ಷೇತ್ರದಲ್ಲಿ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ತಂತ್ರ ಏನೆಂಬುದು ಗೊತ್ತಾಗಿದೆ. ಪೊಲೀಸರ ಮೂಲಕ ದುಡ್ಡು ಹಂಚುವ ಕೆಲಸ ಮಾಡುತ್ತಿದ್ದಾರೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರು ಆರೋಪಿಸಿದ್ದಾರೆ.</p>.<p>ಪಕ್ಷದ ಕಚೇರಿ ಜೆ.ಪಿ.ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನೇರವಾಗಿ ವಿಜಯೇಂದ್ರ ವಿರುದ್ಧ ಹರಿಹಾಯ್ದರು.</p>.<p>ಶಿರಾದಲ್ಲಿ ಬಿಜೆಪಿಯವರು ಚುನಾವಣೆಗೆ ಯಾವ ತಂತ್ರ ಅನುಸರಿಸಿದ್ದಾರೆ. ಅದರಲ್ಲಿ ವಿಜಯೇಂದ್ರ ಪಾತ್ರ ಏನು ಎಂಬ ವರದಿ ನನ್ನ ಬಳಿ ಇದೆ. ಪೊಲೀಸರ ಮೂಲಕ ಹಣ ಹಂಚಿಸುತ್ತಿದ್ದಾರೆ ಎಂದು ಕೆಲವರು ನನ್ನ ಬಳಿ ಹೇಳಿದ್ದಾರೆ. ಈ ಬಗ್ಗ ದೂರು ನೀಡಿದ್ದರೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ರಾಜ್ಯದಲ್ಲಿ ನಿಷ್ಪಕ್ಷ ಚುನಾವಣೆ ನಡೆಯಲು ಸಾಧ್ಯವಿಲ್ಲ. ದೇಶದಲ್ಲೇ ಹೀಗಿದೆ ಇನ್ನು ರಾಜ್ಯದಲ್ಲಿ ಏನು ಮಾಡಲು ಆಗುತ್ತದೆ ಎಂದು ಪ್ರಶ್ನಿಸಿದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/district/bengaluru-city/rr-nagar-by-election-2020-jds-leader-hd-kumaraswamy-and-siddaramaiah-war-of-words-politics-news-774429.html" itemprop="url">ಸಿದ್ದರಾಮಯ್ಯ ವಿಲನ್: ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ</a></p>.<p>ಈ ಎಲ್ಲ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಪರಿಶೀಲಿಸುತ್ತಿದ್ದೇನೆ. ಇದರ ಬಗ್ಗೆ ಮಾತನಾಡುತ್ತಾ ಕೂತರೆ ಪ್ರಯೋಜನವಿಲ್ಲ ಎಂದು ಸುಮ್ಮನಾಗಿದ್ದೇನೆ ಎಂದರು.</p>.<p>ಶಿರಾದಲ್ಲಿ ಮತ್ತೊಂದು ಸುತ್ತಿನ ಪ್ರಚಾರಕ್ಕೆ ಹೋಗುತ್ತೇನೆ. ನಾವು ಯಾರ ವಿರುದ್ಧ ಚಾಲೆಂಜ್ ಮಾಡಲು ಹೊರಟಿಲ್ಲ. ರಾಜ್ಯದ ಏಳಿಗೆಗಾಗಿ ಕೊನೆವರೆಗೂ ಹೋರಾಟ ಮಾಡುತ್ತೇನೆ. ಪ್ರಾದೇಶಿಕ ಪಕ್ಷವನ್ನು ರಾಜ್ಯದಲ್ಲಿ ಗಟ್ಟಿಯಾಗಿ ಉಳಿಸಲು ಕೊನೆವೆರೆಗೂ ಹೋರಾಡುತ್ತೇನೆ ಎಂದು ದೇವೇಗೌಡ ತಿಳಿಸಿದರು.</p>.<p>ರಾಜ್ಯದಲ್ಲಿ ಜೆಡಿಎಸ್ ಅಸ್ತಿತ್ವದಲ್ಲಿ ಇರುವುದಿಲ್ಲ ಎಂದು ಕೆಲವರು(ಸಿದ್ದರಾಮಯ್ಯ) ಹೇಳ್ತಾರೆ. ಇಂಥ ಹೇಳಿಕೆ ನೀಡುವವರು ಇಲ್ಲಿ ಇದ್ದು ಅಧಿಕಾರ ಅನುಭವಿಸಿ ಹೋಗಿದ್ದಾರೆ. ಅವರ ಹೇಳಿಕೆ ಕೇಳಿ ಬೇಸರ ಆಯ್ತು ಎಂದು ಹೇಳಿದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/district/bengaluru-city/rr-nagar-by-election-2020-congress-siddaramaiah-roadshow-against-bjp-candidate-munirathna-774196.html" itemprop="url" target="_blank">ಮತದಾರರ ಬೆನ್ನಿಗೆ ಚೂರಿ ಹಾಕಿದವರಿಗೆ ಪಾಠ ಕಲಿಸಿ: ಸಿದ್ದರಾಮಯ್ಯ</a></p>.<p>ನಿಖಿಲ್ ಕುಮಾರಸ್ವಾಮಿ ಅವರು ಎಲ್ಲ ಕಡೆ ಪ್ರಚಾರ ಮಾಡಿದ್ದಾರೆ. ಅವರಿಗೆ ಉತ್ತಮ ಬೆಂಬಲ ಸಿಗುತ್ತಾ ಇದೆ. ಶಿರಾ ಮತ್ತು ಆರ್.ಆರ್.ನಗರ ಕ್ಷೇತ್ರದಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದು ದೇವೇಗೌಡ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಶಿರಾ ಕ್ಷೇತ್ರದಲ್ಲಿ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ತಂತ್ರ ಏನೆಂಬುದು ಗೊತ್ತಾಗಿದೆ. ಪೊಲೀಸರ ಮೂಲಕ ದುಡ್ಡು ಹಂಚುವ ಕೆಲಸ ಮಾಡುತ್ತಿದ್ದಾರೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರು ಆರೋಪಿಸಿದ್ದಾರೆ.</p>.<p>ಪಕ್ಷದ ಕಚೇರಿ ಜೆ.ಪಿ.ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನೇರವಾಗಿ ವಿಜಯೇಂದ್ರ ವಿರುದ್ಧ ಹರಿಹಾಯ್ದರು.</p>.<p>ಶಿರಾದಲ್ಲಿ ಬಿಜೆಪಿಯವರು ಚುನಾವಣೆಗೆ ಯಾವ ತಂತ್ರ ಅನುಸರಿಸಿದ್ದಾರೆ. ಅದರಲ್ಲಿ ವಿಜಯೇಂದ್ರ ಪಾತ್ರ ಏನು ಎಂಬ ವರದಿ ನನ್ನ ಬಳಿ ಇದೆ. ಪೊಲೀಸರ ಮೂಲಕ ಹಣ ಹಂಚಿಸುತ್ತಿದ್ದಾರೆ ಎಂದು ಕೆಲವರು ನನ್ನ ಬಳಿ ಹೇಳಿದ್ದಾರೆ. ಈ ಬಗ್ಗ ದೂರು ನೀಡಿದ್ದರೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ರಾಜ್ಯದಲ್ಲಿ ನಿಷ್ಪಕ್ಷ ಚುನಾವಣೆ ನಡೆಯಲು ಸಾಧ್ಯವಿಲ್ಲ. ದೇಶದಲ್ಲೇ ಹೀಗಿದೆ ಇನ್ನು ರಾಜ್ಯದಲ್ಲಿ ಏನು ಮಾಡಲು ಆಗುತ್ತದೆ ಎಂದು ಪ್ರಶ್ನಿಸಿದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/district/bengaluru-city/rr-nagar-by-election-2020-jds-leader-hd-kumaraswamy-and-siddaramaiah-war-of-words-politics-news-774429.html" itemprop="url">ಸಿದ್ದರಾಮಯ್ಯ ವಿಲನ್: ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ</a></p>.<p>ಈ ಎಲ್ಲ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಪರಿಶೀಲಿಸುತ್ತಿದ್ದೇನೆ. ಇದರ ಬಗ್ಗೆ ಮಾತನಾಡುತ್ತಾ ಕೂತರೆ ಪ್ರಯೋಜನವಿಲ್ಲ ಎಂದು ಸುಮ್ಮನಾಗಿದ್ದೇನೆ ಎಂದರು.</p>.<p>ಶಿರಾದಲ್ಲಿ ಮತ್ತೊಂದು ಸುತ್ತಿನ ಪ್ರಚಾರಕ್ಕೆ ಹೋಗುತ್ತೇನೆ. ನಾವು ಯಾರ ವಿರುದ್ಧ ಚಾಲೆಂಜ್ ಮಾಡಲು ಹೊರಟಿಲ್ಲ. ರಾಜ್ಯದ ಏಳಿಗೆಗಾಗಿ ಕೊನೆವರೆಗೂ ಹೋರಾಟ ಮಾಡುತ್ತೇನೆ. ಪ್ರಾದೇಶಿಕ ಪಕ್ಷವನ್ನು ರಾಜ್ಯದಲ್ಲಿ ಗಟ್ಟಿಯಾಗಿ ಉಳಿಸಲು ಕೊನೆವೆರೆಗೂ ಹೋರಾಡುತ್ತೇನೆ ಎಂದು ದೇವೇಗೌಡ ತಿಳಿಸಿದರು.</p>.<p>ರಾಜ್ಯದಲ್ಲಿ ಜೆಡಿಎಸ್ ಅಸ್ತಿತ್ವದಲ್ಲಿ ಇರುವುದಿಲ್ಲ ಎಂದು ಕೆಲವರು(ಸಿದ್ದರಾಮಯ್ಯ) ಹೇಳ್ತಾರೆ. ಇಂಥ ಹೇಳಿಕೆ ನೀಡುವವರು ಇಲ್ಲಿ ಇದ್ದು ಅಧಿಕಾರ ಅನುಭವಿಸಿ ಹೋಗಿದ್ದಾರೆ. ಅವರ ಹೇಳಿಕೆ ಕೇಳಿ ಬೇಸರ ಆಯ್ತು ಎಂದು ಹೇಳಿದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/district/bengaluru-city/rr-nagar-by-election-2020-congress-siddaramaiah-roadshow-against-bjp-candidate-munirathna-774196.html" itemprop="url" target="_blank">ಮತದಾರರ ಬೆನ್ನಿಗೆ ಚೂರಿ ಹಾಕಿದವರಿಗೆ ಪಾಠ ಕಲಿಸಿ: ಸಿದ್ದರಾಮಯ್ಯ</a></p>.<p>ನಿಖಿಲ್ ಕುಮಾರಸ್ವಾಮಿ ಅವರು ಎಲ್ಲ ಕಡೆ ಪ್ರಚಾರ ಮಾಡಿದ್ದಾರೆ. ಅವರಿಗೆ ಉತ್ತಮ ಬೆಂಬಲ ಸಿಗುತ್ತಾ ಇದೆ. ಶಿರಾ ಮತ್ತು ಆರ್.ಆರ್.ನಗರ ಕ್ಷೇತ್ರದಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದು ದೇವೇಗೌಡ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>