ಶಿರಾದಲ್ಲಿ ಬಿಜೆಪಿಯವರು ಚುನಾವಣೆಗೆ ಯಾವ ತಂತ್ರ ಅನುಸರಿಸಿದ್ದಾರೆ. ಅದರಲ್ಲಿ ವಿಜಯೇಂದ್ರ ಪಾತ್ರ ಏನು ಎಂಬ ವರದಿ ನನ್ನ ಬಳಿ ಇದೆ. ಪೊಲೀಸರ ಮೂಲಕ ಹಣ ಹಂಚಿಸುತ್ತಿದ್ದಾರೆ ಎಂದು ಕೆಲವರು ನನ್ನ ಬಳಿ ಹೇಳಿದ್ದಾರೆ. ಈ ಬಗ್ಗ ದೂರು ನೀಡಿದ್ದರೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ರಾಜ್ಯದಲ್ಲಿ ನಿಷ್ಪಕ್ಷ ಚುನಾವಣೆ ನಡೆಯಲು ಸಾಧ್ಯವಿಲ್ಲ. ದೇಶದಲ್ಲೇ ಹೀಗಿದೆ ಇನ್ನು ರಾಜ್ಯದಲ್ಲಿ ಏನು ಮಾಡಲು ಆಗುತ್ತದೆ ಎಂದು ಪ್ರಶ್ನಿಸಿದರು.