<p><strong>ಶಿರಸಿ: </strong>ದೇಶದ ವಿವಿಧ ಭಾಗಗಳಲ್ಲಿ ಬಂಧನಕ್ಕೊಳಗಾಗಿರುವ ಉಗ್ರರ ಜೊತೆ ನಂಟು ಹೊಂದಿರುವ ಆರೋಪದ ಮೇಲೆ ಶಿರಸಿ ತಾಲ್ಲೂಕಿನ ಅರೆಕೊಪ್ಪ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರ ಪುತ್ರನನ್ನು ರಾಷ್ಟ್ರೀಯ ತನಿಖಾ ದಳದ (ಎನ್ಐಎ) ಅಧಿಕಾರಿಗಳು ಶನಿವಾರ ಸಂಜೆ ವಿಚಾರಣೆ ನಡೆಸಿದರು.</p>.<p>ಇತ್ತೀಚೆಗಷ್ಟೇ ಭಯೋತ್ಪಾದನಾ ಚಟುವಟಿಕೆಯಲ್ಲಿ ಭಾಗಿಯಾಗಿರುವ ಸಂಶಯದಲ್ಲಿ 9 ಜನರನ್ನು ಪ್ರತ್ಯೇಕವಾಗಿ ತನಿಖಾ ದಳದವರು ಬಂಧಿಸಿದ್ದರು. ಇವರ ಜೊತೆ ನಂಟು ಹೊಂದಿರುವವರ ವಿಚಾರಣೆ ನಡೆಸಲಾಗುತ್ತಿದೆ. ಅರೆಕೊಪ್ಪದ ಯುವಕನ ಹೆಸರಿನಲ್ಲಿದ್ದ ಸಿಮ್ ಕಾರ್ಡ್ ಭಯೋತ್ಪಾದನಾ ಚಟುವಟಿಕೆಯಲ್ಲಿ ಬಳಕೆಯಾಗಿದೆ ಎನ್ನಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ವಿಚಾರಣೆ ನಡೆದಿದೆ.</p>.<p>ಇಬ್ಬರು ಅಧಿಕಾರಿಗಳನ್ನೊಳಗೊಂಡ ತಂಡವು ಸ್ಥಳೀಯ ಪೊಲೀಸರ ನೆರವಿನೊಂದಿಗೆ ಗ್ರಾಮಕ್ಕೆ ತೆರಳಿ ವಿಚಾರಣೆ ನಡೆಸಿತು.</p>.<p>ಮೂರು ಗಂಟೆಗಳ ಕಾಲ ವಿಚಾರಣೆ ನಡೆಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಆದರೆ ಯುವಕನನ್ನು ವಶಕ್ಕೆ ಪಡೆದಿಲ್ಲ ಎಂಬುದಾಗಿ ಅಧಿಕಾರಿಗಳು ಸ್ಪಷ್ಟಪಡಿಸಿದರು.</p>.<p>‘ತನಿಖಾ ದಳದವರು ವಿಚಾರಣೆ ನಡೆಸಿರುವುದು ನಿಜ. ಆದರೆ ಸ್ಥಳೀಯವಾಗಿ ಯಾವುದೇ ಪ್ರಕರಣ ದಾಖಲಿಸಿಲ್ಲ. ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಅವರು ವಿಚಾರಣೆ ಕೈಗೊಂಡಿರಬಹುದು’ ಎಂದು ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜು ತಿಳಿಸಿದ್ದಾರೆ.</p>.<p>ಕೆಲದಿನಗಳ ಹಿಂದಷ್ಟೇ ರಾಷ್ಟ್ರೀಯ ಗುಪ್ತಚರ ದಳದ ಅಧಿಕಾರಿಗಳ ತಂಡ ಬನವಾಸಿಯ ಯುವಕನನ್ನು ಉಗ್ರರ ಜೊತೆ ನಂಟು ಹೊಂದಿದ್ದ ಸಂಶಯದ ಮೇಲೆ ವಿಚಾರಣೆ ನಡೆಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ: </strong>ದೇಶದ ವಿವಿಧ ಭಾಗಗಳಲ್ಲಿ ಬಂಧನಕ್ಕೊಳಗಾಗಿರುವ ಉಗ್ರರ ಜೊತೆ ನಂಟು ಹೊಂದಿರುವ ಆರೋಪದ ಮೇಲೆ ಶಿರಸಿ ತಾಲ್ಲೂಕಿನ ಅರೆಕೊಪ್ಪ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರ ಪುತ್ರನನ್ನು ರಾಷ್ಟ್ರೀಯ ತನಿಖಾ ದಳದ (ಎನ್ಐಎ) ಅಧಿಕಾರಿಗಳು ಶನಿವಾರ ಸಂಜೆ ವಿಚಾರಣೆ ನಡೆಸಿದರು.</p>.<p>ಇತ್ತೀಚೆಗಷ್ಟೇ ಭಯೋತ್ಪಾದನಾ ಚಟುವಟಿಕೆಯಲ್ಲಿ ಭಾಗಿಯಾಗಿರುವ ಸಂಶಯದಲ್ಲಿ 9 ಜನರನ್ನು ಪ್ರತ್ಯೇಕವಾಗಿ ತನಿಖಾ ದಳದವರು ಬಂಧಿಸಿದ್ದರು. ಇವರ ಜೊತೆ ನಂಟು ಹೊಂದಿರುವವರ ವಿಚಾರಣೆ ನಡೆಸಲಾಗುತ್ತಿದೆ. ಅರೆಕೊಪ್ಪದ ಯುವಕನ ಹೆಸರಿನಲ್ಲಿದ್ದ ಸಿಮ್ ಕಾರ್ಡ್ ಭಯೋತ್ಪಾದನಾ ಚಟುವಟಿಕೆಯಲ್ಲಿ ಬಳಕೆಯಾಗಿದೆ ಎನ್ನಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ವಿಚಾರಣೆ ನಡೆದಿದೆ.</p>.<p>ಇಬ್ಬರು ಅಧಿಕಾರಿಗಳನ್ನೊಳಗೊಂಡ ತಂಡವು ಸ್ಥಳೀಯ ಪೊಲೀಸರ ನೆರವಿನೊಂದಿಗೆ ಗ್ರಾಮಕ್ಕೆ ತೆರಳಿ ವಿಚಾರಣೆ ನಡೆಸಿತು.</p>.<p>ಮೂರು ಗಂಟೆಗಳ ಕಾಲ ವಿಚಾರಣೆ ನಡೆಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಆದರೆ ಯುವಕನನ್ನು ವಶಕ್ಕೆ ಪಡೆದಿಲ್ಲ ಎಂಬುದಾಗಿ ಅಧಿಕಾರಿಗಳು ಸ್ಪಷ್ಟಪಡಿಸಿದರು.</p>.<p>‘ತನಿಖಾ ದಳದವರು ವಿಚಾರಣೆ ನಡೆಸಿರುವುದು ನಿಜ. ಆದರೆ ಸ್ಥಳೀಯವಾಗಿ ಯಾವುದೇ ಪ್ರಕರಣ ದಾಖಲಿಸಿಲ್ಲ. ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಅವರು ವಿಚಾರಣೆ ಕೈಗೊಂಡಿರಬಹುದು’ ಎಂದು ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜು ತಿಳಿಸಿದ್ದಾರೆ.</p>.<p>ಕೆಲದಿನಗಳ ಹಿಂದಷ್ಟೇ ರಾಷ್ಟ್ರೀಯ ಗುಪ್ತಚರ ದಳದ ಅಧಿಕಾರಿಗಳ ತಂಡ ಬನವಾಸಿಯ ಯುವಕನನ್ನು ಉಗ್ರರ ಜೊತೆ ನಂಟು ಹೊಂದಿದ್ದ ಸಂಶಯದ ಮೇಲೆ ವಿಚಾರಣೆ ನಡೆಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>