<p><strong>ಬೆಂಗಳೂರು:</strong> ‘ಎಲ್ಲ ರೀತಿಯ ಸಿರಿಧಾನ್ಯಗಳನ್ನು ಬೆಂಬಲ ಬೆಲೆಯೊಂದಿಗೆ ಖರೀದಿಸಲು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದೇವೆ’ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು.</p>.<p>ಸಾವಯವ ಸಿರಿಧಾನ್ಯ ಅಂತರರಾಷ್ಟ್ರೀಯ ವಾಣಿಜ್ಯ ಮೇಳದ ಸಮಾರೋಪದಲ್ಲಿ ಶನಿವಾರ ಅವರು ಮಾತನಾಡಿದರು.</p>.<p>ಕೃಷಿ ಇಲಾಖೆಯಲ್ಲಿ ಕೃಷಿ ನವೋದ್ಯಮಗಳಿಗೆ ಹೆಚ್ಚಿನ ಪ್ರೋತ್ಸಾಹ, ನೆರವು ನೀಡಲಾಗುತ್ತಿದೆ. ಕೆಪೆಕ್ನಿಂದ ಕೃಷಿ ಉತ್ಪನ್ನಗಳ ರಪ್ತು ಉತ್ತೇಜನಕ್ಕೆ ಕ್ರಮ ವಹಿಸಲಾಗುತ್ತಿದೆ. ಮುಂದಿನ ಯುಗ ಕೃಷಿಕರ ಅಭ್ಯುದಯ ಯುಗವಾಗಬೇಕು. ಇಂಥ ಅವಕಾಶಗಳನ್ನು ಯುವ ಉದ್ಯಮಿಗಳು ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು. </p>.<p>‘ಕೃಷಿ ಉತ್ಪನ್ನಗಳ ಮೌಲ್ಯವರ್ಧಿತ ಉತ್ಪನ್ನಗಳ ತಯಾರಿ, ಮಾರಾಟ, ರಪ್ತು ಉದ್ಯಮದಲ್ಲಿ ಹೆಚ್ಚು ಯುವಕರು ತೊಡಗಿಸಿಕೊಂಡಿರುವುದು ಆಶಾದಾಯಕ ಬೆಳವಣಿಗೆ. ಇದು ಕೃಷಿ ಹಾಗೂ ಕೃಷಿ ಉತ್ಪನ್ನಗಳ ಮೌಲ್ಯವರ್ಧನೆಗೆ ಇರುವ ಉಜ್ವಲ ಭವಿಷ್ಯವನ್ನು ಸೂಚಿಸುತ್ತಿದೆ’ ಎಂದು ಶ್ಲಾಘಿಸಿದರು.</p>.<p>ಶಾಸಕ ಅಶ್ವತ್ಥನಾರಾಯಣ ಮಾತನಾಡಿ, ‘ಕೃಷಿ ಇರಲಿ, ಆರೋಗ್ಯ ಇರಲಿ ಎರಡೂ ಸುಸ್ಥಿರವಾಗಿರಬೇಕು. ಸಿರಿಧಾನ್ಯ ಎರಡಕ್ಕೂ ಪೂರಕವಾಗಿದೆ. ಸಿರಿಧಾನ್ಯ ಬೆಳೆದು ಜೀವನ ಕಟ್ಟಿಕೊಳ್ಳುವಷ್ಟು ಪ್ರೋತ್ಸಾಹ ರೈತರಿಗೆ ಸಿಗಬೇಕು. ಅದಕ್ಕೆ ಬೇಕಾದ ಬೆಂಬಲ ಬೆಲೆ, ಮಾರುಕಟ್ಟೆ ಸಿಗಬೇಕು’ ಎಂದು ಆಶಿಸಿದರು.</p>.<p>‘ನಮ್ಮಲ್ಲಿ ಅಕ್ಕಿಯನ್ನು ಅತಿಹೆಚ್ಚು ಬಳಕೆ ಮಾಡಲಾಗುತ್ತಿದೆ. ಅಕ್ಕಿ ಆರೋಗ್ಯಕ್ಕೆ ಒಳ್ಳೆಯದಲ್ಲ. ರಾಗಿ, ಜೋಳ ಒಳ್ಳೆಯದು ಎಂಬುದನ್ನು ಜನರಿಗೆ ತಿಳಿ ಹೇಳಬೇಕಾದ ಅವಶ್ಯಕತೆ ಇದೆ’ ಎಂದು ಹೇಳಿದರು.</p>.<p>'ಗ್ರಾಮೀಣ ಪಾಕ ಪರಂಪರೆ’, ‘ಉತ್ತರ ಕರ್ನಾಟಕದ ಜನಪ್ರಿಯ ಹಬ್ಬಗಳ ಅಡುಗೆಗಳು ಮತ್ತು ಸಿರಿಧಾನ್ಯ ಖಾದ್ಯಗಳು’, ‘ಬಾಳೆದಿಂಡಿನ ಮೌಲ್ಯವರ್ಧಿತ ಉತ್ಪನ್ನಗಳ ಮಾಹಿತಿ’ ಪುಸ್ತಕಗಳನ್ನು ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡಲಾಯಿತು. ವಿವಿಧ ಜಿಲ್ಲೆಗಳ ಪ್ರಗತಿಪರ ಕೃಷಿಕರನ್ನು, ಉತ್ತಮ ಮಳಿಗೆಯ ಸ್ಪರ್ಧೆಯಲ್ಲಿ ವಿಜೇತರಾದವರನ್ನು ಗೌರವಿಸಲಾಯಿತು.</p>.<p><strong>₹ 185 ಕೋಟಿ ಒಪ್ಪಂದ</strong> </p><p>ಮೂರುದಿನಗಳ ಮೇಳದಲ್ಲಿ 185 ಬಿ2ಬಿ ಸಭೆಗಳಲ್ಲಿ 194 ಉತ್ಪಾದಕರು 105 ಮಾರಾಟ ಸಂಸ್ಥೆಗಳು ಪಾಲ್ಗೊಂಡಿದ್ದವು. ಉತ್ಪಾದನೆಗಳಿಗೆ ಸಂಬಂಧಿಸಿದಂತೆ ₹185.41 ಕೋಟಿ ಒಪ್ಪಂದ ನಡೆದಿದೆ ಎಂದು ಚಲುವರಾಯಸ್ವಾಮಿ ತಿಳಿಸಿದರು. ಮೂರು ದಿನಗಳಲ್ಲಿ 3 ಲಕ್ಷ ಜನರು ಮೇಳಕ್ಕೆ ಭೇಟಿ ನೀಡಿದ್ದಾರೆ. ದೇಶದ 25 ರಾಜ್ಯಗಳಿಂದ ಆಸಕ್ತರು ಭಾಗವಹಿಸಿದ್ದಾರೆ. 10 ದೇಶಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದಾರೆ. ವಿವಿಧ ರಾಜ್ಯಗಳ ಐವರು ಕೃಷಿ ಸಚಿವರು ಭಾಗವಹಿಸಿರುವುದು ದಾಖಲೆ. ಮಳಿಗೆಗಳಲ್ಲಿ ನಿರೀಕ್ಷೆಗೂ ಮೀರಿ ವ್ಯಾಪಾರ ವಹಿವಾಟುಗಳು ನಡೆದಿವೆ ಎಂದು ಬಣ್ಣಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಎಲ್ಲ ರೀತಿಯ ಸಿರಿಧಾನ್ಯಗಳನ್ನು ಬೆಂಬಲ ಬೆಲೆಯೊಂದಿಗೆ ಖರೀದಿಸಲು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದೇವೆ’ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು.</p>.<p>ಸಾವಯವ ಸಿರಿಧಾನ್ಯ ಅಂತರರಾಷ್ಟ್ರೀಯ ವಾಣಿಜ್ಯ ಮೇಳದ ಸಮಾರೋಪದಲ್ಲಿ ಶನಿವಾರ ಅವರು ಮಾತನಾಡಿದರು.</p>.<p>ಕೃಷಿ ಇಲಾಖೆಯಲ್ಲಿ ಕೃಷಿ ನವೋದ್ಯಮಗಳಿಗೆ ಹೆಚ್ಚಿನ ಪ್ರೋತ್ಸಾಹ, ನೆರವು ನೀಡಲಾಗುತ್ತಿದೆ. ಕೆಪೆಕ್ನಿಂದ ಕೃಷಿ ಉತ್ಪನ್ನಗಳ ರಪ್ತು ಉತ್ತೇಜನಕ್ಕೆ ಕ್ರಮ ವಹಿಸಲಾಗುತ್ತಿದೆ. ಮುಂದಿನ ಯುಗ ಕೃಷಿಕರ ಅಭ್ಯುದಯ ಯುಗವಾಗಬೇಕು. ಇಂಥ ಅವಕಾಶಗಳನ್ನು ಯುವ ಉದ್ಯಮಿಗಳು ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು. </p>.<p>‘ಕೃಷಿ ಉತ್ಪನ್ನಗಳ ಮೌಲ್ಯವರ್ಧಿತ ಉತ್ಪನ್ನಗಳ ತಯಾರಿ, ಮಾರಾಟ, ರಪ್ತು ಉದ್ಯಮದಲ್ಲಿ ಹೆಚ್ಚು ಯುವಕರು ತೊಡಗಿಸಿಕೊಂಡಿರುವುದು ಆಶಾದಾಯಕ ಬೆಳವಣಿಗೆ. ಇದು ಕೃಷಿ ಹಾಗೂ ಕೃಷಿ ಉತ್ಪನ್ನಗಳ ಮೌಲ್ಯವರ್ಧನೆಗೆ ಇರುವ ಉಜ್ವಲ ಭವಿಷ್ಯವನ್ನು ಸೂಚಿಸುತ್ತಿದೆ’ ಎಂದು ಶ್ಲಾಘಿಸಿದರು.</p>.<p>ಶಾಸಕ ಅಶ್ವತ್ಥನಾರಾಯಣ ಮಾತನಾಡಿ, ‘ಕೃಷಿ ಇರಲಿ, ಆರೋಗ್ಯ ಇರಲಿ ಎರಡೂ ಸುಸ್ಥಿರವಾಗಿರಬೇಕು. ಸಿರಿಧಾನ್ಯ ಎರಡಕ್ಕೂ ಪೂರಕವಾಗಿದೆ. ಸಿರಿಧಾನ್ಯ ಬೆಳೆದು ಜೀವನ ಕಟ್ಟಿಕೊಳ್ಳುವಷ್ಟು ಪ್ರೋತ್ಸಾಹ ರೈತರಿಗೆ ಸಿಗಬೇಕು. ಅದಕ್ಕೆ ಬೇಕಾದ ಬೆಂಬಲ ಬೆಲೆ, ಮಾರುಕಟ್ಟೆ ಸಿಗಬೇಕು’ ಎಂದು ಆಶಿಸಿದರು.</p>.<p>‘ನಮ್ಮಲ್ಲಿ ಅಕ್ಕಿಯನ್ನು ಅತಿಹೆಚ್ಚು ಬಳಕೆ ಮಾಡಲಾಗುತ್ತಿದೆ. ಅಕ್ಕಿ ಆರೋಗ್ಯಕ್ಕೆ ಒಳ್ಳೆಯದಲ್ಲ. ರಾಗಿ, ಜೋಳ ಒಳ್ಳೆಯದು ಎಂಬುದನ್ನು ಜನರಿಗೆ ತಿಳಿ ಹೇಳಬೇಕಾದ ಅವಶ್ಯಕತೆ ಇದೆ’ ಎಂದು ಹೇಳಿದರು.</p>.<p>'ಗ್ರಾಮೀಣ ಪಾಕ ಪರಂಪರೆ’, ‘ಉತ್ತರ ಕರ್ನಾಟಕದ ಜನಪ್ರಿಯ ಹಬ್ಬಗಳ ಅಡುಗೆಗಳು ಮತ್ತು ಸಿರಿಧಾನ್ಯ ಖಾದ್ಯಗಳು’, ‘ಬಾಳೆದಿಂಡಿನ ಮೌಲ್ಯವರ್ಧಿತ ಉತ್ಪನ್ನಗಳ ಮಾಹಿತಿ’ ಪುಸ್ತಕಗಳನ್ನು ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡಲಾಯಿತು. ವಿವಿಧ ಜಿಲ್ಲೆಗಳ ಪ್ರಗತಿಪರ ಕೃಷಿಕರನ್ನು, ಉತ್ತಮ ಮಳಿಗೆಯ ಸ್ಪರ್ಧೆಯಲ್ಲಿ ವಿಜೇತರಾದವರನ್ನು ಗೌರವಿಸಲಾಯಿತು.</p>.<p><strong>₹ 185 ಕೋಟಿ ಒಪ್ಪಂದ</strong> </p><p>ಮೂರುದಿನಗಳ ಮೇಳದಲ್ಲಿ 185 ಬಿ2ಬಿ ಸಭೆಗಳಲ್ಲಿ 194 ಉತ್ಪಾದಕರು 105 ಮಾರಾಟ ಸಂಸ್ಥೆಗಳು ಪಾಲ್ಗೊಂಡಿದ್ದವು. ಉತ್ಪಾದನೆಗಳಿಗೆ ಸಂಬಂಧಿಸಿದಂತೆ ₹185.41 ಕೋಟಿ ಒಪ್ಪಂದ ನಡೆದಿದೆ ಎಂದು ಚಲುವರಾಯಸ್ವಾಮಿ ತಿಳಿಸಿದರು. ಮೂರು ದಿನಗಳಲ್ಲಿ 3 ಲಕ್ಷ ಜನರು ಮೇಳಕ್ಕೆ ಭೇಟಿ ನೀಡಿದ್ದಾರೆ. ದೇಶದ 25 ರಾಜ್ಯಗಳಿಂದ ಆಸಕ್ತರು ಭಾಗವಹಿಸಿದ್ದಾರೆ. 10 ದೇಶಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದಾರೆ. ವಿವಿಧ ರಾಜ್ಯಗಳ ಐವರು ಕೃಷಿ ಸಚಿವರು ಭಾಗವಹಿಸಿರುವುದು ದಾಖಲೆ. ಮಳಿಗೆಗಳಲ್ಲಿ ನಿರೀಕ್ಷೆಗೂ ಮೀರಿ ವ್ಯಾಪಾರ ವಹಿವಾಟುಗಳು ನಡೆದಿವೆ ಎಂದು ಬಣ್ಣಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>