<p><strong>ಬೆಂಗಳೂರು:</strong> ಠೇವಣಿದಾರರ ₹65 ಕೋಟಿಯನ್ನು ವಂಚಿಸಿದ ಪ್ರಕರಣದಲ್ಲಿ ಸಿರಿವೈಭವ ಸೌಹಾರ್ದ ಪತ್ತಿನ ಸಹಕಾರ ಸೊಸೈಟಿಯ ಅಧ್ಯಕ್ಷೆ ಬಿ.ಎಸ್. ನಾಗವಲ್ಲಿ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿ.ಆರ್. ರಾಜೇಶ್ ದಂಪತಿಗೆ ಸೇರಿದ ₹17 ಕೋಟಿ ಮೊತ್ತದ ಸ್ವತ್ತುಗಳನ್ನು ಜಾರಿ ನಿರ್ದೇಶನಾಲಯವು (ಇ.ಡಿ) ಮುಟ್ಟುಗೋಲು ಹಾಕಿಕೊಂಡಿದೆ.</p>.<p>ನಾಗವಲ್ಲಿ ಮತ್ತು ರಾಜೇಶ್ ಅವರು ಹಲವು ಕಂಪನಿಗಳನ್ನು ಹೊಂದಿದ್ದು, ಯಾವುದೇ ಭದ್ರತೆ ಪಡೆಯದೆ ಸೊಸೈಟಿಯಿಂದ ಆ ಕಂಪನಿಗಳಿಗೆ ಸಾಲ ಮಂಜೂರು ಮಾಡಿದ್ದರು. ಸಾಲ ಮರುಪಾವತಿ ಮಾಡಿರಲಿಲ್ಲ. ಭದ್ರತೆ ಇಲ್ಲದ ಕಾರಣ, ಅಸಲು ಮತ್ತು ಬಡ್ಡಿ ಸೇರಿ ಸೊಸೈಟಿಗೆ ₹65 ಕೋಟಿ ನಷ್ಟವಾಗಿತ್ತು.</p>.<p>ಈ ಬಗ್ಗೆ ಕರ್ನಾಟಕ ರಾಜ್ಯ ಸೌಹಾರ್ದ ಸಹಕಾರ ನಿಗಮದ ವ್ಯವಸ್ಥಾಪಕ ನಿರ್ದೇಶಕರು ನೀಡಿದ್ದ ದೂರಿನ ಆಧಾರದಲ್ಲಿ ಸುಬ್ರಹ್ಮಣ್ಯಪುರ ಪೊಲೀಸರು ಎಫ್ಐಆರ್ ದಾಖಲಿಸಿದ್ದರು. ಅದರ ಆಧಾರದಲ್ಲಿ ಇ.ಡಿ ತನಿಖೆ ಆರಂಭಿಸಿತ್ತು.</p>.<p>ನಾಗವಲ್ಲಿ ಮತ್ತು ರಾಜೇಶ್ ಅವರು ಉದ್ದೇಶಪೂರ್ವಕವಾಗಿ ಭದ್ರತೆ ಒದಗಿಸದೆ ತಮ್ಮದೇ ಕಂಪನಿಗಳಿಗೆ ಸಾಲ ಮಂಜೂರು ಮಾಡಿದ್ದರು ಎಂಬುದು ತನಿಖೆ ವೇಳೆ ಗೊತ್ತಾಯಿತು. ಈ ಅಕ್ರಮ ಗಳಿಕೆಯಿಂದ ಅವರು ಖರೀದಿಸಿದ್ದ 11 ಸ್ಥಿರಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದ್ದೇವೆ. ಬೆಂಗಳೂರು, ರಾಮನಗರ ಮತ್ತು ಮೈಸೂರಿನಲ್ಲಿನ ನಿವೇಶನ, ಕಟ್ಟಡ ಮತ್ತು ಕೃಷಿ ಜಮೀನು ಇದರಲ್ಲಿ ಸೇರಿವೆ ಎಂದು ಇ.ಡಿ ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಠೇವಣಿದಾರರ ₹65 ಕೋಟಿಯನ್ನು ವಂಚಿಸಿದ ಪ್ರಕರಣದಲ್ಲಿ ಸಿರಿವೈಭವ ಸೌಹಾರ್ದ ಪತ್ತಿನ ಸಹಕಾರ ಸೊಸೈಟಿಯ ಅಧ್ಯಕ್ಷೆ ಬಿ.ಎಸ್. ನಾಗವಲ್ಲಿ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿ.ಆರ್. ರಾಜೇಶ್ ದಂಪತಿಗೆ ಸೇರಿದ ₹17 ಕೋಟಿ ಮೊತ್ತದ ಸ್ವತ್ತುಗಳನ್ನು ಜಾರಿ ನಿರ್ದೇಶನಾಲಯವು (ಇ.ಡಿ) ಮುಟ್ಟುಗೋಲು ಹಾಕಿಕೊಂಡಿದೆ.</p>.<p>ನಾಗವಲ್ಲಿ ಮತ್ತು ರಾಜೇಶ್ ಅವರು ಹಲವು ಕಂಪನಿಗಳನ್ನು ಹೊಂದಿದ್ದು, ಯಾವುದೇ ಭದ್ರತೆ ಪಡೆಯದೆ ಸೊಸೈಟಿಯಿಂದ ಆ ಕಂಪನಿಗಳಿಗೆ ಸಾಲ ಮಂಜೂರು ಮಾಡಿದ್ದರು. ಸಾಲ ಮರುಪಾವತಿ ಮಾಡಿರಲಿಲ್ಲ. ಭದ್ರತೆ ಇಲ್ಲದ ಕಾರಣ, ಅಸಲು ಮತ್ತು ಬಡ್ಡಿ ಸೇರಿ ಸೊಸೈಟಿಗೆ ₹65 ಕೋಟಿ ನಷ್ಟವಾಗಿತ್ತು.</p>.<p>ಈ ಬಗ್ಗೆ ಕರ್ನಾಟಕ ರಾಜ್ಯ ಸೌಹಾರ್ದ ಸಹಕಾರ ನಿಗಮದ ವ್ಯವಸ್ಥಾಪಕ ನಿರ್ದೇಶಕರು ನೀಡಿದ್ದ ದೂರಿನ ಆಧಾರದಲ್ಲಿ ಸುಬ್ರಹ್ಮಣ್ಯಪುರ ಪೊಲೀಸರು ಎಫ್ಐಆರ್ ದಾಖಲಿಸಿದ್ದರು. ಅದರ ಆಧಾರದಲ್ಲಿ ಇ.ಡಿ ತನಿಖೆ ಆರಂಭಿಸಿತ್ತು.</p>.<p>ನಾಗವಲ್ಲಿ ಮತ್ತು ರಾಜೇಶ್ ಅವರು ಉದ್ದೇಶಪೂರ್ವಕವಾಗಿ ಭದ್ರತೆ ಒದಗಿಸದೆ ತಮ್ಮದೇ ಕಂಪನಿಗಳಿಗೆ ಸಾಲ ಮಂಜೂರು ಮಾಡಿದ್ದರು ಎಂಬುದು ತನಿಖೆ ವೇಳೆ ಗೊತ್ತಾಯಿತು. ಈ ಅಕ್ರಮ ಗಳಿಕೆಯಿಂದ ಅವರು ಖರೀದಿಸಿದ್ದ 11 ಸ್ಥಿರಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದ್ದೇವೆ. ಬೆಂಗಳೂರು, ರಾಮನಗರ ಮತ್ತು ಮೈಸೂರಿನಲ್ಲಿನ ನಿವೇಶನ, ಕಟ್ಟಡ ಮತ್ತು ಕೃಷಿ ಜಮೀನು ಇದರಲ್ಲಿ ಸೇರಿವೆ ಎಂದು ಇ.ಡಿ ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>