<p><strong>ಸಿರುಗುಪ್ಪ:</strong> ರಾಜ್ಯ ಸರ್ಕಾರವು ಪರಿಶಿಷ್ಟ ಪಂಗಡದ ನಾಯಕ ವಾಲ್ಮೀಕಿ ಸಮಾಜಕ್ಕೆ ಶೇ 7.5 ಮೀಸಲಾತಿಯನ್ನು ಶೇ 9ರ ಶೆಡ್ಯೂಲ್ಗೆ ಸೇರಿಸುವಂತೆ ಅಖಿಲಾಂಡ ಮಹರ್ಷಿ ವಾಲ್ಮೀಕಿ ನಾಯಕ ಸಮಿತಿಯ ಕಲ್ಯಾಣ ಕರ್ನಾಟಕ ವಿಭಾಗದ ರಾಜ್ಯಾಧ್ಯಕ್ಷ ಅಸ್ಕಿಹಾಳ ವೆಂಕಟೇಶ ನಾಯಕ ಒತ್ತಾಯಿಸಿದರು.</p>.<p>ನಗರದ ಪ್ರವಾಸ ಮಂದಿರದಲ್ಲಿ ಸೋಮವಾರ ಹಮ್ಮಿಕೊಂಡ ವಾಲ್ಮೀಕಿ ನಾಯಕ ಸಮಾಜದ ಸಮಾನ ಮನಸ್ಕರ ವೇದಿಕೆಯ ಚಿಂತನ ಮಂತನ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ರಾಜ್ಯ ಸರ್ಕಾರವು ಶೇ 56 ಮೀಸಲಾತಿಯ ಪ್ರಕಾರ ಹೊಸ ಹುದ್ದೆಗಳನ್ನು ನೇಮಕಾತಿ ಮಾಡಬೇಕು. ಸರ್ಕಾರವು ಸರ್ವಪಕ್ಷದ ಪ್ರತಿನಿಧಿಗಳ ಸಭೆ ಕರೆದು ಚರ್ಚಿಸಬೇಕು, ಕೇಂದ್ರ ಸರ್ಕಾರವು ನೀಡಿದಂತೆ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿಯನ್ನು ನಿಗದಿಪಡಿಸಬೇಕು. ಲೋಕಸಭಾ ಭವನದ ಮುಂಭಾಗದಲ್ಲಿ ಆದಿಕವಿ ಭಗವನ ಮಹರ್ಷಿ ವಾಲ್ಮೀಕಿ ಪುತ್ಥಳಿಯನ್ನು ಸ್ಥಾಪಿಸಬೇಕು, ಶೇ 56ರಷ್ಟು ಮೀಸಲಾತಿಯನ್ನು ಜಾರಿಗೊಳಿಸದೆ ಇದ್ದರೆ ಮುಂದಿನ ದಿನಗಳಲ್ಲಿ ಹೋರಾಟ ಮಾಡಲಾಗುವುದು’ ಎಂದರು.</p>.<p>ವಾಲ್ಮೀಕಿ ವಿದ್ಯಾಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ಬಿ.ಎಂ. ಸತೀಶ್ ಮಾತನಾಡಿದರು. ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾದ ತಾಲ್ಲೂಕು ಅಧ್ಯಕ್ಷ ಟಿ. ನರಸಿಂಹ ನಾಯಕ, ಗುರುಮಹರ್ಷಿ ಪದವಿ ಕಾಲೇಜ್ ಪ್ರಾಂಶುಪಾಲ ಬಿ.ಬಸವರಾಜ, ಅತಿಥಿ ಉಪನ್ಯಾಸಕರ ಸಂಘದ ತಾಲ್ಲೂಕು ಅಧ್ಯಕ್ಷ ಹಳೆಕೋಟೆ ರುದ್ರಪ್ಪ, ಕೆ.ಆರ್.ಎಸ್. ಪಕ್ಷದ ತಾಲ್ಲೂಕು ಸಂಚಾಲಕ ಹಳೆಕೋಟೆ ಯಲ್ಲಪ್ಪ, ಮುಖಂಡರಾದ ನಾಡಂಗದ ವೆಂಕೊಬ, ಕುಡುದರಹಾಳ ವೆಂಕಟೇಶ, ಬಾಗೇವಾಡಿ ಮುದುಕಪ್ಪ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿರುಗುಪ್ಪ:</strong> ರಾಜ್ಯ ಸರ್ಕಾರವು ಪರಿಶಿಷ್ಟ ಪಂಗಡದ ನಾಯಕ ವಾಲ್ಮೀಕಿ ಸಮಾಜಕ್ಕೆ ಶೇ 7.5 ಮೀಸಲಾತಿಯನ್ನು ಶೇ 9ರ ಶೆಡ್ಯೂಲ್ಗೆ ಸೇರಿಸುವಂತೆ ಅಖಿಲಾಂಡ ಮಹರ್ಷಿ ವಾಲ್ಮೀಕಿ ನಾಯಕ ಸಮಿತಿಯ ಕಲ್ಯಾಣ ಕರ್ನಾಟಕ ವಿಭಾಗದ ರಾಜ್ಯಾಧ್ಯಕ್ಷ ಅಸ್ಕಿಹಾಳ ವೆಂಕಟೇಶ ನಾಯಕ ಒತ್ತಾಯಿಸಿದರು.</p>.<p>ನಗರದ ಪ್ರವಾಸ ಮಂದಿರದಲ್ಲಿ ಸೋಮವಾರ ಹಮ್ಮಿಕೊಂಡ ವಾಲ್ಮೀಕಿ ನಾಯಕ ಸಮಾಜದ ಸಮಾನ ಮನಸ್ಕರ ವೇದಿಕೆಯ ಚಿಂತನ ಮಂತನ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ರಾಜ್ಯ ಸರ್ಕಾರವು ಶೇ 56 ಮೀಸಲಾತಿಯ ಪ್ರಕಾರ ಹೊಸ ಹುದ್ದೆಗಳನ್ನು ನೇಮಕಾತಿ ಮಾಡಬೇಕು. ಸರ್ಕಾರವು ಸರ್ವಪಕ್ಷದ ಪ್ರತಿನಿಧಿಗಳ ಸಭೆ ಕರೆದು ಚರ್ಚಿಸಬೇಕು, ಕೇಂದ್ರ ಸರ್ಕಾರವು ನೀಡಿದಂತೆ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿಯನ್ನು ನಿಗದಿಪಡಿಸಬೇಕು. ಲೋಕಸಭಾ ಭವನದ ಮುಂಭಾಗದಲ್ಲಿ ಆದಿಕವಿ ಭಗವನ ಮಹರ್ಷಿ ವಾಲ್ಮೀಕಿ ಪುತ್ಥಳಿಯನ್ನು ಸ್ಥಾಪಿಸಬೇಕು, ಶೇ 56ರಷ್ಟು ಮೀಸಲಾತಿಯನ್ನು ಜಾರಿಗೊಳಿಸದೆ ಇದ್ದರೆ ಮುಂದಿನ ದಿನಗಳಲ್ಲಿ ಹೋರಾಟ ಮಾಡಲಾಗುವುದು’ ಎಂದರು.</p>.<p>ವಾಲ್ಮೀಕಿ ವಿದ್ಯಾಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ಬಿ.ಎಂ. ಸತೀಶ್ ಮಾತನಾಡಿದರು. ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾದ ತಾಲ್ಲೂಕು ಅಧ್ಯಕ್ಷ ಟಿ. ನರಸಿಂಹ ನಾಯಕ, ಗುರುಮಹರ್ಷಿ ಪದವಿ ಕಾಲೇಜ್ ಪ್ರಾಂಶುಪಾಲ ಬಿ.ಬಸವರಾಜ, ಅತಿಥಿ ಉಪನ್ಯಾಸಕರ ಸಂಘದ ತಾಲ್ಲೂಕು ಅಧ್ಯಕ್ಷ ಹಳೆಕೋಟೆ ರುದ್ರಪ್ಪ, ಕೆ.ಆರ್.ಎಸ್. ಪಕ್ಷದ ತಾಲ್ಲೂಕು ಸಂಚಾಲಕ ಹಳೆಕೋಟೆ ಯಲ್ಲಪ್ಪ, ಮುಖಂಡರಾದ ನಾಡಂಗದ ವೆಂಕೊಬ, ಕುಡುದರಹಾಳ ವೆಂಕಟೇಶ, ಬಾಗೇವಾಡಿ ಮುದುಕಪ್ಪ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>