‘ಬೆಳಿಗ್ಗೆಯೇ ಸಿಂದಗಿಯಲ್ಲಿರುವ ಸುನೀಲ ಮನೆಗೆ ಬಂದಿದ್ದ ಅಧಿಕಾರಿಗಳ ತಂಡ, ಆತನನ್ನು ವಿಚಾರಣೆಗೆ ವಿಜಯಪುರಕ್ಕೆ ಕರೆದುಕೊಂಡು ಹೊರಟಿತು. ಈ ಸಂದರ್ಭ ಮಗನ ಜತೆ, ಸುನೀಲ ತಂದೆ ಮಡಿವಾಳಪ್ಪ ಅಗಸರ ಸಹ ಹೋದರು. ಸುದೀರ್ಘ ವಿಚಾರಣೆ ಬಳಿಕ ತಂದೆ–ಮಗ ರಾತ್ರಿ 7.45ರ ವೇಳೆಗೆ ಮನೆಗೆ ಮರಳಿದ್ದಾರೆ’ ಎಂದು ಸ್ಥಳೀಯರೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.