<p><strong>ವಿಜಯಪುರ:</strong>ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಂದಗಿಯ ಶ್ರೀರಾಮಸೇನೆಯ ಕಾರ್ಯಕರ್ತ ಸುನೀಲ ಅಗಸರನನ್ನು ಎಸ್ಐಟಿ ಪೊಲೀಸರು, ಶನಿವಾರ ನಗರದ ಪ್ರವಾಸಿ ಮಂದಿರದಲ್ಲಿ ವಿಚಾರಣೆಗೊಳಪಡಿಸಿದರು ಎಂಬುದು ತಿಳಿದು ಬಂದಿದೆ.</p>.<p>ಪ್ರಕರಣದ ಪ್ರಮುಖ ಆರೋಪಿ ಪರಶುರಾಮ ವಾಘ್ಮೋರೆ, ಸುನೀಲ ಅಗಸರ ಸ್ನೇಹಿತರು. ಈ ಹಿಂದೆ, ಎಸ್ಐಟಿ ಪೊಲೀಸರು ಸತತ ಐದು ದಿನ ಸುನೀಲನನ್ನು ವಿಚಾರಣೆಗೊಳಪಡಿಸಿದ್ದರು.</p>.<p>‘ಬೆಳಿಗ್ಗೆಯೇ ಸಿಂದಗಿಯಲ್ಲಿರುವ ಸುನೀಲ ಮನೆಗೆ ಬಂದಿದ್ದ ಅಧಿಕಾರಿಗಳ ತಂಡ, ಆತನನ್ನು ವಿಚಾರಣೆಗೆ ವಿಜಯಪುರಕ್ಕೆ ಕರೆದುಕೊಂಡು ಹೊರಟಿತು. ಈ ಸಂದರ್ಭ ಮಗನ ಜತೆ, ಸುನೀಲ ತಂದೆ ಮಡಿವಾಳಪ್ಪ ಅಗಸರ ಸಹ ಹೋದರು. ಸುದೀರ್ಘ ವಿಚಾರಣೆ ಬಳಿಕ ತಂದೆ–ಮಗ ರಾತ್ರಿ 7.45ರ ವೇಳೆಗೆ ಮನೆಗೆ ಮರಳಿದ್ದಾರೆ’ ಎಂದು ಸ್ಥಳೀಯರೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಮಾಧ್ಯಮದವರಿಗೆ ಯಾವುದೇ ಹೇಳಿಕೆ ನೀಡಬಾರದು’ ಎಂದು ಎಸ್ಐಟಿ ಅಧಿಕಾರಿಗಳ ತಂಡ, ಸುನೀಲಗೆ ಖಡಕ್ ಎಚ್ಚರಿಕೆ ನೀಡಿದ್ದರಿಂದ ತನ್ನ ಸೋದರ ಮಾವನ ಜತೆ, ಅಗಸರ ಅಜ್ಞಾತ ಸ್ಥಳಕ್ಕೆ ತೆರಳಿದ್ದಾನೆ ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong>ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಂದಗಿಯ ಶ್ರೀರಾಮಸೇನೆಯ ಕಾರ್ಯಕರ್ತ ಸುನೀಲ ಅಗಸರನನ್ನು ಎಸ್ಐಟಿ ಪೊಲೀಸರು, ಶನಿವಾರ ನಗರದ ಪ್ರವಾಸಿ ಮಂದಿರದಲ್ಲಿ ವಿಚಾರಣೆಗೊಳಪಡಿಸಿದರು ಎಂಬುದು ತಿಳಿದು ಬಂದಿದೆ.</p>.<p>ಪ್ರಕರಣದ ಪ್ರಮುಖ ಆರೋಪಿ ಪರಶುರಾಮ ವಾಘ್ಮೋರೆ, ಸುನೀಲ ಅಗಸರ ಸ್ನೇಹಿತರು. ಈ ಹಿಂದೆ, ಎಸ್ಐಟಿ ಪೊಲೀಸರು ಸತತ ಐದು ದಿನ ಸುನೀಲನನ್ನು ವಿಚಾರಣೆಗೊಳಪಡಿಸಿದ್ದರು.</p>.<p>‘ಬೆಳಿಗ್ಗೆಯೇ ಸಿಂದಗಿಯಲ್ಲಿರುವ ಸುನೀಲ ಮನೆಗೆ ಬಂದಿದ್ದ ಅಧಿಕಾರಿಗಳ ತಂಡ, ಆತನನ್ನು ವಿಚಾರಣೆಗೆ ವಿಜಯಪುರಕ್ಕೆ ಕರೆದುಕೊಂಡು ಹೊರಟಿತು. ಈ ಸಂದರ್ಭ ಮಗನ ಜತೆ, ಸುನೀಲ ತಂದೆ ಮಡಿವಾಳಪ್ಪ ಅಗಸರ ಸಹ ಹೋದರು. ಸುದೀರ್ಘ ವಿಚಾರಣೆ ಬಳಿಕ ತಂದೆ–ಮಗ ರಾತ್ರಿ 7.45ರ ವೇಳೆಗೆ ಮನೆಗೆ ಮರಳಿದ್ದಾರೆ’ ಎಂದು ಸ್ಥಳೀಯರೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಮಾಧ್ಯಮದವರಿಗೆ ಯಾವುದೇ ಹೇಳಿಕೆ ನೀಡಬಾರದು’ ಎಂದು ಎಸ್ಐಟಿ ಅಧಿಕಾರಿಗಳ ತಂಡ, ಸುನೀಲಗೆ ಖಡಕ್ ಎಚ್ಚರಿಕೆ ನೀಡಿದ್ದರಿಂದ ತನ್ನ ಸೋದರ ಮಾವನ ಜತೆ, ಅಗಸರ ಅಜ್ಞಾತ ಸ್ಥಳಕ್ಕೆ ತೆರಳಿದ್ದಾನೆ ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>