<p><strong>ಬೆಂಗಳೂರು:</strong> ‘ಧರ್ಮಸ್ಥಳದ ವಿಚಾರದಲ್ಲಿ ಎಸ್ಐಟಿ ರಚಿಸಲು ಒತ್ತಡ ಹಾಕಿದವರು ಯಾರು ಎನ್ನುವುದನ್ನು ಬಹಿರಂಗಪಡಿಸಬೇಕು. ಭಕ್ತರ ಭಾವನೆಗಳಿಗೆ ಧಕ್ಕೆ ತಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಜನರ ಕ್ಷಮೆಯಾಚಿಸಬೇಕು’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದರು.</p>.<p>ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಯಾವ ಮಾತಿನಂತೆ ಮುಖ್ಯಮಂತ್ರಿ ಇಂಥ ದೊಡ್ಡ ನಿರ್ಧಾರ ಪ್ರಕಟಿಸಿದರು? ಎಸ್ಐಟಿ ರಚನೆ ಆದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಎಷ್ಟು ಅಪಪ್ರಚಾರ ನಡೆದಿದೆ ಎನ್ನುವ ಕುರಿತು ಮುಖ್ಯಮಂತ್ರಿ ಉತ್ತರ ನೀಡಬೇಕು’ ಎಂದು ಆಗ್ರಹಿಸಿದರು.</p>.<p>‘ಧರ್ಮಸ್ಥಳದ ವಿರುದ್ಧ ಪಿತೂರಿ ನಡೆಸಿದ ತಂಡವು ಎಸ್ಐಟಿ ರಚಿಸಲು ಕೋರಿ ಅರ್ಜಿ ಹಾಕಿದ್ದಾಗಿ ಕೋರ್ಟ್ಗೆ ಅನಿಸಿತ್ತು. ಇದರ ಹಿಂದೆ ಸಾರ್ವಜನಿಕ ಹಿತಾಸಕ್ತಿ ಅಡಗಿಲ್ಲ, ವೈಯಕ್ತಿಕ ಹಿತಾಸಕ್ತಿ ಇದರ ಹಿಂದಿದೆ ಎಂದು ಸುಪ್ರೀಂಕೋರ್ಟ್ ಮೇ ತಿಂಗಳಿನಲ್ಲೇ ಹೇಳಿತ್ತು. ಈ ವಿಷಯ ಮುಚ್ಚಿಟ್ಟು ಎಸ್ಐಟಿ ರಚನೆಗೆ ಸರ್ಕಾರದ ಮೇಲೆ ಒತ್ತಡ ಹಾಕಿದ್ದರು’ ಎಂದು ವಿಜಯೇಂದ್ರ ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಧರ್ಮಸ್ಥಳದ ವಿಚಾರದಲ್ಲಿ ಎಸ್ಐಟಿ ರಚಿಸಲು ಒತ್ತಡ ಹಾಕಿದವರು ಯಾರು ಎನ್ನುವುದನ್ನು ಬಹಿರಂಗಪಡಿಸಬೇಕು. ಭಕ್ತರ ಭಾವನೆಗಳಿಗೆ ಧಕ್ಕೆ ತಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಜನರ ಕ್ಷಮೆಯಾಚಿಸಬೇಕು’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದರು.</p>.<p>ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಯಾವ ಮಾತಿನಂತೆ ಮುಖ್ಯಮಂತ್ರಿ ಇಂಥ ದೊಡ್ಡ ನಿರ್ಧಾರ ಪ್ರಕಟಿಸಿದರು? ಎಸ್ಐಟಿ ರಚನೆ ಆದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಎಷ್ಟು ಅಪಪ್ರಚಾರ ನಡೆದಿದೆ ಎನ್ನುವ ಕುರಿತು ಮುಖ್ಯಮಂತ್ರಿ ಉತ್ತರ ನೀಡಬೇಕು’ ಎಂದು ಆಗ್ರಹಿಸಿದರು.</p>.<p>‘ಧರ್ಮಸ್ಥಳದ ವಿರುದ್ಧ ಪಿತೂರಿ ನಡೆಸಿದ ತಂಡವು ಎಸ್ಐಟಿ ರಚಿಸಲು ಕೋರಿ ಅರ್ಜಿ ಹಾಕಿದ್ದಾಗಿ ಕೋರ್ಟ್ಗೆ ಅನಿಸಿತ್ತು. ಇದರ ಹಿಂದೆ ಸಾರ್ವಜನಿಕ ಹಿತಾಸಕ್ತಿ ಅಡಗಿಲ್ಲ, ವೈಯಕ್ತಿಕ ಹಿತಾಸಕ್ತಿ ಇದರ ಹಿಂದಿದೆ ಎಂದು ಸುಪ್ರೀಂಕೋರ್ಟ್ ಮೇ ತಿಂಗಳಿನಲ್ಲೇ ಹೇಳಿತ್ತು. ಈ ವಿಷಯ ಮುಚ್ಚಿಟ್ಟು ಎಸ್ಐಟಿ ರಚನೆಗೆ ಸರ್ಕಾರದ ಮೇಲೆ ಒತ್ತಡ ಹಾಕಿದ್ದರು’ ಎಂದು ವಿಜಯೇಂದ್ರ ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>