<p><strong>ಮಂಗಳೂರು:</strong> ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ ನಡೆದಿವೆ ಎನ್ನಲಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದ ಮೃತದೇಹಗಳನ್ನು ಹೂತುಹಾಕಿದ ಪ್ರಕರಣದ (ಸಂಖ್ಯೆ 39/2025 ) ಸಾಕ್ಷಿ ದೂರುದಾರ ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಸಮೀಪದಲ್ಲಿ ಮೃತದೇಹಗಳನ್ನು ಹೂತು ಹಾಕಿದ ಜಾಗವನ್ನು ವಿಶೇಷ ತನಿಖಾ ತಂಡದ (ಎಸ್ಐಟಿ) ಅಧಿಕಾರಿಗಳಿಗೆ ಸೋಮವಾರ ತೋರಿಸಿದರು.</p><p>ಮುಖಕ್ಕೆ ಮುಸುಕು ಹಾಕಿದ್ದ ಸಾಕ್ಷಿ ದೂರುದಾರನನ್ನು ಬಿಗು ಪೋಲೀಸ್ ಭದ್ರತೆಯೊಂದಿಗೆ ಎಸ್ಐಟಿ ಅಧಿಕಾರಿಗಳು ನೇತ್ರಾವತಿ ಸ್ನಾನ ಘಟ್ಟದ ಬಳಿಗೆ ಕರೆತಂದರು.</p><p>ಇಲ್ಲಿ ನೇತ್ರಾವತಿ ನದಿ ಪಕ್ಕದಲ್ಲೇ ಇರುವ ಕಾಡಿನೊಳಗೆ ಎಸ್ಐಟಿ ಅಧಿಕಾರಿಗಳನ್ನು ಸಾಕ್ಷಿ ದೂರುದಾರ ಕರೆದೊಯ್ದು. ಆತನ ಜೊತೆಗೆ ಮೂವರು ವಕೀಲರೂ ಸ್ಥಳಕ್ಕೆ ತೆರಳಿದರು.</p>.<p>ಸಾಕ್ಷಿ ದೂರುದಾರನನ್ನು ಮಂಗಳೂರಿನ ಮಲ್ಲಿಕಟ್ಟೆಯ ಪ್ರವಾಸಿ ಬಂಗಲೆಯಲ್ಲಿ ಎಸ್ಐಟಿ ಅಧಿಕಾರಿಗಳು ಶನಿವಾರ ಮತ್ತು ಭಾನುವಾರ ವಿಚಾರಣೆಗೆ ಒಳಪಡಿಸಿದ್ದರು. ಸೋಮವಾರ ಎಸ್ಐಟಿ ಎದುರು ಹಾಜರಾದ ಆತನನ್ನು ಬೆಳ್ತಂಗಡಿಯ ಎಸ್ಐಟಿ ಕಚೇರಿಗೆ ಕರೆದೊಯ್ದರು. ಬಳಿಕ ಅಲ್ಲಿಂದ ನೇತ್ರಾವತಿ ಸ್ನಾನಘಟ್ಟಕ್ಕೆ ಬಿಗು ಭದ್ರತೆಯೊಂದಿಗೆ ಕರೆದೊಯ್ದರು.</p>.<p>ಎಸ್ಐಟಿಯ ಅಧಿಕಾರಿಗಳಾದ ಎಂ.ಎನ್.ಅನುಚೇತ್, ಜಿತೇಂದ್ರ ಕುಮಾರ್ ದಯಾಮ, ಸಿ.ಎ.ಸೈಮನ್ ಮೊದಲಾದ ಅಧಿಕಾರಿಗಳು ಇದ್ದರು.</p><p>ಎಸ್ಐಟಿ ಮುಖ್ಯಸ್ಥರಾಗಿರುವ ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾನಿರ್ದೇಶಕ ಪ್ರಣವ್ ಮೊಹಾಂತಿ ಅವರು ಮಂಗಳೂರಿಗೆ ಭಾನುವಾರ ಭೇಟಿ ನೀಡಿ ತನಿಖೆಯ ಬಗ್ಗೆ ಎಸ್ಐಟಿ ಅಧಿಕಾರಿಗಳಿಗೆ ಮಾರ್ಗದರ್ಶನ ಮಾಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ ನಡೆದಿವೆ ಎನ್ನಲಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದ ಮೃತದೇಹಗಳನ್ನು ಹೂತುಹಾಕಿದ ಪ್ರಕರಣದ (ಸಂಖ್ಯೆ 39/2025 ) ಸಾಕ್ಷಿ ದೂರುದಾರ ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಸಮೀಪದಲ್ಲಿ ಮೃತದೇಹಗಳನ್ನು ಹೂತು ಹಾಕಿದ ಜಾಗವನ್ನು ವಿಶೇಷ ತನಿಖಾ ತಂಡದ (ಎಸ್ಐಟಿ) ಅಧಿಕಾರಿಗಳಿಗೆ ಸೋಮವಾರ ತೋರಿಸಿದರು.</p><p>ಮುಖಕ್ಕೆ ಮುಸುಕು ಹಾಕಿದ್ದ ಸಾಕ್ಷಿ ದೂರುದಾರನನ್ನು ಬಿಗು ಪೋಲೀಸ್ ಭದ್ರತೆಯೊಂದಿಗೆ ಎಸ್ಐಟಿ ಅಧಿಕಾರಿಗಳು ನೇತ್ರಾವತಿ ಸ್ನಾನ ಘಟ್ಟದ ಬಳಿಗೆ ಕರೆತಂದರು.</p><p>ಇಲ್ಲಿ ನೇತ್ರಾವತಿ ನದಿ ಪಕ್ಕದಲ್ಲೇ ಇರುವ ಕಾಡಿನೊಳಗೆ ಎಸ್ಐಟಿ ಅಧಿಕಾರಿಗಳನ್ನು ಸಾಕ್ಷಿ ದೂರುದಾರ ಕರೆದೊಯ್ದು. ಆತನ ಜೊತೆಗೆ ಮೂವರು ವಕೀಲರೂ ಸ್ಥಳಕ್ಕೆ ತೆರಳಿದರು.</p>.<p>ಸಾಕ್ಷಿ ದೂರುದಾರನನ್ನು ಮಂಗಳೂರಿನ ಮಲ್ಲಿಕಟ್ಟೆಯ ಪ್ರವಾಸಿ ಬಂಗಲೆಯಲ್ಲಿ ಎಸ್ಐಟಿ ಅಧಿಕಾರಿಗಳು ಶನಿವಾರ ಮತ್ತು ಭಾನುವಾರ ವಿಚಾರಣೆಗೆ ಒಳಪಡಿಸಿದ್ದರು. ಸೋಮವಾರ ಎಸ್ಐಟಿ ಎದುರು ಹಾಜರಾದ ಆತನನ್ನು ಬೆಳ್ತಂಗಡಿಯ ಎಸ್ಐಟಿ ಕಚೇರಿಗೆ ಕರೆದೊಯ್ದರು. ಬಳಿಕ ಅಲ್ಲಿಂದ ನೇತ್ರಾವತಿ ಸ್ನಾನಘಟ್ಟಕ್ಕೆ ಬಿಗು ಭದ್ರತೆಯೊಂದಿಗೆ ಕರೆದೊಯ್ದರು.</p>.<p>ಎಸ್ಐಟಿಯ ಅಧಿಕಾರಿಗಳಾದ ಎಂ.ಎನ್.ಅನುಚೇತ್, ಜಿತೇಂದ್ರ ಕುಮಾರ್ ದಯಾಮ, ಸಿ.ಎ.ಸೈಮನ್ ಮೊದಲಾದ ಅಧಿಕಾರಿಗಳು ಇದ್ದರು.</p><p>ಎಸ್ಐಟಿ ಮುಖ್ಯಸ್ಥರಾಗಿರುವ ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾನಿರ್ದೇಶಕ ಪ್ರಣವ್ ಮೊಹಾಂತಿ ಅವರು ಮಂಗಳೂರಿಗೆ ಭಾನುವಾರ ಭೇಟಿ ನೀಡಿ ತನಿಖೆಯ ಬಗ್ಗೆ ಎಸ್ಐಟಿ ಅಧಿಕಾರಿಗಳಿಗೆ ಮಾರ್ಗದರ್ಶನ ಮಾಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>