<p><strong>ಬೆಂಗಳೂರು</strong>: ರಾಜ್ಯಪಾಲರ ಅಂಗೀಕಾರಕ್ಕೆ ಕಳಿಸಿದ್ದ 19 ಮಸೂದೆಗಳಲ್ಲಿ ಒಟ್ಟು ಆರು ಮಸೂದೆಗಳು ಅವರ ಬಳಿಯೇ ಉಳಿದಿದ್ದು, ತಾಂತ್ರಿಕ ಕಾರಣಗಳಿಗಾಗಿ ಉಳಿದಿವೆ ಎಂದು ಕಾನೂನು ಮತ್ತು ಸಂಸದೀಯ ಸಚಿವ ಎಚ್.ಕೆ.ಪಾಟೀಲ ಹೇಳಿದರು.</p>.<p>‘ಮುಖ್ಯವಾಗಿ, ಯಲ್ಲಮ್ಮನಗುಡ್ಡ ಅಭಿವೃದ್ಧಿ ಮಂಡಳಿ, ಬಾಂಬೆ ಪಬ್ಲಿಕ್ ಟ್ರಸ್ಟ್ ಕಾಯ್ದೆಯ ಮಸೂದೆಗಳೂ ಇವೆ. ಕೆಲವು ವಿವರಗಳನ್ನು ಅವರು ಕೇಳಿದ್ದು, ಅವುಗಳಿಗೆ ಸೂಕ್ತ ಮಾಹಿತಿ ಒದಗಿಸಲಾಗಿದೆ. ಈ ಸಂಬಂಧ ನಮ್ಮ ಇಲಾಖೆ ಮತ್ತು ರಾಜಭವನದ ನಡುವೆ ಪತ್ರ ವ್ಯವಹಾರ ನಡೆಯುತ್ತಿದೆ’ ಎಂದು ತಿಳಿಸಿದರು.</p>.<p>ಕರ್ನಾಟಕ ಹೈಕೋರ್ಟ್ (ತಿದ್ದುಪಡಿ) ಮಸೂದೆ 2023 ಅನ್ನು ಸಚಿವ ಸಂಪುಟದಲ್ಲಿ ಒಪ್ಪಿಗೆ ಪಡೆಯದೇ ವಿಧಾನಮಂಡಲದ ಅಧಿವೇಶನದಲ್ಲಿ ಮಂಡಿಸುವ ಅಗತ್ಯ ಏನಿತ್ತು ಎಂಬುದನ್ನು ಉಲ್ಲೇಖಿಸಿಲ್ಲ. ಆ ಬಗ್ಗೆ ಸ್ಪಷ್ಟನೆ ನೀಡಬೇಕು ಎಂದು ರಾಜ್ಯಪಾಲರು ಸೂಚಿಸಿದ್ದಾರೆ ಎಂದು ಮೂಲಗಳು ಹೇಳಿವೆ.</p>.<p>ಅಲ್ಲದೇ, ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ (ಎರಡನೇ ತಿದ್ದುಪಡಿ) ಮಸೂದೆ 2023 ಅನ್ನು ಕೂಡ ಸಚಿವ ಸಂಪುಟದಲ್ಲಿ ಒಪ್ಪಿಗೆ ಪಡೆಯದೇ ಸದನದಲ್ಲಿ ಮಂಡಿಸುವ ತುರ್ತು ಏನಿತ್ತು, ಈ ಬಗ್ಗೆ ಸ್ಪಷ್ಟನೆ ನೀಡಬೇಕು ಎಂದೂ ಅವರು ಸೂಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರಾಜ್ಯಪಾಲರ ಅಂಗೀಕಾರಕ್ಕೆ ಕಳಿಸಿದ್ದ 19 ಮಸೂದೆಗಳಲ್ಲಿ ಒಟ್ಟು ಆರು ಮಸೂದೆಗಳು ಅವರ ಬಳಿಯೇ ಉಳಿದಿದ್ದು, ತಾಂತ್ರಿಕ ಕಾರಣಗಳಿಗಾಗಿ ಉಳಿದಿವೆ ಎಂದು ಕಾನೂನು ಮತ್ತು ಸಂಸದೀಯ ಸಚಿವ ಎಚ್.ಕೆ.ಪಾಟೀಲ ಹೇಳಿದರು.</p>.<p>‘ಮುಖ್ಯವಾಗಿ, ಯಲ್ಲಮ್ಮನಗುಡ್ಡ ಅಭಿವೃದ್ಧಿ ಮಂಡಳಿ, ಬಾಂಬೆ ಪಬ್ಲಿಕ್ ಟ್ರಸ್ಟ್ ಕಾಯ್ದೆಯ ಮಸೂದೆಗಳೂ ಇವೆ. ಕೆಲವು ವಿವರಗಳನ್ನು ಅವರು ಕೇಳಿದ್ದು, ಅವುಗಳಿಗೆ ಸೂಕ್ತ ಮಾಹಿತಿ ಒದಗಿಸಲಾಗಿದೆ. ಈ ಸಂಬಂಧ ನಮ್ಮ ಇಲಾಖೆ ಮತ್ತು ರಾಜಭವನದ ನಡುವೆ ಪತ್ರ ವ್ಯವಹಾರ ನಡೆಯುತ್ತಿದೆ’ ಎಂದು ತಿಳಿಸಿದರು.</p>.<p>ಕರ್ನಾಟಕ ಹೈಕೋರ್ಟ್ (ತಿದ್ದುಪಡಿ) ಮಸೂದೆ 2023 ಅನ್ನು ಸಚಿವ ಸಂಪುಟದಲ್ಲಿ ಒಪ್ಪಿಗೆ ಪಡೆಯದೇ ವಿಧಾನಮಂಡಲದ ಅಧಿವೇಶನದಲ್ಲಿ ಮಂಡಿಸುವ ಅಗತ್ಯ ಏನಿತ್ತು ಎಂಬುದನ್ನು ಉಲ್ಲೇಖಿಸಿಲ್ಲ. ಆ ಬಗ್ಗೆ ಸ್ಪಷ್ಟನೆ ನೀಡಬೇಕು ಎಂದು ರಾಜ್ಯಪಾಲರು ಸೂಚಿಸಿದ್ದಾರೆ ಎಂದು ಮೂಲಗಳು ಹೇಳಿವೆ.</p>.<p>ಅಲ್ಲದೇ, ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ (ಎರಡನೇ ತಿದ್ದುಪಡಿ) ಮಸೂದೆ 2023 ಅನ್ನು ಕೂಡ ಸಚಿವ ಸಂಪುಟದಲ್ಲಿ ಒಪ್ಪಿಗೆ ಪಡೆಯದೇ ಸದನದಲ್ಲಿ ಮಂಡಿಸುವ ತುರ್ತು ಏನಿತ್ತು, ಈ ಬಗ್ಗೆ ಸ್ಪಷ್ಟನೆ ನೀಡಬೇಕು ಎಂದೂ ಅವರು ಸೂಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>