<p><strong>ಬೆಂಗಳೂರು</strong>: ‘ರಾಜ್ಯದಲ್ಲಿ ಕೌಶಲ ತರಬೇತಿ ಕೇಂದ್ರ ಮತ್ತು ಪ್ರಯೋಗಾಲಯಗಳನ್ನು ಸ್ಥಾಪಿಸಲು ಇಚ್ಛಿಸುವವರಿಗೆ ರಾಜ್ಯ ಸರ್ಕಾರದಿಂದಲೇ ಅಗತ್ಯ ಜಮೀನು ಮಂಜೂರು ಮಾಡಲಾಗುವುದು’ ಎಂದು ಕೌಶಲ್ಯಾಭಿವೃದ್ಧಿ ಸಚಿವ ಶರಣ ಪ್ರಕಾಶ ಪಾಟೀಲ ಹೇಳಿದರು.</p>.<p>ಭಾರತೀಯ ಕೈಗಾರಿಕೆಗಳ ಒಕ್ಕೂಟವು ನಗರದಲ್ಲಿ ಗುರುವಾರ ಆಯೋಜಿಸಿದ್ದ ‘ಕೌಶಲ ಶೃಂಗಸಭೆ–2025’ಯಲ್ಲಿ ಅವರು ಮಾತನಾಡಿದರು. </p>.<p>‘ಪದವಿ, ವೃತ್ತಿಪರ ಕೋರ್ಸ್ಗಳನ್ನು ಮಾಡಿದ ವಿದ್ಯಾರ್ಥಿಗಳಲ್ಲಿ ಉದ್ಯೋಗಾವಕಾಶವನ್ನು ಹೆಚ್ಚಿಸುವ ಅಗತ್ಯವಿದೆ. ಇದಕ್ಕಾಗಿ ಉದ್ಯಮಗಳ ಸಹಯೋಗದಲ್ಲೇ ತರಬೇತಿ ಕೇಂದ್ರ ಅಥವಾ ಪ್ರಯೋಗಾಲಯಗಳನ್ನು ಸ್ಥಾಪಿಸಬೇಕಿದೆ. ಇದಕ್ಕೆ ಸರ್ಕಾರವು ಅಗತ್ಯ ನೆರವುಗಳನ್ನು ನೀಡಲಿದೆ’ ಎಂದರು.</p>.<p>‘ಬೆಂಗಳೂರಿನ ಪಿಇಎಸ್ ವಿಶ್ವವಿದ್ಯಾಲಯದಲ್ಲಿ ಬಜಾಜ್ ಕಂಪನಿಯು ಎಂಜಿನಿಯರಿಂಗ್ ಕೌಶಲ ತರಬೇತಿ ಕೇಂದ್ರವನ್ನು ಆರಂಭಿಸಿದೆ. ಖಾಸಗಿ–ಸರ್ಕಾರಿ ಸಹಯೋಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಈ ಕೇಂದ್ರದಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಮೆಕಾಟ್ರಾನಿಕ್ಸ್, ರೊಬೊಟಿಕ್ಸ್ ಮೊದಲಾದ ಕ್ಷೇತ್ರಗಳಲ್ಲಿ ಪ್ರಾಯೋಗಿಕ ತರಬೇತಿಯನ್ನು ನೀಡಲಾಗುತ್ತಿದೆ. ರಾಜ್ಯದ ಹಲವೆಡೆ ಇಂತಹ ಕೇಂದ್ರಗಳನ್ನು ಸ್ಥಾಪಿಸಲು ಅವಕಾಶಗಳಿವೆ’ ಎಂದು ಹೇಳಿದರು.</p>.<p>‘ಶೈಕ್ಷಣಿಕ ಕಲಿಕೆ ಮತ್ತು ಪ್ರಾಯೋಗಿಕ ತರಬೇತಿ ಎರಡಕ್ಕೂ ಅವಕಾಶವಿರುವ ‘ಡ್ಯುಯಲ್ ಅಪ್ರೆಂಟಿಸ್ಶಿಪ್’ ಕಾರ್ಯಕ್ರಮವನ್ನು ರೂಪಿಸಲಾಗುತ್ತಿದೆ. ಈ ಯೋಜನೆಯನ್ನು ಸಾಕಾರಗೊಳಿಸಲು ಉದ್ಯಮರಂಗದ ಸಹಕಾರ ಅಗತ್ಯ. ಶಿಕ್ಷಣ–ಉದ್ಯಮ ಸಹಯೋಗವನ್ನು ಹೊಸ ಎತ್ತರಕ್ಕೆ ಒಯ್ಯೋಣ’ ಎಂದು ಉದ್ಯಮಿಗಳಿಗೆ ಆಹ್ವಾನ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ರಾಜ್ಯದಲ್ಲಿ ಕೌಶಲ ತರಬೇತಿ ಕೇಂದ್ರ ಮತ್ತು ಪ್ರಯೋಗಾಲಯಗಳನ್ನು ಸ್ಥಾಪಿಸಲು ಇಚ್ಛಿಸುವವರಿಗೆ ರಾಜ್ಯ ಸರ್ಕಾರದಿಂದಲೇ ಅಗತ್ಯ ಜಮೀನು ಮಂಜೂರು ಮಾಡಲಾಗುವುದು’ ಎಂದು ಕೌಶಲ್ಯಾಭಿವೃದ್ಧಿ ಸಚಿವ ಶರಣ ಪ್ರಕಾಶ ಪಾಟೀಲ ಹೇಳಿದರು.</p>.<p>ಭಾರತೀಯ ಕೈಗಾರಿಕೆಗಳ ಒಕ್ಕೂಟವು ನಗರದಲ್ಲಿ ಗುರುವಾರ ಆಯೋಜಿಸಿದ್ದ ‘ಕೌಶಲ ಶೃಂಗಸಭೆ–2025’ಯಲ್ಲಿ ಅವರು ಮಾತನಾಡಿದರು. </p>.<p>‘ಪದವಿ, ವೃತ್ತಿಪರ ಕೋರ್ಸ್ಗಳನ್ನು ಮಾಡಿದ ವಿದ್ಯಾರ್ಥಿಗಳಲ್ಲಿ ಉದ್ಯೋಗಾವಕಾಶವನ್ನು ಹೆಚ್ಚಿಸುವ ಅಗತ್ಯವಿದೆ. ಇದಕ್ಕಾಗಿ ಉದ್ಯಮಗಳ ಸಹಯೋಗದಲ್ಲೇ ತರಬೇತಿ ಕೇಂದ್ರ ಅಥವಾ ಪ್ರಯೋಗಾಲಯಗಳನ್ನು ಸ್ಥಾಪಿಸಬೇಕಿದೆ. ಇದಕ್ಕೆ ಸರ್ಕಾರವು ಅಗತ್ಯ ನೆರವುಗಳನ್ನು ನೀಡಲಿದೆ’ ಎಂದರು.</p>.<p>‘ಬೆಂಗಳೂರಿನ ಪಿಇಎಸ್ ವಿಶ್ವವಿದ್ಯಾಲಯದಲ್ಲಿ ಬಜಾಜ್ ಕಂಪನಿಯು ಎಂಜಿನಿಯರಿಂಗ್ ಕೌಶಲ ತರಬೇತಿ ಕೇಂದ್ರವನ್ನು ಆರಂಭಿಸಿದೆ. ಖಾಸಗಿ–ಸರ್ಕಾರಿ ಸಹಯೋಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಈ ಕೇಂದ್ರದಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಮೆಕಾಟ್ರಾನಿಕ್ಸ್, ರೊಬೊಟಿಕ್ಸ್ ಮೊದಲಾದ ಕ್ಷೇತ್ರಗಳಲ್ಲಿ ಪ್ರಾಯೋಗಿಕ ತರಬೇತಿಯನ್ನು ನೀಡಲಾಗುತ್ತಿದೆ. ರಾಜ್ಯದ ಹಲವೆಡೆ ಇಂತಹ ಕೇಂದ್ರಗಳನ್ನು ಸ್ಥಾಪಿಸಲು ಅವಕಾಶಗಳಿವೆ’ ಎಂದು ಹೇಳಿದರು.</p>.<p>‘ಶೈಕ್ಷಣಿಕ ಕಲಿಕೆ ಮತ್ತು ಪ್ರಾಯೋಗಿಕ ತರಬೇತಿ ಎರಡಕ್ಕೂ ಅವಕಾಶವಿರುವ ‘ಡ್ಯುಯಲ್ ಅಪ್ರೆಂಟಿಸ್ಶಿಪ್’ ಕಾರ್ಯಕ್ರಮವನ್ನು ರೂಪಿಸಲಾಗುತ್ತಿದೆ. ಈ ಯೋಜನೆಯನ್ನು ಸಾಕಾರಗೊಳಿಸಲು ಉದ್ಯಮರಂಗದ ಸಹಕಾರ ಅಗತ್ಯ. ಶಿಕ್ಷಣ–ಉದ್ಯಮ ಸಹಯೋಗವನ್ನು ಹೊಸ ಎತ್ತರಕ್ಕೆ ಒಯ್ಯೋಣ’ ಎಂದು ಉದ್ಯಮಿಗಳಿಗೆ ಆಹ್ವಾನ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>