ಗುರುವಾರ, 25 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ಮೈಸೂರಿನಲ್ಲಿ ಎಸ್.ಎಲ್. ಭೈರಪ್ಪ ಸ್ಮಾರಕ ನಿರ್ಮಾಣಕ್ಕೆ ಕ್ರಮ: ಸಿಎಂ ಸಿದ್ದರಾಮಯ್ಯ

Published : 25 ಸೆಪ್ಟೆಂಬರ್ 2025, 7:01 IST
Last Updated : 25 ಸೆಪ್ಟೆಂಬರ್ 2025, 7:01 IST
ಫಾಲೋ ಮಾಡಿ
Comments
ಮೈಸೂರಿನಲ್ಲಿ ಸ್ಮಾರಕ ಭೈರಪ್ಪ
ಎಸ್.ಎಲ್.ಭೈರಪ್ಪನವರ ಸ್ಮಾರಕ ನಿರ್ಮಾಣದ ಬಗ್ಗೆ ಪ್ರತಿಕ್ರಿಯೆ ನೀಡಿ, ಬಿಜೆಪಿಯವರು ಹೇಳಿದರೆಂದು ಸ್ಮಾರಕ ನಿರ್ಮಿಸುವುದಿಲ್ಲ. ಮೈಸೂರಿನಲ್ಲಿಯೇ ಸ್ಮಾರಕ ನಿರ್ಮಾಣಕ್ಕೆ ಸರ್ಕಾರ ಕ್ರಮ ತೆಗೆದುಕೊಳ್ಳಲಿದೆ ಎಂದು ತಿಳಿಸಿದರು. ಮೈಸೂರಿನಲ್ಲಿಯೇ ತಮ್ಮ ಜೀವಿತಾವಧಿಯನ್ನು ಕಳೆದಿದ್ದು, ವಿದ್ಯಾಭ್ಯಾಸ, ಸಾಹಿತ್ಯಕೃಷಿಯಲ್ಲಿ ನಡೆಸಿದ್ದರು ಎಂದರು.
ಹೃದಯಾಘಾತದಿಂದ ನಿಧನ
'ಪದ್ಮಭೂಷಣ', 'ಸರಸ್ವತಿ ಸಮ್ಮಾನ್' ಪುರಸ್ಕೃತ ಭೈರಪ್ಪ ಅವರು ಬೆಂಗಳೂರಿನ ರಾಜರಾಜೇಶ್ವರಿನಗರದ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಬುಧವಾರ ಮಧ್ಯಾಹ್ನ 2.38ಕ್ಕೆ ಹೃದಯಾಘಾತದಿಂದ ನಿಧನರಾದರು. ಅವರ ಪಾರ್ಥಿವ ಶರೀರದ ಸಾರ್ವಜನಿಕ ದರ್ಶನಕ್ಕೆ ರವೀಂದ್ರ ಕಲಾಕ್ಷೇತ್ರದಲ್ಲಿ ಗುರುವಾರ ವ್ಯವಸ್ಥೆ ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT