ದೇವಸ್ಥಾನದ ಅರ್ಚಕ ಶನಿವಾರ ಬೆಳಿಗ್ಗೆ 7ಕ್ಕೆ ಪೂಜೆ ಸಲ್ಲಿಸಿ ಮನೆಗೆ ಹೋಗಿದ್ದಾರೆ. 8.30ರ ಹೊತ್ತಿಗೆ ಭಕ್ತರು ದರ್ಶನ ಪಡೆಯಲು ಅಲ್ಲಿಗೆ ಹೋದಾಗ ಘಟನೆ ಬೆಳಕಿಗೆ ಬಂದಿದೆ. ಉದ್ವಿಗ್ನ ಪರಿಸ್ಥಿತಿ ಇದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಆರೋಪಿಗಳನ್ನು ಶೀಘ್ರ ಬಂಧಿಸುವ ಭರವಸೆಯನ್ನು ಪೊಲೀಸರು ನೀಡಿದ ನಂತರ ಗ್ರಾಮಸ್ಥರು ಪ್ರತಿಭಟನೆ ಕೈಬಿಟ್ಟರು.