ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಂದಿ ವಿಗ್ರಹಕ್ಕೆ ಚಪ್ಪಲಿ ಹಾರ, ಪ್ರತಿಭಟನೆ

Last Updated 8 ಜೂನ್ 2019, 18:49 IST
ಅಕ್ಷರ ಗಾತ್ರ

ನಿಡಗುಂದಿ (ವಿಜಯಪುರ ಜಿಲ್ಲೆ): ತಾಲ್ಲೂಕಿನ ಗೊಳಸಂಗಿ ಗ್ರಾಮದ ಬಸವೇಶ್ವರ ದೇವಸ್ಥಾನದ ನಂದಿ ವಿಗ್ರಹಕ್ಕೆ ಚಪ್ಪಲಿ ಹಾರ ಹಾಕಿದ ಕಿಡಿಗೇಡಿಗಳನ್ನು ಬಂಧಿಸುವಂತೆ ಆಗ್ರಹಿಸಿ ಸ್ಥಳೀಯರು ಗುಡಿಯ ಮುಂದೆ ಪ್ರತಿಭಟನೆ ನಡೆಸಿದರು.

ದೇವಸ್ಥಾನದ ಅರ್ಚಕ ಶನಿವಾರ ಬೆಳಿಗ್ಗೆ 7ಕ್ಕೆ ಪೂಜೆ ಸಲ್ಲಿಸಿ ಮನೆಗೆ ಹೋಗಿದ್ದಾರೆ. 8.30ರ ಹೊತ್ತಿಗೆ ಭಕ್ತರು ದರ್ಶನ ಪಡೆಯಲು ಅಲ್ಲಿಗೆ ಹೋದಾಗ ಘಟನೆ ಬೆಳಕಿಗೆ ಬಂದಿದೆ. ಉದ್ವಿಗ್ನ ಪರಿಸ್ಥಿತಿ ಇದ್ದು, ಬಿಗಿ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿದೆ. ಆರೋಪಿಗಳನ್ನು ಶೀಘ್ರ ಬಂಧಿಸುವ ಭರವಸೆಯನ್ನು ಪೊಲೀಸರು ನೀಡಿದ ನಂತರ ಗ್ರಾಮಸ್ಥರು ಪ್ರತಿಭಟನೆ ಕೈಬಿಟ್ಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT