<p><strong>ಬೆಂಗಳೂರು: </strong>ಕೋವಿಡ್ ಸಮಯದಲ್ಲಿ ಅನುಷ್ಠಾನಗೊಳಿಸಿದ ಉಪಕ್ರಮಗಳಿಗಾಗಿ ಕೆಎಸ್ಆರ್ಟಿಸಿಗೆ ರೋಟರಿ 3190 ಡಿಸ್ಟ್ರಿಕ್ಟ್ನ ಸಾಮಾಜಿಕ ಕಳಕಳಿ ಪ್ರಶಸ್ತಿ ಲಭಿಸಿದೆ.</p>.<p>ಹಳೆಯ ಬಸ್ಗಳನ್ನು ಬಳಸಿಕೊಂಡು 20 ಕಡೆ ಸಂಚಾರಿ ಜ್ವರ ಕ್ಲಿನಿಕ್ ತೆರೆಯಲಾಗಿತ್ತು. ಮಿನಿ ಬಸ್ಗಳನ್ನು ಸಾರಿಗೆ ಸಂಜೀವಿನಿ ಆಂಬುಲೆನ್ಸ್ ಆಗಿ ಪರಿವರ್ತಿಸಲಾಗಿತ್ತು. ಬಸವೇಶ್ವರ ನಗರದ ಬಸ್ ನಿಲ್ದಾಣದಲ್ಲಿ ರೋಟರಿ ಆಡ್ವಿಕಾ ನಯೋನಿಕಾ ಸಹಯೋಗದಲ್ಲಿ 200 ಹಾಸಿಗೆಗಳ ಕೋವಿಡ್ ಆರೈಕೆ ಕೇಂದ್ರ ತೆರೆಯಲಾಗಿತ್ತು.</p>.<p>ಕ್ಯಾನ್ಸರ್ ಬಗ್ಗೆ ಹಳ್ಳಿ–ಹಳ್ಳಿಗಳಲ್ಲಿ ಜಾಗೃತಿ ಮೂಡಿಸಲು ಮತ್ತು ಸಂಚಾರಿ ರಕ್ತ ನಿಧಿಯಾಗಿ ಬಳಸಿಕೊಳ್ಳಲು ಹಳೆಯ ಐರಾವತ ಹವಾನಿಯಂತ್ರಿತ ಬಸ್ಸನ್ನು ಕಿದ್ವಾಯಿ ಕ್ಯಾನ್ಸರ್ ಸಂಸ್ಥೆಗೆ ಉಚಿತವಾಗಿ ನೀಡಲಾಗಿದೆ.</p>.<p>‘ದೇಶದಲ್ಲೇ ಮೊದಲ ಪ್ರಯತ್ನವಾಗಿ 5 ಹಾಸಿಗೆಯ ಐಸಿಯು ಬಸ್ ನಿರ್ಮಿಸಲಾಗಿದ್ದು, ಪುತ್ತೂರು ವಿಭಾಗದ ವ್ಯಾಪ್ತಿಯಲ್ಲಿನ 21 ಗ್ರಾಮಗಳ 1303 ಜನ ಇದರ ಪ್ರಯೋಜನ ಪಡೆದಿದ್ದಾರೆ. ಈ ಎಲ್ಲ ಉಪಕ್ರಮಗಳನ್ನು ಗುರುತಿಸಿ ಸಾಮಾಜಿಕ ಕಳಕಳಿ ಪ್ರಶಸ್ತಿಯನ್ನು ರೋಟರಿ ಸಂಸ್ಥೆ ನೀಡಿದೆ’ ಎಂದು ಕೆಎಸ್ಆರ್ಟಿಸಿ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಕೋವಿಡ್ ಸಮಯದಲ್ಲಿ ಅನುಷ್ಠಾನಗೊಳಿಸಿದ ಉಪಕ್ರಮಗಳಿಗಾಗಿ ಕೆಎಸ್ಆರ್ಟಿಸಿಗೆ ರೋಟರಿ 3190 ಡಿಸ್ಟ್ರಿಕ್ಟ್ನ ಸಾಮಾಜಿಕ ಕಳಕಳಿ ಪ್ರಶಸ್ತಿ ಲಭಿಸಿದೆ.</p>.<p>ಹಳೆಯ ಬಸ್ಗಳನ್ನು ಬಳಸಿಕೊಂಡು 20 ಕಡೆ ಸಂಚಾರಿ ಜ್ವರ ಕ್ಲಿನಿಕ್ ತೆರೆಯಲಾಗಿತ್ತು. ಮಿನಿ ಬಸ್ಗಳನ್ನು ಸಾರಿಗೆ ಸಂಜೀವಿನಿ ಆಂಬುಲೆನ್ಸ್ ಆಗಿ ಪರಿವರ್ತಿಸಲಾಗಿತ್ತು. ಬಸವೇಶ್ವರ ನಗರದ ಬಸ್ ನಿಲ್ದಾಣದಲ್ಲಿ ರೋಟರಿ ಆಡ್ವಿಕಾ ನಯೋನಿಕಾ ಸಹಯೋಗದಲ್ಲಿ 200 ಹಾಸಿಗೆಗಳ ಕೋವಿಡ್ ಆರೈಕೆ ಕೇಂದ್ರ ತೆರೆಯಲಾಗಿತ್ತು.</p>.<p>ಕ್ಯಾನ್ಸರ್ ಬಗ್ಗೆ ಹಳ್ಳಿ–ಹಳ್ಳಿಗಳಲ್ಲಿ ಜಾಗೃತಿ ಮೂಡಿಸಲು ಮತ್ತು ಸಂಚಾರಿ ರಕ್ತ ನಿಧಿಯಾಗಿ ಬಳಸಿಕೊಳ್ಳಲು ಹಳೆಯ ಐರಾವತ ಹವಾನಿಯಂತ್ರಿತ ಬಸ್ಸನ್ನು ಕಿದ್ವಾಯಿ ಕ್ಯಾನ್ಸರ್ ಸಂಸ್ಥೆಗೆ ಉಚಿತವಾಗಿ ನೀಡಲಾಗಿದೆ.</p>.<p>‘ದೇಶದಲ್ಲೇ ಮೊದಲ ಪ್ರಯತ್ನವಾಗಿ 5 ಹಾಸಿಗೆಯ ಐಸಿಯು ಬಸ್ ನಿರ್ಮಿಸಲಾಗಿದ್ದು, ಪುತ್ತೂರು ವಿಭಾಗದ ವ್ಯಾಪ್ತಿಯಲ್ಲಿನ 21 ಗ್ರಾಮಗಳ 1303 ಜನ ಇದರ ಪ್ರಯೋಜನ ಪಡೆದಿದ್ದಾರೆ. ಈ ಎಲ್ಲ ಉಪಕ್ರಮಗಳನ್ನು ಗುರುತಿಸಿ ಸಾಮಾಜಿಕ ಕಳಕಳಿ ಪ್ರಶಸ್ತಿಯನ್ನು ರೋಟರಿ ಸಂಸ್ಥೆ ನೀಡಿದೆ’ ಎಂದು ಕೆಎಸ್ಆರ್ಟಿಸಿ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>