‘ದಂಡ ಪಾವತಿಸದೆ, ಡಿವೈಎಸ್ಪಿ ಕಚೇರಿಯಲ್ಲಿ ದೂರು ದಾಖಲಿಸಿದ್ದರಿಂದ ದಂಡದ ಮೊತ್ತವನ್ನು ₹ 6 ಲಕ್ಷಕ್ಕೆ ಹೆಚ್ಚಿಸಿದ್ದಾರೆ. ಗ್ರಾಮಸ್ಥರ ಜೊತೆಮಾತನಾಡುವಂತಿಲ್ಲ, ಅಂಗಡಿಗಳಲ್ಲಿ ಧಾನ್ಯ, ತರಕಾರಿ, ಹಾಲು ಖರೀದಿಸುವಂತಿಲ್ಲ. ನೀರನ್ನೂ ತೆಗೆದುಕೊಳ್ಳುವಂತಿಲ್ಲ ಎಂದು ಸೂಚಿಸಿ ಸಾಮಾಜಿಕ ಬಹಿಷ್ಕಾರ ಹಾಕಿದ್ದಾರೆ ಎಂದು ತಿಳಿಸಿದ್ದಾರೆ. ದೂರಿನಲ್ಲಿ ಕುಣಗಳ್ಳಿಯ 13 ಮಂದಿಯ ಹೆಸರುಗಳನ್ನು ಉಲ್ಲೇಖಿಸಿದ್ದಾರೆ.