<p><strong>ಬೆಂಗಳೂರು:</strong> ಹಿಂದುಳಿದ ವರ್ಗಗಳ ಆಯೋಗ ಸಿದ್ಧಪಡಿಸಿದ್ದ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಗಣತಿ ವರದಿಯನ್ನು ಒಪ್ಪದೇ ಇರಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ ಎಂದು ಮೂಲಗಳು ತಿಳಿಸಿವೆ.</p>.<p>ಸಚಿವ ಸಂಪುಟ ಸಭೆಯ ಕಾರ್ಯಸೂಚಿ ಪಟ್ಟಿಯಲ್ಲಿ ಈ ವಿಷಯ ಅಡಕವಾಗಿತ್ತು. ಇದನ್ನು ಚರ್ಚೆಗೆ ತೆಗೆದುಕೊಳ್ಳದಿರಲು ನಿರ್ಧರಿಸಿತು. ಮುಖ್ಯವಾಗಿ ಈ ಸಮೀಕ್ಷೆಯಲ್ಲಿ ರಾಜ್ಯದ ಜಾತಿ ವ್ಯವಸ್ಥೆ, ಶಿಕ್ಷಣ ಮತ್ತು ಆರ್ಥಿಕ ಪರಿಸ್ಥಿತಿಯ ಬಗ್ಗೆ ನಿಖರ ಮಾಹಿತಿಯೇ ಇಲ್ಲ. ಇದು ವೈಜ್ಞಾನಿಕವಾಗಿಲ್ಲ ಎಂಬ ಕಾರಣಕ್ಕಾಗಿ ಸಮೀಕ್ಷೆ ನಡೆಸಿದ್ದ ಕಾಂಗ್ರೆಸ್ ಸರ್ಕಾರವೇ ಒಪ್ಪಿಕೊಳ್ಳಲಿಲ್ಲ.</p>.<p>ನಂತರ ಬಂದ ಎಚ್.ಡಿ.ಕುಮಾರಸ್ವಾಮಿ ಸರ್ಕಾರವೂ ಬೆಲೆಯನ್ನೇ ನೀಡಲಿಲ್ಲ. ಪರಿಸ್ಥಿತಿ ಹೀಗಿರುವಾಗ ಈ ವಿಷಯವನ್ನು ಸಂಪುಟದ ಮುಂದೆ ತಂದ ಉದ್ದೇಶವಾದರೂ ಏನು ಎಂದು ಕೆಲವು ಸಚಿವರು ಅಧಿಕಾರಿಗಳನ್ನು ಪ್ರಶ್ನಿಸಿದರು ಎಂದು ಮೂಲಗಳು ಹೇಳಿವೆ.</p>.<p>ಸರ್ಕಾರದ ಯೋಜನೆಗಳಿಗೆ ಈ ವರದಿಯ ಅಂಕಿ ಅಂಶ ಮತ್ತು ಮಾಹಿತಿ ಬಳಸಿಕೊಳ್ಳಬಹುದು ಎಂಬ ಕಾರಣಕ್ಕೆ ವಿಷಯ ಕಾರ್ಯಸೂಚಿ ಪಟ್ಟಿಯಲ್ಲಿ ಸೇರಿಸಿದ್ದಾಗಿ ಸಮಜಾಯಿಷಿ ನೀಡಿದರು ಎನ್ನಲಾಗಿದೆ.</p>.<p><strong>- ಆರ್ಯವೈಶ್ಯ ಸಮುದಾಯದವರಿಗೆ ಶಿಕ್ಷಣ ಮತ್ತು ಉದ್ಯೋಗ ಪಡೆಯಲು ಹಿಂದುಳಿದ ವರ್ಗಗಳ ಪ್ರಮಾಣ ಪತ್ರ ಪಡೆಯಲು ಅನುಕೂಲವಾಗಲು ವರದಿ ನೀಡುವಂತೆ ಹಿಂದುಳಿದ ವರ್ಗಗಳ ಆಯೋಗಕ್ಕೆ ಸೂಚನೆ.</strong></p>.<p><strong>- ವಿವಿಧ ಇಲಾಖೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ವರ್ಗಗಳ ಬ್ಯಾಕ್ಲಾಗ್ ಹುದ್ದೆಗಳನ್ನು ಗುರುತಿಸಿ ಭರ್ತಿ ಮಾಡುವ ಉದ್ದೇಶಕ್ಕೆ ವರದಿ ಪಡೆಯಲು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅಧ್ಯಕ್ಷತೆಯಲ್ಲಿ ಸಂಪುಟ ಉಪಸಮಿತಿ ರಚನೆ.</strong></p>.<p><strong>- ವಿವಿಧ ಕೌಶಲ್ಯ ತರಬೇತಿ ಯೋಜನೆಗಳನ್ನು ಒಂದೇ ಸೂರಿನಡಿ ತಂದು ತರಬೇತಿ ಚಟುವಟಿಕೆ ನಡೆಸಲು ಕೌಶಲ್ಯ ಮಿಷನ್ ಸ್ಥಾಪನೆಗೆ ನಿರ್ಧಾರ.</strong></p>.<p>***</p>.<p><strong>ಸಂಪುಟಸಭೆಯಪ್ರಮುಖನಿರ್ಧಾರಗಳು</strong></p>.<p>- ಕೌಶಲ್ಯಾಭಿವೃದ್ಧಿ ಇಲಾಖೆಯಿಂದ ಎಸ್ಸಿ– ಎಸ್ಟಿ ಸಮುದಾಯಕ್ಕೆ ಸೇರಿದ5331 ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಿಸಲು ₹16.98 ಕೋಟಿ.</p>.<p>- ಬಾಗಲಕೋಟೆ ಜಿಲ್ಲೆ ಪಟ್ಟದಕಲ್ಲಿನಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ₹129.25 ಕೋಟಿ ವೆಚ್ಚದಲ್ಲಿ ಪ್ರವಾಸಿ ಪ್ಲಾಜಾ ನಿರ್ಮಿಸಲು ತೀರ್ಮಾನ. 24 ಎಕರೆ ಪ್ರದೇಶದಲ್ಲಿ ಇದರ ನಿರ್ಮಾಣ ಆಗಲಿದೆ.</p>.<p>- ವಿಜಯಪುರ ಜಿಲ್ಲೆಯ ತಿಕೋಟಾ ಮತ್ತು ಕಲಬುರ್ಗಿಯ ಕಮಲಾಪುರಕ್ಕೆ ಪಟ್ಟಣ ಪಂಚಾಯತಿ ಭಾಗ್ಯ</p>.<p>- ಅಂಗನವಾಡಿ ಕಾರ್ಯಕರ್ತೆಯರಿಗೆ ಸಮವಸ್ತ್ರ ನೀಡಲು ಪ್ರತಿ ಸೀರೆಗೆ ₹400 ನಿಗದಿ. ಇದಕ್ಕಾಗಿ ₹10.27 ಕೋಟಿ ನೀಡಲು ಒಪ್ಪಿಗೆ. ಇದರಿಂದ 62,580 ಅಂಗನವಾಡಿಗಳು ಮತ್ತು 3,331 ಮಿನಿ ಅಂಗನವಾಡಿ ಕಾರ್ಯಕರ್ತೆಯರಿಗೆ ಪ್ರಯೋಜನ ಸಿಗಲಿದೆ. ಒಟ್ಟು 2.56 ಲಕ್ಷ ಸೀರೆ ವಿತರಿಸಲಾಗುವುದು.</p>.<p>- ಅಂಗವಿಕಲರಿಗಾಗಿ ದ್ವಿಚಕ್ರ ವಾಹನ ಖರೀದಿ ಯೋಜನೆಗೆ ₹15 ಕೋಟಿ ನಿಗದಿ. 2,000 ಫಲಾನುಭವಿಗಳಿಗೆ ಇದರ ಪ್ರಯೋಜನ ಸಿಗಲಿದೆ.</p>.<p>- ‘ಭಾಗ್ಯಲಕ್ಷ್ಮಿ’ ಯೋಜನೆಗೆ ಭಾರತೀಯ ಜೀವ ವಿಮಾ ನಿಗಮ ಹೊಂದಿರುವ ಪಾಲುದಾರಿಕೆಯನ್ನು 2020 ರ ಮಾರ್ಚ್ 30 ರವರೆಗೆ ವಿಸ್ತರಣೆ.</p>.<p>- ಕ್ರೀಡಾ ಇಲಾಖೆ ವತಿಯಿಂದ ರಾಯಚೂರು, ಹಾವೇರಿ, ಮಂಗಳೂರು, ಚಿಕ್ಕಮಗಳೂರು, ಮಂಡ್ಯ, ಕೋಲಾರ, ಚಾಮರಾಜನಗರ, ಕಲಬುರ್ಗಿ, ಧಾರವಾಡದಲ್ಲಿ ಮಹಿಳಾ ಕ್ರೀಡಾಪಟುಗಳಿಗೆ ಪ್ರತ್ಯೇಕ ವಸತಿ ನಿಲಯ ಸ್ಥಾಪಿಸಲು ₹15 ಕೋಟಿ ಆಡಳಿತಾತ್ಮಕ ಅನುಮೋದನೆ.</p>.<p>- ಕಲಬುರ್ಗಿ ಜಿಲ್ಲೆ ಅಫಜಲಪುರ ತಾಲ್ಲೂಕಿನಲ್ಲಿ ಭೀಮಾನದಿಗೆ ಸೇತುವೆ ಮತ್ತು ಬಾಂದಾರ ನಿರ್ಮಾಣಕ್ಕೆ ₹72 ಕೋಟಿ.</p>.<p>- ಧರ್ಮಸ್ಥಳ ಸಮೀಪದ ಮುಳಿಕಾರುವಿನಲ್ಲಿ ನೆರಿಯಾ ಹೊಳೆಗೆ ಕಿಂಡಿ ಅಣೆಕಟ್ಟು ನಿರ್ಮಿಸಲು ₹14.97 ಕೋಟಿಗೆ ಆಡಳಿತಾತ್ಮಕ ಅನುಮೋದನೆ.</p>.<p>- ಹೊಸಪೇಟೆ ತಾಲ್ಲೂಕಿನ ಪಾಪಿನಾಯಕನಹಳ್ಳಿ ಪ್ರದೇಶದಲ್ಲಿ ಗಣಿಗಾರಿಕೆಯಿಂದ ಬಾಧಿತ ಗ್ರಾಮಗಳಿಗೆ ಕುಡಿಯುವ ನೀರು ಒದಗಿಸಲು ತುಂಗಭದ್ರಾದಿಂದ ನೀರೆತ್ತಿ 18 ಕೆರೆಗಳು, 4 ಚೆಕ್ ಡ್ಯಾಂಗಳನ್ನು ತುಂಬಿಸಲು ₹243.35 ಕೋಟಿಗೆ ಯೋಜನೆಗೆ ಅನುಮೋದನೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಹಿಂದುಳಿದ ವರ್ಗಗಳ ಆಯೋಗ ಸಿದ್ಧಪಡಿಸಿದ್ದ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಗಣತಿ ವರದಿಯನ್ನು ಒಪ್ಪದೇ ಇರಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ ಎಂದು ಮೂಲಗಳು ತಿಳಿಸಿವೆ.</p>.<p>ಸಚಿವ ಸಂಪುಟ ಸಭೆಯ ಕಾರ್ಯಸೂಚಿ ಪಟ್ಟಿಯಲ್ಲಿ ಈ ವಿಷಯ ಅಡಕವಾಗಿತ್ತು. ಇದನ್ನು ಚರ್ಚೆಗೆ ತೆಗೆದುಕೊಳ್ಳದಿರಲು ನಿರ್ಧರಿಸಿತು. ಮುಖ್ಯವಾಗಿ ಈ ಸಮೀಕ್ಷೆಯಲ್ಲಿ ರಾಜ್ಯದ ಜಾತಿ ವ್ಯವಸ್ಥೆ, ಶಿಕ್ಷಣ ಮತ್ತು ಆರ್ಥಿಕ ಪರಿಸ್ಥಿತಿಯ ಬಗ್ಗೆ ನಿಖರ ಮಾಹಿತಿಯೇ ಇಲ್ಲ. ಇದು ವೈಜ್ಞಾನಿಕವಾಗಿಲ್ಲ ಎಂಬ ಕಾರಣಕ್ಕಾಗಿ ಸಮೀಕ್ಷೆ ನಡೆಸಿದ್ದ ಕಾಂಗ್ರೆಸ್ ಸರ್ಕಾರವೇ ಒಪ್ಪಿಕೊಳ್ಳಲಿಲ್ಲ.</p>.<p>ನಂತರ ಬಂದ ಎಚ್.ಡಿ.ಕುಮಾರಸ್ವಾಮಿ ಸರ್ಕಾರವೂ ಬೆಲೆಯನ್ನೇ ನೀಡಲಿಲ್ಲ. ಪರಿಸ್ಥಿತಿ ಹೀಗಿರುವಾಗ ಈ ವಿಷಯವನ್ನು ಸಂಪುಟದ ಮುಂದೆ ತಂದ ಉದ್ದೇಶವಾದರೂ ಏನು ಎಂದು ಕೆಲವು ಸಚಿವರು ಅಧಿಕಾರಿಗಳನ್ನು ಪ್ರಶ್ನಿಸಿದರು ಎಂದು ಮೂಲಗಳು ಹೇಳಿವೆ.</p>.<p>ಸರ್ಕಾರದ ಯೋಜನೆಗಳಿಗೆ ಈ ವರದಿಯ ಅಂಕಿ ಅಂಶ ಮತ್ತು ಮಾಹಿತಿ ಬಳಸಿಕೊಳ್ಳಬಹುದು ಎಂಬ ಕಾರಣಕ್ಕೆ ವಿಷಯ ಕಾರ್ಯಸೂಚಿ ಪಟ್ಟಿಯಲ್ಲಿ ಸೇರಿಸಿದ್ದಾಗಿ ಸಮಜಾಯಿಷಿ ನೀಡಿದರು ಎನ್ನಲಾಗಿದೆ.</p>.<p><strong>- ಆರ್ಯವೈಶ್ಯ ಸಮುದಾಯದವರಿಗೆ ಶಿಕ್ಷಣ ಮತ್ತು ಉದ್ಯೋಗ ಪಡೆಯಲು ಹಿಂದುಳಿದ ವರ್ಗಗಳ ಪ್ರಮಾಣ ಪತ್ರ ಪಡೆಯಲು ಅನುಕೂಲವಾಗಲು ವರದಿ ನೀಡುವಂತೆ ಹಿಂದುಳಿದ ವರ್ಗಗಳ ಆಯೋಗಕ್ಕೆ ಸೂಚನೆ.</strong></p>.<p><strong>- ವಿವಿಧ ಇಲಾಖೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ವರ್ಗಗಳ ಬ್ಯಾಕ್ಲಾಗ್ ಹುದ್ದೆಗಳನ್ನು ಗುರುತಿಸಿ ಭರ್ತಿ ಮಾಡುವ ಉದ್ದೇಶಕ್ಕೆ ವರದಿ ಪಡೆಯಲು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅಧ್ಯಕ್ಷತೆಯಲ್ಲಿ ಸಂಪುಟ ಉಪಸಮಿತಿ ರಚನೆ.</strong></p>.<p><strong>- ವಿವಿಧ ಕೌಶಲ್ಯ ತರಬೇತಿ ಯೋಜನೆಗಳನ್ನು ಒಂದೇ ಸೂರಿನಡಿ ತಂದು ತರಬೇತಿ ಚಟುವಟಿಕೆ ನಡೆಸಲು ಕೌಶಲ್ಯ ಮಿಷನ್ ಸ್ಥಾಪನೆಗೆ ನಿರ್ಧಾರ.</strong></p>.<p>***</p>.<p><strong>ಸಂಪುಟಸಭೆಯಪ್ರಮುಖನಿರ್ಧಾರಗಳು</strong></p>.<p>- ಕೌಶಲ್ಯಾಭಿವೃದ್ಧಿ ಇಲಾಖೆಯಿಂದ ಎಸ್ಸಿ– ಎಸ್ಟಿ ಸಮುದಾಯಕ್ಕೆ ಸೇರಿದ5331 ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಿಸಲು ₹16.98 ಕೋಟಿ.</p>.<p>- ಬಾಗಲಕೋಟೆ ಜಿಲ್ಲೆ ಪಟ್ಟದಕಲ್ಲಿನಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ₹129.25 ಕೋಟಿ ವೆಚ್ಚದಲ್ಲಿ ಪ್ರವಾಸಿ ಪ್ಲಾಜಾ ನಿರ್ಮಿಸಲು ತೀರ್ಮಾನ. 24 ಎಕರೆ ಪ್ರದೇಶದಲ್ಲಿ ಇದರ ನಿರ್ಮಾಣ ಆಗಲಿದೆ.</p>.<p>- ವಿಜಯಪುರ ಜಿಲ್ಲೆಯ ತಿಕೋಟಾ ಮತ್ತು ಕಲಬುರ್ಗಿಯ ಕಮಲಾಪುರಕ್ಕೆ ಪಟ್ಟಣ ಪಂಚಾಯತಿ ಭಾಗ್ಯ</p>.<p>- ಅಂಗನವಾಡಿ ಕಾರ್ಯಕರ್ತೆಯರಿಗೆ ಸಮವಸ್ತ್ರ ನೀಡಲು ಪ್ರತಿ ಸೀರೆಗೆ ₹400 ನಿಗದಿ. ಇದಕ್ಕಾಗಿ ₹10.27 ಕೋಟಿ ನೀಡಲು ಒಪ್ಪಿಗೆ. ಇದರಿಂದ 62,580 ಅಂಗನವಾಡಿಗಳು ಮತ್ತು 3,331 ಮಿನಿ ಅಂಗನವಾಡಿ ಕಾರ್ಯಕರ್ತೆಯರಿಗೆ ಪ್ರಯೋಜನ ಸಿಗಲಿದೆ. ಒಟ್ಟು 2.56 ಲಕ್ಷ ಸೀರೆ ವಿತರಿಸಲಾಗುವುದು.</p>.<p>- ಅಂಗವಿಕಲರಿಗಾಗಿ ದ್ವಿಚಕ್ರ ವಾಹನ ಖರೀದಿ ಯೋಜನೆಗೆ ₹15 ಕೋಟಿ ನಿಗದಿ. 2,000 ಫಲಾನುಭವಿಗಳಿಗೆ ಇದರ ಪ್ರಯೋಜನ ಸಿಗಲಿದೆ.</p>.<p>- ‘ಭಾಗ್ಯಲಕ್ಷ್ಮಿ’ ಯೋಜನೆಗೆ ಭಾರತೀಯ ಜೀವ ವಿಮಾ ನಿಗಮ ಹೊಂದಿರುವ ಪಾಲುದಾರಿಕೆಯನ್ನು 2020 ರ ಮಾರ್ಚ್ 30 ರವರೆಗೆ ವಿಸ್ತರಣೆ.</p>.<p>- ಕ್ರೀಡಾ ಇಲಾಖೆ ವತಿಯಿಂದ ರಾಯಚೂರು, ಹಾವೇರಿ, ಮಂಗಳೂರು, ಚಿಕ್ಕಮಗಳೂರು, ಮಂಡ್ಯ, ಕೋಲಾರ, ಚಾಮರಾಜನಗರ, ಕಲಬುರ್ಗಿ, ಧಾರವಾಡದಲ್ಲಿ ಮಹಿಳಾ ಕ್ರೀಡಾಪಟುಗಳಿಗೆ ಪ್ರತ್ಯೇಕ ವಸತಿ ನಿಲಯ ಸ್ಥಾಪಿಸಲು ₹15 ಕೋಟಿ ಆಡಳಿತಾತ್ಮಕ ಅನುಮೋದನೆ.</p>.<p>- ಕಲಬುರ್ಗಿ ಜಿಲ್ಲೆ ಅಫಜಲಪುರ ತಾಲ್ಲೂಕಿನಲ್ಲಿ ಭೀಮಾನದಿಗೆ ಸೇತುವೆ ಮತ್ತು ಬಾಂದಾರ ನಿರ್ಮಾಣಕ್ಕೆ ₹72 ಕೋಟಿ.</p>.<p>- ಧರ್ಮಸ್ಥಳ ಸಮೀಪದ ಮುಳಿಕಾರುವಿನಲ್ಲಿ ನೆರಿಯಾ ಹೊಳೆಗೆ ಕಿಂಡಿ ಅಣೆಕಟ್ಟು ನಿರ್ಮಿಸಲು ₹14.97 ಕೋಟಿಗೆ ಆಡಳಿತಾತ್ಮಕ ಅನುಮೋದನೆ.</p>.<p>- ಹೊಸಪೇಟೆ ತಾಲ್ಲೂಕಿನ ಪಾಪಿನಾಯಕನಹಳ್ಳಿ ಪ್ರದೇಶದಲ್ಲಿ ಗಣಿಗಾರಿಕೆಯಿಂದ ಬಾಧಿತ ಗ್ರಾಮಗಳಿಗೆ ಕುಡಿಯುವ ನೀರು ಒದಗಿಸಲು ತುಂಗಭದ್ರಾದಿಂದ ನೀರೆತ್ತಿ 18 ಕೆರೆಗಳು, 4 ಚೆಕ್ ಡ್ಯಾಂಗಳನ್ನು ತುಂಬಿಸಲು ₹243.35 ಕೋಟಿಗೆ ಯೋಜನೆಗೆ ಅನುಮೋದನೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>