<p><strong>ಕೊಪ್ಪಳ:</strong> ಸಾಮಾಜಿಕ ಕಳಕಳಿ ವ್ಯಕ್ತಪಡಿಸಿ ಇಲ್ಲಿನ ಮಾಸ್ತಿ ಪಬ್ಲಿಕ್ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಶ್ರೇಯಾಂಕ ವಿ.ಮೆಣಸಗಿ ಮುಖ್ಯಮಂತ್ರಿಗೆ ಬರೆದಿದ್ದ ಪತ್ರಕ್ಕೆ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿ ಉತ್ತರ ಬರೆದಿದ್ದಾರೆ.</p><p>ಶ್ರೇಯಾಂಕ ‘ನೀವು 2013ರಲ್ಲಿ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಅನ್ನಭಾಗ್ಯ, ಶೂ ಭಾಗ್ಯ ಸೇರಿದಂತೆ ಹಲವು ಜನಪರ ಕಾರ್ಯಗಳನ್ನು ಮಾಡಿದ್ದೀರಿ. ಈ ಬಾರಿಯೂ ಹಿಂದಿನಂತೆಯೇ ಉತ್ತಮ ಆಡಳಿತ ನೀಡಬೇಕು’ ಎಂದು ಪತ್ರ ಬರೆದಿದ್ದಳು.</p><p>ವಿದ್ಯಾರ್ಥಿನಿಯ ಪತ್ರಕ್ಕೆ ಉತ್ತರ ಬರೆದಿರುವ ಮುಖ್ಯಮಂತ್ರಿ ‘ತಾವು ಬರೆದ ಅಭಿನಂದನಾ ಪತ್ರ ತಲುಪಿದೆ. ಇಂದಿನ ಮಕ್ಕಳೇ ನಾಳಿನ ರಾಷ್ಟ್ರ ನಿರ್ಮಾತೃಗಳು. 8ನೇ ತರಗತಿ ಓದುತ್ತಿರುವ ನಿನಗಿರುವ ಸಾಮಾಜಿಕ ಕಳಕಳಿ ಮೆಚ್ಚುವಂಥದ್ದು. ಈ ಎಳೆಯ ವಯಸ್ಸಿನಲ್ಲಿಯೇ ಬಡವರು, ದೀನದಲಿತರು ಹಾಗೂ ರೈತರ ಬಗ್ಗೆ ನಿನ್ನ ಕಾಳಜಿ ಬೆರಗು ಮೂಡಿಸುತ್ತದೆ. ಜೀವನದಲ್ಲಿ ಶ್ರದ್ಧೆ ಮತ್ತು ಪರಿಶ್ರಮದಿಂದ ವಿದ್ಯೆ ಕಲಿತು ಸಮಾಜಕ್ಕೆ ಉತ್ತಮ ಕೊಡುಗೆ ನೀಡುವ ಮೂಲಕ ಇತರರಿಗೂ ಮಾದರಿಯಾಗು’ ಎಂದು ಹಾರೈಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ:</strong> ಸಾಮಾಜಿಕ ಕಳಕಳಿ ವ್ಯಕ್ತಪಡಿಸಿ ಇಲ್ಲಿನ ಮಾಸ್ತಿ ಪಬ್ಲಿಕ್ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಶ್ರೇಯಾಂಕ ವಿ.ಮೆಣಸಗಿ ಮುಖ್ಯಮಂತ್ರಿಗೆ ಬರೆದಿದ್ದ ಪತ್ರಕ್ಕೆ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿ ಉತ್ತರ ಬರೆದಿದ್ದಾರೆ.</p><p>ಶ್ರೇಯಾಂಕ ‘ನೀವು 2013ರಲ್ಲಿ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಅನ್ನಭಾಗ್ಯ, ಶೂ ಭಾಗ್ಯ ಸೇರಿದಂತೆ ಹಲವು ಜನಪರ ಕಾರ್ಯಗಳನ್ನು ಮಾಡಿದ್ದೀರಿ. ಈ ಬಾರಿಯೂ ಹಿಂದಿನಂತೆಯೇ ಉತ್ತಮ ಆಡಳಿತ ನೀಡಬೇಕು’ ಎಂದು ಪತ್ರ ಬರೆದಿದ್ದಳು.</p><p>ವಿದ್ಯಾರ್ಥಿನಿಯ ಪತ್ರಕ್ಕೆ ಉತ್ತರ ಬರೆದಿರುವ ಮುಖ್ಯಮಂತ್ರಿ ‘ತಾವು ಬರೆದ ಅಭಿನಂದನಾ ಪತ್ರ ತಲುಪಿದೆ. ಇಂದಿನ ಮಕ್ಕಳೇ ನಾಳಿನ ರಾಷ್ಟ್ರ ನಿರ್ಮಾತೃಗಳು. 8ನೇ ತರಗತಿ ಓದುತ್ತಿರುವ ನಿನಗಿರುವ ಸಾಮಾಜಿಕ ಕಳಕಳಿ ಮೆಚ್ಚುವಂಥದ್ದು. ಈ ಎಳೆಯ ವಯಸ್ಸಿನಲ್ಲಿಯೇ ಬಡವರು, ದೀನದಲಿತರು ಹಾಗೂ ರೈತರ ಬಗ್ಗೆ ನಿನ್ನ ಕಾಳಜಿ ಬೆರಗು ಮೂಡಿಸುತ್ತದೆ. ಜೀವನದಲ್ಲಿ ಶ್ರದ್ಧೆ ಮತ್ತು ಪರಿಶ್ರಮದಿಂದ ವಿದ್ಯೆ ಕಲಿತು ಸಮಾಜಕ್ಕೆ ಉತ್ತಮ ಕೊಡುಗೆ ನೀಡುವ ಮೂಲಕ ಇತರರಿಗೂ ಮಾದರಿಯಾಗು’ ಎಂದು ಹಾರೈಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>