<p><strong>ಬೆಂಗಳೂರು:</strong> ಕರ್ನಾಟಕದಲ್ಲಿರುವ ಕಾಂಗ್ರೆಸ್ ಸರ್ಕಾರವು ‘ಸೋಷಿಯಲ್ ಮೀಡಿಯಾ ಅನಾಲಿಟಿಕ್ಸ್ ಸಲ್ಯೂಷನ್ಸ್’ ಮೂಲಕ ಸದ್ದಿಲ್ಲದೇ ಸಾರ್ವಜನಿಕರ ಮೇಲೆ ಕಣ್ಗಾವಲಿಡುವ ವ್ಯವಸ್ಥೆ ಜಾರಿ ಮಾಡುತ್ತಿದೆ ಎಂದು ಬಿಜೆಪಿ ನಾಯಕರು ಆರೋಪ ಮಾಡಿದ್ದಾರೆ.</p>.<p>ಈ ಕುರಿತು ‘ಎಕ್ಸ್’ ಮಾಡಿರುವ ಬಿಜೆಪಿಯ ಅಮಿತ್ ಮಾಳವೀಯ ಅವರು, ‘ಸುಳ್ಳು ಸುದ್ದಿ ಮತ್ತು ಹಾನಿಕಾರ ಮಾಹಿತಿಯನ್ನು ಪತ್ತೆ ಮಾಡುವುದಕ್ಕಾಗಿ ಎಂದರೂ, ಜನ ಸಾಮಾನ್ಯರ ಸಾಮಾಜಿಕ ಮತ್ತು ವೈಯಕ್ತಿಕ ಡಿಜಿಟಲ್ ಸಂವಹನದೊಳಗೆ ಈ ತಂತ್ರಾಂಶ ಮೂಗು ತೂರಿಸುತ್ತದೆ’ ಎಂದು ಹೇಳಿದ್ದಾರೆ.</p>.<p>‘ಇದು ಸರ್ಕಾರಿ ಪ್ರಾಯೋಜಿತ ಕಣ್ಗಾವಲು. ಇದು ವೈಯಕ್ತಿಕ ಸ್ವಾತಂತ್ರ್ಯದ ಉಲ್ಲಂಘನೆ ಮತ್ತು ಖಾಸಗಿತನದ ಮೇಲಿನ ದಾಳಿ. ಕರ್ನಾಟಕವನ್ನು ಪೊಲೀಸ್ ರಾಜ್ಯವಾಗಿಸುವ ನಿಟ್ಟಿನಲ್ಲಿ ಒಂದು ಕ್ರೂರ ಹೆಜ್ಜೆ’ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.</p>.<p>‘ಸರ್ಕಾರಕ್ಕೆ ಜನರ ಮುಕ್ತ ಅಭಿಪ್ರಾಯ ಮತ್ತು ಆಲೋಚನೆಗಳ ಬಗ್ಗೆ ಭಯವಿದೆ. ಹೀಗಾಗಿ ನಿಗಾ ಮತ್ತು ರಕ್ಷಣೆ ಇತ್ಯಾದಿ ಪದಗಳನ್ನು ಬಳಸುತ್ತಿದೆ. ಈ ಮೂಲಕ ಜನರನ್ನು ಬೆದರಿಸುವ, ಮಾಹಿತಿ ಸಂಗ್ರಹಿಸುವ ಮತ್ತು ನಿಯಂತ್ರಣದಲ್ಲಿಡಲು ಪ್ರಯತ್ನಿಸುತ್ತಿದೆ. ಇದನ್ನು ನಾಗರಿಕ ಸಮಾಜ ಒಪ್ಪಲು ಸಾಧ್ಯವಿಲ್ಲ. ಈ ಹುನ್ನಾರವನ್ನು ಬಯಲಿಗೆಳೆಯುವ ಮೂಲಕ ಪ್ರಬಲವಾಗಿ ವಿರೋಧಿಸಲಾಗುವುದು’ ಎಂದು ಹೇಳಿದ್ದಾರೆ.</p>.<p><span class="bold"><strong>ವಿರೋಧಿಗಳ ಪತ್ತೆಗೆ ₹67 ಕೋಟಿ: </strong></span>‘ರಾಜ್ಯದ ಅಭಿವೃದ್ಧಿಗೆ ಹಣವಿಲ್ಲ. ನೌಕರರಿಗೆ ಸರಿಯಾಗಿ ಸಂಬಳ ಕೊಡುತ್ತಿಲ್ಲ. ದ್ವೇಷ ಭಾಷಣ ಪ್ರತಿಬಂಧಕ ಮಸೂದೆ ಬಗ್ಗೆ ಅಧಿವೇಶನದಲ್ಲಿ ಚರ್ಚೆ ಮಾಡಲು ಸರ್ಕಾರ ತಯಾರಿರಲಿಲ್ಲ. ತನ್ನ ವಿರುದ್ಧ ಮಾತನಾಡುವವರನ್ನು ಪತ್ತೆ ಮಾಡಲು ಕಾಂಗ್ರೆಸ್ ಸರ್ಕಾರ ₹67 ಕೋಟಿ ದುಂದು ವೆಚ್ಚ ಮಾಡುತ್ತಿದೆ’ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ ಟೀಕಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕರ್ನಾಟಕದಲ್ಲಿರುವ ಕಾಂಗ್ರೆಸ್ ಸರ್ಕಾರವು ‘ಸೋಷಿಯಲ್ ಮೀಡಿಯಾ ಅನಾಲಿಟಿಕ್ಸ್ ಸಲ್ಯೂಷನ್ಸ್’ ಮೂಲಕ ಸದ್ದಿಲ್ಲದೇ ಸಾರ್ವಜನಿಕರ ಮೇಲೆ ಕಣ್ಗಾವಲಿಡುವ ವ್ಯವಸ್ಥೆ ಜಾರಿ ಮಾಡುತ್ತಿದೆ ಎಂದು ಬಿಜೆಪಿ ನಾಯಕರು ಆರೋಪ ಮಾಡಿದ್ದಾರೆ.</p>.<p>ಈ ಕುರಿತು ‘ಎಕ್ಸ್’ ಮಾಡಿರುವ ಬಿಜೆಪಿಯ ಅಮಿತ್ ಮಾಳವೀಯ ಅವರು, ‘ಸುಳ್ಳು ಸುದ್ದಿ ಮತ್ತು ಹಾನಿಕಾರ ಮಾಹಿತಿಯನ್ನು ಪತ್ತೆ ಮಾಡುವುದಕ್ಕಾಗಿ ಎಂದರೂ, ಜನ ಸಾಮಾನ್ಯರ ಸಾಮಾಜಿಕ ಮತ್ತು ವೈಯಕ್ತಿಕ ಡಿಜಿಟಲ್ ಸಂವಹನದೊಳಗೆ ಈ ತಂತ್ರಾಂಶ ಮೂಗು ತೂರಿಸುತ್ತದೆ’ ಎಂದು ಹೇಳಿದ್ದಾರೆ.</p>.<p>‘ಇದು ಸರ್ಕಾರಿ ಪ್ರಾಯೋಜಿತ ಕಣ್ಗಾವಲು. ಇದು ವೈಯಕ್ತಿಕ ಸ್ವಾತಂತ್ರ್ಯದ ಉಲ್ಲಂಘನೆ ಮತ್ತು ಖಾಸಗಿತನದ ಮೇಲಿನ ದಾಳಿ. ಕರ್ನಾಟಕವನ್ನು ಪೊಲೀಸ್ ರಾಜ್ಯವಾಗಿಸುವ ನಿಟ್ಟಿನಲ್ಲಿ ಒಂದು ಕ್ರೂರ ಹೆಜ್ಜೆ’ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.</p>.<p>‘ಸರ್ಕಾರಕ್ಕೆ ಜನರ ಮುಕ್ತ ಅಭಿಪ್ರಾಯ ಮತ್ತು ಆಲೋಚನೆಗಳ ಬಗ್ಗೆ ಭಯವಿದೆ. ಹೀಗಾಗಿ ನಿಗಾ ಮತ್ತು ರಕ್ಷಣೆ ಇತ್ಯಾದಿ ಪದಗಳನ್ನು ಬಳಸುತ್ತಿದೆ. ಈ ಮೂಲಕ ಜನರನ್ನು ಬೆದರಿಸುವ, ಮಾಹಿತಿ ಸಂಗ್ರಹಿಸುವ ಮತ್ತು ನಿಯಂತ್ರಣದಲ್ಲಿಡಲು ಪ್ರಯತ್ನಿಸುತ್ತಿದೆ. ಇದನ್ನು ನಾಗರಿಕ ಸಮಾಜ ಒಪ್ಪಲು ಸಾಧ್ಯವಿಲ್ಲ. ಈ ಹುನ್ನಾರವನ್ನು ಬಯಲಿಗೆಳೆಯುವ ಮೂಲಕ ಪ್ರಬಲವಾಗಿ ವಿರೋಧಿಸಲಾಗುವುದು’ ಎಂದು ಹೇಳಿದ್ದಾರೆ.</p>.<p><span class="bold"><strong>ವಿರೋಧಿಗಳ ಪತ್ತೆಗೆ ₹67 ಕೋಟಿ: </strong></span>‘ರಾಜ್ಯದ ಅಭಿವೃದ್ಧಿಗೆ ಹಣವಿಲ್ಲ. ನೌಕರರಿಗೆ ಸರಿಯಾಗಿ ಸಂಬಳ ಕೊಡುತ್ತಿಲ್ಲ. ದ್ವೇಷ ಭಾಷಣ ಪ್ರತಿಬಂಧಕ ಮಸೂದೆ ಬಗ್ಗೆ ಅಧಿವೇಶನದಲ್ಲಿ ಚರ್ಚೆ ಮಾಡಲು ಸರ್ಕಾರ ತಯಾರಿರಲಿಲ್ಲ. ತನ್ನ ವಿರುದ್ಧ ಮಾತನಾಡುವವರನ್ನು ಪತ್ತೆ ಮಾಡಲು ಕಾಂಗ್ರೆಸ್ ಸರ್ಕಾರ ₹67 ಕೋಟಿ ದುಂದು ವೆಚ್ಚ ಮಾಡುತ್ತಿದೆ’ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ ಟೀಕಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>