<p><strong>ಬೆಂಗಳೂರು:</strong> ಪದವಿಪೂರ್ವ ಶಿಕ್ಷಣ ಇಲಾಖೆಯು ಇದೇ ಶೈಕ್ಷಣಿಕ ವರ್ಷದಿಂದ ವಾಣಿಜ್ಯ ವಿಭಾಗದ ಸಂಯೋಜನೆಯಲ್ಲಿ ಸಮಾಜಶಾಸ್ತ್ರವನ್ನು ಪರಿಚಯಿಸಿದೆ. ಇದರಿಂದಾಗಿ ಲೆಕ್ಕ–ವ್ಯವಹಾರದ ಅಭ್ಯಾಸದೊಂದಿಗೆ ಮಾನವಿಕ ವಿಜ್ಞಾನ ಕಲಿಯುವ ಅವಕಾಶ ವಿದ್ಯಾರ್ಥಿಗಳಿಗೆ ದಕ್ಕುತ್ತಿದೆ.</p>.<p>ವಾಣಿಜ್ಯದಲ್ಲಿ ಈ ವಿಷಯವನ್ನು ಸೇರ್ಪಡೆ ಮಾಡಿಕೊಳ್ಳುವ ಕಾಲೇಜಿನ ವಿದ್ಯಾರ್ಥಿಗಳು ಇನ್ನು ಮುಂದೆ ಮಾರುಕಟ್ಟೆ, ವ್ಯವಹಾರ ಸಂಬಂಧದೊಂದಿಗೆ ಸಮಾಜದ ರಚನೆ, ಸಾಮಾಜಿಕ ಸಂಬಂಧಗಳು ಮತ್ತು ಸ್ಥಿತ್ಯಂತರಗಳು, ಕೌಟುಂಬಿಕ ವ್ಯವಸ್ಥೆಯ ಕುರಿತು ಸಹ ಅಧ್ಯಯನ ಮಾಡಲಿದ್ದಾರೆ.</p>.<p>‘ಕಾಲೇಜುಗಳಲ್ಲಿ ಈಗಾಗಲೇ ಸಮಾಜಶಾಸ್ತ್ರ ವಿಷಯ ಇದ್ದರೆ, ವಾಣಿಜ್ಯ ವಿದ್ಯಾರ್ಥಿಗಳು ಲೆಕ್ಕಶಾಸ್ತ್ರ, ವ್ಯವಹಾರ ಅಧ್ಯಯನ ಮತ್ತು ಅರ್ಥಶಾಸ್ತ್ರದೊಂದಿಗೆ ಅದನ್ನು ಆಯ್ಕೆಯಾಗಿ ತೆಗೆದುಕೊಳ್ಳಬಹುದು. ಈ ವಿಷಯದ ಆಯ್ಕೆಯನ್ನು ಬಯಸುವ ಅನುದಾನಿತ, ಖಾಸಗಿ ಕಾಲೇಜುಗಳು ಪಿ.ಯು.ಮಂಡಳಿಯಿಂದ ಅನುಮತಿ ಪಡೆಯಬೇಕು’ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕ(ಶೈಕ್ಷಣಿಕ) ಅಸಾದುಲ್ಲಾಖಾನ್ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ವಾಣಿಜ್ಯ ವಿಭಾಗದಲ್ಲಿ ಈ ಸಾಮಾಜಿಕ ವಿಜ್ಞಾನವನ್ನು ಐಚ್ಛಿಕ ವಿಷಯವಾಗಿ ಸೇರ್ಪಡೆ ಮಾಡಲು ಶಿಕ್ಷಣ ತಜ್ಞರು, ಹಿರಿಯ ಉಪನ್ಯಾಸಕರು, ಪ್ರಾಂಶುಪಾಲರುಕಳೆದ ವರ್ಷ ನಡೆದ ಸಭೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಗೆ ಶಿಫಾರಸು ಮಾಡಿದ್ದರು. ‘ಪ್ರಸ್ತುತ ಸಾಮಾಜಿಕ ಸಂದರ್ಭದಲ್ಲಿ ಈ ವಿಷಯದ ಅಧ್ಯಯನ ಅನಿವಾರ್ಯ’ ಎಂದು ನ್ಯಾಷನಲ್ ಎಜುಕೇಷನ್ ಸೊಸೈಟಿ ಆಫ್ ಕರ್ನಾಟಕವು ಸಹ ಒತ್ತಾಯಿಸಿತ್ತು. ಈ ಹಿನ್ನಲೆಯಲ್ಲಿ, ಇಲಾಖೆಗೆ ಯಾವುದೇ ಆರ್ಥಿಕ ಹೊರೆಯಾಗದಂತೆ ಇರುವ ಸಂಪನ್ಮೂಲ ಬಳಸಿಕೊಂಡು ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಕಾಲೇಜುಗಳ ವಾಣಿಜ್ಯ ವಿಭಾಗಗಳಲ್ಲಿ ಸಮಾಜಶಾಸ್ತ್ರ ವಿಷಯವನ್ನು ಅಧ್ಯಯನ ಮಾಡಲು ವಿದ್ಯಾರ್ಥಿಗಳಿಗೆ ಅವಕಾಶ ನೀಡಬಹುದು ಎಂದು ಇಲಾಖೆ ಆದೇಶ ಹೊರಡಿಸಿತ್ತು.</p>.<p><strong>1979ರಲ್ಲಿಯೇ ಈ ಸಂಯೋಜನೆ ಇತ್ತು</strong></p>.<p>ಪಿ.ಯು.ಶಿಕ್ಷಣದ ವಾಣಿಜ್ಯ ವಿಭಾಗದಲ್ಲಿ 1979–80ನೇ ಸಾಲಿನವರೆಗೆ ಸಮಾಜಶಾಸ್ತ್ರವನ್ನು ಐಚ್ಛಿಕವಾಗಿ ಬೋಧಿಸಲಾಗುತ್ತಿತ್ತು. ಈ ಅವಕಾಶ ರದ್ದುಪಡಿಸಿರುವ ಆದೇಶ ಇಲಾಖೆಯಲ್ಲಿ ಇಲ್ಲ.</p>.<p>ಪ್ರೌಢಶಿಕ್ಷಣ ಹಂತದಲ್ಲಿ ಸಮಾಜ ವಿಜ್ಞಾನದಲ್ಲಿ ಈ ಐಚ್ಛಿಕ ವಿಷಯವನ್ನು ಬೋಧಿಸಲಾಗುತ್ತಿದೆ. ಪಿ.ಯು. ಹಂತದಲ್ಲಿ ಇದನ್ನು ಪರಿಚಯಿಸುವುದರಿಂದ ಆಸಕ್ತ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂಬುದು ಇಲಾಖೆಯ ಸಮರ್ಥನೆ.ಸಮಾಜಶಾಸ್ತ್ರ ಉಪನ್ಯಾಸಕರ 1,160 ಹುದ್ದೆಗಳು ಮಂಜೂರಾಗಿದ್ದು, ಈ ಐಚ್ಛಿಕ ವಿಷಯ ಸೇರ್ಪಡೆ ಆಗುವುದರಿಂದ ಬೋಧನಾ ಹಾಗೂ ಆರ್ಥಿಕ ಹೊರೆ ಆಗುವುದಿಲ್ಲ ಎಂದು ಇಲಾಖೆಯ ನಿರ್ದೇಶಕರು ಅಭಿಪ್ರಾಯಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಪದವಿಪೂರ್ವ ಶಿಕ್ಷಣ ಇಲಾಖೆಯು ಇದೇ ಶೈಕ್ಷಣಿಕ ವರ್ಷದಿಂದ ವಾಣಿಜ್ಯ ವಿಭಾಗದ ಸಂಯೋಜನೆಯಲ್ಲಿ ಸಮಾಜಶಾಸ್ತ್ರವನ್ನು ಪರಿಚಯಿಸಿದೆ. ಇದರಿಂದಾಗಿ ಲೆಕ್ಕ–ವ್ಯವಹಾರದ ಅಭ್ಯಾಸದೊಂದಿಗೆ ಮಾನವಿಕ ವಿಜ್ಞಾನ ಕಲಿಯುವ ಅವಕಾಶ ವಿದ್ಯಾರ್ಥಿಗಳಿಗೆ ದಕ್ಕುತ್ತಿದೆ.</p>.<p>ವಾಣಿಜ್ಯದಲ್ಲಿ ಈ ವಿಷಯವನ್ನು ಸೇರ್ಪಡೆ ಮಾಡಿಕೊಳ್ಳುವ ಕಾಲೇಜಿನ ವಿದ್ಯಾರ್ಥಿಗಳು ಇನ್ನು ಮುಂದೆ ಮಾರುಕಟ್ಟೆ, ವ್ಯವಹಾರ ಸಂಬಂಧದೊಂದಿಗೆ ಸಮಾಜದ ರಚನೆ, ಸಾಮಾಜಿಕ ಸಂಬಂಧಗಳು ಮತ್ತು ಸ್ಥಿತ್ಯಂತರಗಳು, ಕೌಟುಂಬಿಕ ವ್ಯವಸ್ಥೆಯ ಕುರಿತು ಸಹ ಅಧ್ಯಯನ ಮಾಡಲಿದ್ದಾರೆ.</p>.<p>‘ಕಾಲೇಜುಗಳಲ್ಲಿ ಈಗಾಗಲೇ ಸಮಾಜಶಾಸ್ತ್ರ ವಿಷಯ ಇದ್ದರೆ, ವಾಣಿಜ್ಯ ವಿದ್ಯಾರ್ಥಿಗಳು ಲೆಕ್ಕಶಾಸ್ತ್ರ, ವ್ಯವಹಾರ ಅಧ್ಯಯನ ಮತ್ತು ಅರ್ಥಶಾಸ್ತ್ರದೊಂದಿಗೆ ಅದನ್ನು ಆಯ್ಕೆಯಾಗಿ ತೆಗೆದುಕೊಳ್ಳಬಹುದು. ಈ ವಿಷಯದ ಆಯ್ಕೆಯನ್ನು ಬಯಸುವ ಅನುದಾನಿತ, ಖಾಸಗಿ ಕಾಲೇಜುಗಳು ಪಿ.ಯು.ಮಂಡಳಿಯಿಂದ ಅನುಮತಿ ಪಡೆಯಬೇಕು’ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕ(ಶೈಕ್ಷಣಿಕ) ಅಸಾದುಲ್ಲಾಖಾನ್ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ವಾಣಿಜ್ಯ ವಿಭಾಗದಲ್ಲಿ ಈ ಸಾಮಾಜಿಕ ವಿಜ್ಞಾನವನ್ನು ಐಚ್ಛಿಕ ವಿಷಯವಾಗಿ ಸೇರ್ಪಡೆ ಮಾಡಲು ಶಿಕ್ಷಣ ತಜ್ಞರು, ಹಿರಿಯ ಉಪನ್ಯಾಸಕರು, ಪ್ರಾಂಶುಪಾಲರುಕಳೆದ ವರ್ಷ ನಡೆದ ಸಭೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಗೆ ಶಿಫಾರಸು ಮಾಡಿದ್ದರು. ‘ಪ್ರಸ್ತುತ ಸಾಮಾಜಿಕ ಸಂದರ್ಭದಲ್ಲಿ ಈ ವಿಷಯದ ಅಧ್ಯಯನ ಅನಿವಾರ್ಯ’ ಎಂದು ನ್ಯಾಷನಲ್ ಎಜುಕೇಷನ್ ಸೊಸೈಟಿ ಆಫ್ ಕರ್ನಾಟಕವು ಸಹ ಒತ್ತಾಯಿಸಿತ್ತು. ಈ ಹಿನ್ನಲೆಯಲ್ಲಿ, ಇಲಾಖೆಗೆ ಯಾವುದೇ ಆರ್ಥಿಕ ಹೊರೆಯಾಗದಂತೆ ಇರುವ ಸಂಪನ್ಮೂಲ ಬಳಸಿಕೊಂಡು ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಕಾಲೇಜುಗಳ ವಾಣಿಜ್ಯ ವಿಭಾಗಗಳಲ್ಲಿ ಸಮಾಜಶಾಸ್ತ್ರ ವಿಷಯವನ್ನು ಅಧ್ಯಯನ ಮಾಡಲು ವಿದ್ಯಾರ್ಥಿಗಳಿಗೆ ಅವಕಾಶ ನೀಡಬಹುದು ಎಂದು ಇಲಾಖೆ ಆದೇಶ ಹೊರಡಿಸಿತ್ತು.</p>.<p><strong>1979ರಲ್ಲಿಯೇ ಈ ಸಂಯೋಜನೆ ಇತ್ತು</strong></p>.<p>ಪಿ.ಯು.ಶಿಕ್ಷಣದ ವಾಣಿಜ್ಯ ವಿಭಾಗದಲ್ಲಿ 1979–80ನೇ ಸಾಲಿನವರೆಗೆ ಸಮಾಜಶಾಸ್ತ್ರವನ್ನು ಐಚ್ಛಿಕವಾಗಿ ಬೋಧಿಸಲಾಗುತ್ತಿತ್ತು. ಈ ಅವಕಾಶ ರದ್ದುಪಡಿಸಿರುವ ಆದೇಶ ಇಲಾಖೆಯಲ್ಲಿ ಇಲ್ಲ.</p>.<p>ಪ್ರೌಢಶಿಕ್ಷಣ ಹಂತದಲ್ಲಿ ಸಮಾಜ ವಿಜ್ಞಾನದಲ್ಲಿ ಈ ಐಚ್ಛಿಕ ವಿಷಯವನ್ನು ಬೋಧಿಸಲಾಗುತ್ತಿದೆ. ಪಿ.ಯು. ಹಂತದಲ್ಲಿ ಇದನ್ನು ಪರಿಚಯಿಸುವುದರಿಂದ ಆಸಕ್ತ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂಬುದು ಇಲಾಖೆಯ ಸಮರ್ಥನೆ.ಸಮಾಜಶಾಸ್ತ್ರ ಉಪನ್ಯಾಸಕರ 1,160 ಹುದ್ದೆಗಳು ಮಂಜೂರಾಗಿದ್ದು, ಈ ಐಚ್ಛಿಕ ವಿಷಯ ಸೇರ್ಪಡೆ ಆಗುವುದರಿಂದ ಬೋಧನಾ ಹಾಗೂ ಆರ್ಥಿಕ ಹೊರೆ ಆಗುವುದಿಲ್ಲ ಎಂದು ಇಲಾಖೆಯ ನಿರ್ದೇಶಕರು ಅಭಿಪ್ರಾಯಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>