<p><strong>ಬೆಂಗಳೂರು</strong>: ‘ಮೇಲ್ಜಾತಿಗಳನ್ನು ತುಳಿಯುವ ಸಲುವಾಗಿ ಜಾತಿವಾರು ಸಮೀಕ್ಷೆ ಮಾಡಲಾಗುತ್ತಿದೆ. ಸಿದ್ದರಾಮಯ್ಯ ಸರ್ಕಾರ ತಕ್ಷಣವೇ ಈ ಸಮೀಕ್ಷೆಯನ್ನು ನಿಲ್ಲಿಸಬೇಕು’ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಆಗ್ರಹಿಸಿದರು.</p><p>ನಗರದಲ್ಲಿ ಸುದ್ದಿಗಾರರ ಜತೆ ಭಾನುವಾರ ಮಾತನಾಡಿದ ಅವರು, ‘ಸಮೀಕ್ಷಕರು ನಮ್ಮ ಮನೆಗೂ ಬಂದಿದ್ದರು. ನನ್ನೊಬ್ಬನಿಂದ ಮಾಹಿತಿ ಪಡೆಯಲು 1 ಗಂಟೆ 4 ನಿಮಿಷ ಬೇಕಾಯಿತು. ತಾಂತ್ರಿಕ ಸಮಸ್ಯೆ ಒಂದೆಡೆಯಾದರೆ, ಅನಗತ್ಯವಾದ ಪ್ರಶ್ನೆಗಳು ಒಂದೆಡೆ. ಅಗತ್ಯವಿಲ್ಲದೆ ಪ್ರಶ್ನೆಗಳನ್ನು ಏಕೆ ಕೇಳುತ್ತಿದ್ದೀರಿ’ ಎಂದು ಪ್ರಶ್ನಿಸಿದರು.</p><p>‘ಮೇಲ್ಜಾತಿ ಅಥವಾ ಯಾವುದೋ ಜಾತಿಗಳನ್ನು ತುಳಿಯುವ ಸಲುವಾಗಿ ಇಷ್ಟೆಲ್ಲಾ ಅಸಹ್ಯಕರವಾದ ಸಮೀಕ್ಷೆಯನ್ನು ನಡೆಸುತ್ತಿದ್ದಾರೆ. ಸಮೀಕ್ಷೆ ಬಗ್ಗೆ ಅಧಿಕಾರಿಗಳಿಗೇ ಪೂರ್ಣ ಮಾಹಿತಿ ಇಲ್ಲ. ಇದು ಇನ್ನೊಂದು ಕಾಂತರಾಜ ಆಯೋಗದ ಸಮೀಕ್ಷೆಯಂತಾಗುತ್ತದೆ. ಈ ಎಲ್ಲ ಗೊಂದಲಗಳಿಗೆ ತೆರೆ ಎಳೆಯಬೇಕು’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p><p>‘ಅತ್ಯಂತ ಅವೈಜ್ಞಾನಿಕವಾಗಿ ಈ ಸಮೀಕ್ಷೆ ನಡೆಸಲಾಗುತ್ತಿದೆ. ಆರು ತಿಂಗಳು– ವರ್ಷವಾದರೂ ಸಮೀಕ್ಷೆ ಮುಗಿಯುವುದಿಲ್ಲ’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಮೇಲ್ಜಾತಿಗಳನ್ನು ತುಳಿಯುವ ಸಲುವಾಗಿ ಜಾತಿವಾರು ಸಮೀಕ್ಷೆ ಮಾಡಲಾಗುತ್ತಿದೆ. ಸಿದ್ದರಾಮಯ್ಯ ಸರ್ಕಾರ ತಕ್ಷಣವೇ ಈ ಸಮೀಕ್ಷೆಯನ್ನು ನಿಲ್ಲಿಸಬೇಕು’ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಆಗ್ರಹಿಸಿದರು.</p><p>ನಗರದಲ್ಲಿ ಸುದ್ದಿಗಾರರ ಜತೆ ಭಾನುವಾರ ಮಾತನಾಡಿದ ಅವರು, ‘ಸಮೀಕ್ಷಕರು ನಮ್ಮ ಮನೆಗೂ ಬಂದಿದ್ದರು. ನನ್ನೊಬ್ಬನಿಂದ ಮಾಹಿತಿ ಪಡೆಯಲು 1 ಗಂಟೆ 4 ನಿಮಿಷ ಬೇಕಾಯಿತು. ತಾಂತ್ರಿಕ ಸಮಸ್ಯೆ ಒಂದೆಡೆಯಾದರೆ, ಅನಗತ್ಯವಾದ ಪ್ರಶ್ನೆಗಳು ಒಂದೆಡೆ. ಅಗತ್ಯವಿಲ್ಲದೆ ಪ್ರಶ್ನೆಗಳನ್ನು ಏಕೆ ಕೇಳುತ್ತಿದ್ದೀರಿ’ ಎಂದು ಪ್ರಶ್ನಿಸಿದರು.</p><p>‘ಮೇಲ್ಜಾತಿ ಅಥವಾ ಯಾವುದೋ ಜಾತಿಗಳನ್ನು ತುಳಿಯುವ ಸಲುವಾಗಿ ಇಷ್ಟೆಲ್ಲಾ ಅಸಹ್ಯಕರವಾದ ಸಮೀಕ್ಷೆಯನ್ನು ನಡೆಸುತ್ತಿದ್ದಾರೆ. ಸಮೀಕ್ಷೆ ಬಗ್ಗೆ ಅಧಿಕಾರಿಗಳಿಗೇ ಪೂರ್ಣ ಮಾಹಿತಿ ಇಲ್ಲ. ಇದು ಇನ್ನೊಂದು ಕಾಂತರಾಜ ಆಯೋಗದ ಸಮೀಕ್ಷೆಯಂತಾಗುತ್ತದೆ. ಈ ಎಲ್ಲ ಗೊಂದಲಗಳಿಗೆ ತೆರೆ ಎಳೆಯಬೇಕು’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p><p>‘ಅತ್ಯಂತ ಅವೈಜ್ಞಾನಿಕವಾಗಿ ಈ ಸಮೀಕ್ಷೆ ನಡೆಸಲಾಗುತ್ತಿದೆ. ಆರು ತಿಂಗಳು– ವರ್ಷವಾದರೂ ಸಮೀಕ್ಷೆ ಮುಗಿಯುವುದಿಲ್ಲ’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>