<p><strong>ಕುಶಾಲನಗರ: </strong>ಉತ್ತರ ಕೊಡಗಿನ ಆನೆಕಾಡು ಹಾಗೂ ಮಾಲ್ದಾರ್ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿಯನ್ನು ನಿಯಂತ್ರಿಸಲು ಅರಣ್ಯದಂಚಿನಲ್ಲಿ ಅಳವಡಿಸಿದ್ದ ಸೌರಬೇಲಿ ಕಿತ್ತು ಹೋಗಿದ್ದು, ಕಾಡಂಚಿನ ಗ್ರಾಮಗಳ ಜನರಿಗೆ ಕಾಡುಪ್ರಾಣಿಗಳ ಭೀತಿ ಎದುರಾಗಿದೆ.</p>.<p>ಕಳೆದ ಮೂರು ವರ್ಷಗಳ ಹಿಂದೆ ಅರಣ್ಯ ಇಲಾಖೆಯು ಏಳನೇ ಹೊಸಕೋಟೆ ಮೇಟ್ನಹಳ್ಳದಿಂದ ಕಂಬಿಬಾಣೆ ಗ್ರಾ.ಪಂ ವ್ಯಾಪ್ತಿಯ ಚಿಕ್ಲಿಹೊಳೆ ಜಲಾಶಯದವರೆಗಿನ 6 ಕಿ.ಮೀ ದೂರದವರೆಗೆ ಸೌರಬೇಲಿಯನ್ನು ಅಳವಡಿಸಲಾಗಿತ್ತು. ಈ ಬೇಲಿಯ ತಂತಿಗಳು ತುಂಡಾಗಿದ್ದು, ನಿರಂತರವಾಗಿ ಕಾಡಾನೆ ಹಿಂಡು ಕಾಫಿ ತೋಟಗಳಿಗೆ ಹಾಗೂ ಜನವಸತಿ ಪ್ರದೇಶಗಳಿಗೆ ಲಗ್ಗೆ ಇಡುತ್ತಿವೆ. ರೈತರು ತಾವು ಬೆಳೆದ ಬೆಳೆಯನ್ನು ರಕ್ಷಿಸಿಕೊಳ್ಳಲು ನಿತ್ಯವೂ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.</p>.<p>₹60 ಲಕ್ಷ ವೆಚ್ಚದಲ್ಲಿ ಅಳವಡಿಸಿರುವ ಸೌರಬೇಲಿ ಕಳಪೆ ಗುಣಮಟ್ಟದಿಂದ ಕೂಡಿದ್ದು, ಕೆಲವೆಡೆ ಬೇಲಿಗಳು ಮುರಿದು ಬಿದ್ದಿವೆ. ಇವುಗಳನ್ನು ದುರಸ್ತಿಪಡಿಸಬೇಕು ಎಂದು ಕಾಡಂಚಿನ ಗ್ರಾಮಸ್ಥರು ಆಗ್ರಹಿಸಿದ್ದಾರೆ.</p>.<p>ಮಾಲ್ದಾರ್ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲೂ ಸೌರಬೇಲಿ ಅಳವಡಿಸಿದ್ದು, ಅಲ್ಲಿಯೂ ತಂತಿ ಬೇಲಿಗಳು ತುಂಡಾಗಿವೆ. ಮೈಸೂರಿನ ಗುತ್ತಿಗೆದಾರರ ಅಂಬರೀಷ್ ಎಂಬುವರು ಸೌರಬೇಲಿ ಅಳವಡಿಕೆ ಕಾಮಗಾರಿ ನಡೆಸಿದ್ದು, ಯೋಜನೆ ಪ್ರಕಾರ ಕಾಮಗಾರಿಯನ್ನು ಪೂರ್ಣಗೊಳಿಸಿಲ್ಲ. ಕಳಪೆ ಗುಣಮಟ್ಟದ ತಂತಿಗಳನ್ನು ಅಳವಡಿಸಲಾಗಿದೆ. ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಜಿ.ಪಂ ಮಾಜಿ ಸದಸ್ಯ ಆರ್.ಕೆ.ಚಂದ್ರು ಒತ್ತಾಯಿಸಿದ್ದಾರೆ.</p>.<p>ಸೌರಬೇಲಿ ಮುರಿದು ಬಿದ್ದಿರುವುದರಿಂದ ಬೇಟೆಗಾರರು ಹಾಗೂ ಮರಗಳ್ಳರು ಸುಲಭವಾಗಿ ಅರಣ್ಯದೊಳಗೆ ಪ್ರವೇಶಿಸುವಂತಾಗಿದೆ. ಈ ಮೊದಲು ಇಲಾಖೆ ಅಧಿಕಾರಿಗಳ ಕಣ್ಣು ತಪ್ಪಿಸಿ ಬೇಟೆಗಾರರು ಹಾಗೂ ಮರಗಳ್ಳರು ಅಡ್ಡದಾರಿ ಮೂಲಕ ಕಾಡಿನೊಳಗೆ ಪ್ರವೇಶಿಸುತ್ತಿದ್ದರು. ಆದರೀಗ ಸುಲಭವಾಗಿ ಕಾಡು ಪ್ರವೇಶಿಸಿ ಬೇಟೆಯಾಡಲು ದಾರಿ ಸಿಕ್ಕಂತಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಶಾಲನಗರ: </strong>ಉತ್ತರ ಕೊಡಗಿನ ಆನೆಕಾಡು ಹಾಗೂ ಮಾಲ್ದಾರ್ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿಯನ್ನು ನಿಯಂತ್ರಿಸಲು ಅರಣ್ಯದಂಚಿನಲ್ಲಿ ಅಳವಡಿಸಿದ್ದ ಸೌರಬೇಲಿ ಕಿತ್ತು ಹೋಗಿದ್ದು, ಕಾಡಂಚಿನ ಗ್ರಾಮಗಳ ಜನರಿಗೆ ಕಾಡುಪ್ರಾಣಿಗಳ ಭೀತಿ ಎದುರಾಗಿದೆ.</p>.<p>ಕಳೆದ ಮೂರು ವರ್ಷಗಳ ಹಿಂದೆ ಅರಣ್ಯ ಇಲಾಖೆಯು ಏಳನೇ ಹೊಸಕೋಟೆ ಮೇಟ್ನಹಳ್ಳದಿಂದ ಕಂಬಿಬಾಣೆ ಗ್ರಾ.ಪಂ ವ್ಯಾಪ್ತಿಯ ಚಿಕ್ಲಿಹೊಳೆ ಜಲಾಶಯದವರೆಗಿನ 6 ಕಿ.ಮೀ ದೂರದವರೆಗೆ ಸೌರಬೇಲಿಯನ್ನು ಅಳವಡಿಸಲಾಗಿತ್ತು. ಈ ಬೇಲಿಯ ತಂತಿಗಳು ತುಂಡಾಗಿದ್ದು, ನಿರಂತರವಾಗಿ ಕಾಡಾನೆ ಹಿಂಡು ಕಾಫಿ ತೋಟಗಳಿಗೆ ಹಾಗೂ ಜನವಸತಿ ಪ್ರದೇಶಗಳಿಗೆ ಲಗ್ಗೆ ಇಡುತ್ತಿವೆ. ರೈತರು ತಾವು ಬೆಳೆದ ಬೆಳೆಯನ್ನು ರಕ್ಷಿಸಿಕೊಳ್ಳಲು ನಿತ್ಯವೂ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.</p>.<p>₹60 ಲಕ್ಷ ವೆಚ್ಚದಲ್ಲಿ ಅಳವಡಿಸಿರುವ ಸೌರಬೇಲಿ ಕಳಪೆ ಗುಣಮಟ್ಟದಿಂದ ಕೂಡಿದ್ದು, ಕೆಲವೆಡೆ ಬೇಲಿಗಳು ಮುರಿದು ಬಿದ್ದಿವೆ. ಇವುಗಳನ್ನು ದುರಸ್ತಿಪಡಿಸಬೇಕು ಎಂದು ಕಾಡಂಚಿನ ಗ್ರಾಮಸ್ಥರು ಆಗ್ರಹಿಸಿದ್ದಾರೆ.</p>.<p>ಮಾಲ್ದಾರ್ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲೂ ಸೌರಬೇಲಿ ಅಳವಡಿಸಿದ್ದು, ಅಲ್ಲಿಯೂ ತಂತಿ ಬೇಲಿಗಳು ತುಂಡಾಗಿವೆ. ಮೈಸೂರಿನ ಗುತ್ತಿಗೆದಾರರ ಅಂಬರೀಷ್ ಎಂಬುವರು ಸೌರಬೇಲಿ ಅಳವಡಿಕೆ ಕಾಮಗಾರಿ ನಡೆಸಿದ್ದು, ಯೋಜನೆ ಪ್ರಕಾರ ಕಾಮಗಾರಿಯನ್ನು ಪೂರ್ಣಗೊಳಿಸಿಲ್ಲ. ಕಳಪೆ ಗುಣಮಟ್ಟದ ತಂತಿಗಳನ್ನು ಅಳವಡಿಸಲಾಗಿದೆ. ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಜಿ.ಪಂ ಮಾಜಿ ಸದಸ್ಯ ಆರ್.ಕೆ.ಚಂದ್ರು ಒತ್ತಾಯಿಸಿದ್ದಾರೆ.</p>.<p>ಸೌರಬೇಲಿ ಮುರಿದು ಬಿದ್ದಿರುವುದರಿಂದ ಬೇಟೆಗಾರರು ಹಾಗೂ ಮರಗಳ್ಳರು ಸುಲಭವಾಗಿ ಅರಣ್ಯದೊಳಗೆ ಪ್ರವೇಶಿಸುವಂತಾಗಿದೆ. ಈ ಮೊದಲು ಇಲಾಖೆ ಅಧಿಕಾರಿಗಳ ಕಣ್ಣು ತಪ್ಪಿಸಿ ಬೇಟೆಗಾರರು ಹಾಗೂ ಮರಗಳ್ಳರು ಅಡ್ಡದಾರಿ ಮೂಲಕ ಕಾಡಿನೊಳಗೆ ಪ್ರವೇಶಿಸುತ್ತಿದ್ದರು. ಆದರೀಗ ಸುಲಭವಾಗಿ ಕಾಡು ಪ್ರವೇಶಿಸಿ ಬೇಟೆಯಾಡಲು ದಾರಿ ಸಿಕ್ಕಂತಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>