<p><strong>ಹೊಸಕೋಟೆ (ಬೆಂಗಳೂರು ಗ್ರಾ):</strong> ವಿದ್ಯುತ್ ಕೊರತೆ ತಗ್ಗಿಸಲು ಹಾಗೂ ರೈತರಿಗೆ ಹಗಲಿನ ವೇಳೆ ವಿದ್ಯುತ್ ಪೂರೈಕೆ ಮಾಡಲು ರಾಜ್ಯದ ನೂರು ಕಡೆ ಸೋಲಾರ್ ಘಟಕ ಸ್ಥಾಪಿಸಿ ಎರಡು ಸಾವಿರ ಮೆಗಾ ವಾಟ್ ವಿದ್ಯುತ್ ಉತ್ಪಾದನೆಗೆ ಯೋಜನೆ ರೂಪಿಸಲಾಗುತ್ತಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ.</p>.<p>ಗುರುವಾರ ಯಲಚಹಳ್ಳಿ ಕೆರೆ ಅಂಗಳದಲ್ಲಿ ಸೌರ ಘಟಕ ಉದ್ಘಾಟಿಸಿ ಮಾತನಾಡಿದ ಅವರು, ಖಾಸಗಿ ವಲಯಗಳಿಂದ ಸುಮಾರು ₹10,000 ಕೋಟಿ ಹೂಡಿಕೆಗೆ ಅವಕಾಶ ಕಲ್ಪಿಸಲಾಗುವುದು ಎಂದರು.</p>.<p>ಪಾವಗಡದಲ್ಲಿ ರೈತರ ಭೂಮಿ ಒತ್ತುವರಿ ಮಾಡದೆ ಬಾಡಿಗೆ ಪಡೆದು ಸುಮಾರು ಸೋಲಾರ್ ಘಟಕ ಸ್ಥಾಪಿಸಿ 2,000 ಮೆಗಾ ವಾಟ್ ವಿದ್ಯುತ್  ಉತ್ಪಾದಿಸಲಾಗುತ್ತಿದೆ. ಇಷ್ಟಾದರೂ ವಿದ್ಯುತ್ ಕೊರತೆ ಕಾಡುತ್ತಿದೆ ಎಂದರು. </p>.<p>ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ 8-9 ಸಾವಿರ ಮೆಗಾ ವಾಟ್ನಷ್ಟಿದ್ದ ವಿದ್ಯುತ್ ಬೇಡಿಕೆ ಏಕಾಏಕಿ 18 ಸಾವಿರ ಮೆಗಾ ವಾಟ್ಗೆ ಏರಿಕೆಯಾಯಿತು. ಇದನ್ನು ಸರಿದೂಗಿಸಲು 120 ಹೊಸ ಸಬ್ ಸ್ಟೇಷನ್ ನಿರ್ಮಿಸಲಾಗುವುದು ಎಂದು ಜಾರ್ಜ್ ತಿಳಿಸಿದರು.</p>.<p>ಪರಿಸರಕ್ಕೆ ಹಾನಿಯಾಗದಂತೆ ಶರಾವತಿ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಕಾಮಗಾರಿ ಕೈಗೊಳ್ಳಲಾಗುವುದು. ಇದರಿಂದ ರಾಜ್ಯಕ್ಕೆ ಹೆಚ್ಚುವರಿಯಾಗಿ 3,000 ಮೆಗಾ ವಾಟ್ ವಿದ್ಯುತ್ ಸಿಗಲಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಕೋಟೆ (ಬೆಂಗಳೂರು ಗ್ರಾ):</strong> ವಿದ್ಯುತ್ ಕೊರತೆ ತಗ್ಗಿಸಲು ಹಾಗೂ ರೈತರಿಗೆ ಹಗಲಿನ ವೇಳೆ ವಿದ್ಯುತ್ ಪೂರೈಕೆ ಮಾಡಲು ರಾಜ್ಯದ ನೂರು ಕಡೆ ಸೋಲಾರ್ ಘಟಕ ಸ್ಥಾಪಿಸಿ ಎರಡು ಸಾವಿರ ಮೆಗಾ ವಾಟ್ ವಿದ್ಯುತ್ ಉತ್ಪಾದನೆಗೆ ಯೋಜನೆ ರೂಪಿಸಲಾಗುತ್ತಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ.</p>.<p>ಗುರುವಾರ ಯಲಚಹಳ್ಳಿ ಕೆರೆ ಅಂಗಳದಲ್ಲಿ ಸೌರ ಘಟಕ ಉದ್ಘಾಟಿಸಿ ಮಾತನಾಡಿದ ಅವರು, ಖಾಸಗಿ ವಲಯಗಳಿಂದ ಸುಮಾರು ₹10,000 ಕೋಟಿ ಹೂಡಿಕೆಗೆ ಅವಕಾಶ ಕಲ್ಪಿಸಲಾಗುವುದು ಎಂದರು.</p>.<p>ಪಾವಗಡದಲ್ಲಿ ರೈತರ ಭೂಮಿ ಒತ್ತುವರಿ ಮಾಡದೆ ಬಾಡಿಗೆ ಪಡೆದು ಸುಮಾರು ಸೋಲಾರ್ ಘಟಕ ಸ್ಥಾಪಿಸಿ 2,000 ಮೆಗಾ ವಾಟ್ ವಿದ್ಯುತ್  ಉತ್ಪಾದಿಸಲಾಗುತ್ತಿದೆ. ಇಷ್ಟಾದರೂ ವಿದ್ಯುತ್ ಕೊರತೆ ಕಾಡುತ್ತಿದೆ ಎಂದರು. </p>.<p>ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ 8-9 ಸಾವಿರ ಮೆಗಾ ವಾಟ್ನಷ್ಟಿದ್ದ ವಿದ್ಯುತ್ ಬೇಡಿಕೆ ಏಕಾಏಕಿ 18 ಸಾವಿರ ಮೆಗಾ ವಾಟ್ಗೆ ಏರಿಕೆಯಾಯಿತು. ಇದನ್ನು ಸರಿದೂಗಿಸಲು 120 ಹೊಸ ಸಬ್ ಸ್ಟೇಷನ್ ನಿರ್ಮಿಸಲಾಗುವುದು ಎಂದು ಜಾರ್ಜ್ ತಿಳಿಸಿದರು.</p>.<p>ಪರಿಸರಕ್ಕೆ ಹಾನಿಯಾಗದಂತೆ ಶರಾವತಿ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಕಾಮಗಾರಿ ಕೈಗೊಳ್ಳಲಾಗುವುದು. ಇದರಿಂದ ರಾಜ್ಯಕ್ಕೆ ಹೆಚ್ಚುವರಿಯಾಗಿ 3,000 ಮೆಗಾ ವಾಟ್ ವಿದ್ಯುತ್ ಸಿಗಲಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>