<p><strong>ಬೆಂಗಳೂರು:</strong> ಎಲ್ಲಾ ಅಧಿಕಾರಿಗಳು ಮತ್ತು ಸಾರ್ವಜನಿಕರು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ, ಘನ ತ್ಯಾಜ್ಯ ನಿರ್ವಹಣೆಯಲ್ಲಿ ಕರ್ನಾಟಕವನ್ನು ದೇಶದಲ್ಲೇ ‘ಮಾದರಿ ರಾಜ್ಯ’ವನ್ನಾಗಿ ಮಾಡಲು ಶ್ರಮಿಸಬೇಕು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕರೆ ನೀಡಿದರು.</p>.<p>ಘನತ್ಯಾಜ್ಯ ನಿರ್ವಹಣೆ ನಿಯಮಗಳು-2026 ಅನ್ನು ಅನುಷ್ಠಾನಗೊಳಿಸುವ ಕುರಿತು ರಾಜ್ಯಮಟ್ಟದ ಅಧಿಕಾರಿಗಳ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.</p>.<p>ಸುಪ್ರೀಂ ಕೋರ್ಟ್ ಆದೇಶದಂತೆ, ದೇಶದ ಎಲ್ಲಾ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಘನತ್ಯಾಜ್ಯ ನಿರ್ವಹಣೆ ನಿಯಮಗಳನ್ನು (2026) ಕಟ್ಟುನಿಟ್ಟಾಗಿ ಜಾರಿಗೆ ಸೂಚನೆ ನೀಡಲಾಗಿದೆ. ಅಧಿಕಾರಿಗಳು ಮತ್ತು ಸಾರ್ವಜನಿಕರು ತಮಗೆ ವಹಿಸಲಾದ ಜವಾಬ್ದಾರಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದರು.</p>.<p>ಮನೆಗಳಲ್ಲಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿನಿತ್ಯ ಉತ್ಪತ್ತಿಯಾಗುವ ಘನತ್ಯಾಜ್ಯವನ್ನು ಪರಿಣಾಮಕಾರಿಯಾಗಿ ನಿರ್ವಹಿಸದಿದ್ದಲ್ಲಿ, ತ್ಯಾಜ್ಯ ಕೊಳೆತು ಪರಿಸರಕ್ಕೆ ಭಾರಿ ಹಾನಿ ಉಂಟುಮಾಡುತ್ತದೆ. ಆದ್ದರಿಂದ, ಮನೆ-ಮನೆ ಕಸ ಸಂಗ್ರಹಣೆಗೆ ಹೊಸ ನಿಯಮಗಳ ಪ್ರಕಾರ ನಾಲ್ಕು ರೀತಿಯ ವಿಂಗಡಣೆಯನ್ನು ಜಾರಿಗೆ ತರಬೇಕು. ವಿಂಗಡಿಸಿದ ಕಸವನ್ನು ಪ್ರತ್ಯೇಕವಾಗಿ ಸಂಸ್ಕರಣಾ ಘಟಕಗಳಿಗೆ ತಲುಪಿಸಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಲು ಸಮಗ್ರ ಮೇಲ್ವಿಚಾರಣಾ ತಂತ್ರಜ್ಞಾನ ಹಾಗೂ ಮ್ಯಾಪಿಂಗ್ ವ್ಯವಸ್ಥೆ ರೂಪಿಸಬೇಕು ಎಂದು ತಿಳಿಸಿದರು.</p>.<p>ಸುಮಾರು 4,000 ಗ್ರಾಮ ಪಂಚಾಯಿತಿಗಳಲ್ಲಿ ಮಹಿಳಾ ಸ್ವ-ಸಹಾಯ ಗುಂಪುಗಳನ್ನು ‘ಸ್ವಚ್ಛತಾ ವಾಹಿನಿ'ಗಳನ್ನಾಗಿ ಯಶಸ್ವಿಯಾಗಿ ನಿಯೋಜಿಸಲಾಗಿದೆ. ಇದನ್ನು ರಾಜ್ಯದ ಎಲ್ಲಾ 6,000 ಗ್ರಾಮ ಪಂಚಾಯಿತಿಗಳಿಗೂ ವಿಸ್ತರಿಸಿ, ಅವರಿಗೆ ಘನ ತ್ಯಾಜ್ಯ ನಿರ್ವಹಣೆ ನಿಯಮಗಳ ಬಗ್ಗೆ ಸೂಕ್ತ ತರಬೇತಿ ನೀಡಬೇಕು. ಸುಪ್ರೀಂ ಕೋರ್ಟ್ ಈ ನಿಯಮಗಳ ಪಾಲನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ನಿಯಮಗಳನ್ನು ಸರಿಯಾಗಿ ಪಾಲಿಸದಿದ್ದರೆ ಸರ್ಕಾರ ಮತ್ತು ಸಾರ್ವಜನಿಕ ವಲಯಕ್ಕೆ ದಂಡ ಬೀಳಲಿದೆ ಎಂದು ಹೇಳಿದರು.</p>.<p>ಬೃಹತ್ ಪ್ರಮಾಣದ ತ್ಯಾಜ್ಯ ಉತ್ಪಾದಕರನ್ನು ಕಡ್ಡಾಯವಾಗಿ ಆನ್ಲೈನ್ನಲ್ಲಿ ನೋಂದಣಿ ಮಾಡಿಸಬೇಕು. ಅವರು ಎಷ್ಟು ತ್ಯಾಜ್ಯ ಸಂಗ್ರಹಣೆ ಹಾಗೂ ಸಂಸ್ಕರಣೆ ಮಾಡುತ್ತಿದ್ದಾರೆ ಮತ್ತು ಎಷ್ಟು ಬಾಕಿ ಉಳಿದಿದೆ ಎಂಬ ಬಗ್ಗೆ ಐಇಸಿ ಮೂಲಕ ತಿಳಿಸಬೇಕು. ಹೆಚ್ಚು ತ್ಯಾಜ್ಯ ಉತ್ಪತ್ತಿಯಾಗುವ ಸ್ಥಳಗಳಲ್ಲಿ ವೈಜ್ಞಾನಿಕ ಕಸ ವಿಂಗಡಣೆಗೆ ಆದ್ಯತೆ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.</p>.<h2> ಶಾಲಾ ವಿದ್ಯಾರ್ಥಿಗಳ ಭಾಗಿತ್ವ </h2><p>ಹಳ್ಳಿಗಳಲ್ಲಿ ಕೈಗೊಳ್ಳುವ ಸ್ವಚ್ಛತಾ ಕಾರ್ಯಕ್ರಮಗಳನ್ನು ಜನಸಾಮಾನ್ಯರ ಹಬ್ಬದಂತೆ ಆಚರಿಸುವ ಮೂಲಕ ಸಾರ್ವಜನಿಕರಲ್ಲಿ ಕಸ ವಿಂಗಡಣೆಯ ಬಗ್ಗೆ ಜಾಗೃತಿ ಮೂಡಿಸಬೇಕು. ಇದಕ್ಕಾಗಿ ತಳಮಟ್ಟದ ಐಇಸಿ ಚಟುವಟಿಕೆಗಳನ್ನು ತೀವ್ರಗೊಳಿಸಬೇಕು. ವಿಶೇಷವಾಗಿ ಶಾಲಾ ಹಂತದಲ್ಲಿಯೇ ಡಿಜಿಟಲ್ ಮಾಧ್ಯಮಗಳ ಮೂಲಕ ಸ್ವಚ್ಛತೆಯ ಬಗ್ಗೆ ತರಬೇತಿ ನೀಡಿ ವಿದ್ಯಾರ್ಥಿಗಳನ್ನು ಈ ಅಭಿಯಾನದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಶಾಲಿನಿ ರಜನೀಶ್ ತಿಳಿಸಿದರು. </p><p>ಪ್ಲಾಸ್ಟಿಕ್ ಬಾಟಲ್ ತ್ಯಾಜ್ಯ ಸ್ಯಾನಿಟರಿ ತ್ಯಾಜ್ಯ ಮತ್ತು ಬಯೊ-ಮೆಡಿಕಲ್ ತ್ಯಾಜ್ಯಗಳನ್ನು ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಎಂಪ್ಯಾನಲ್ ಆಗಿರುವ ಅಧಿಕೃತ ಏಜೆನ್ಸಿಗಳ ಮೂಲಕ ಸಮರ್ಪಕವಾಗಿ ವಿಲೇವಾರಿ ಮಾಡಬೇಕು. ಈ ಕ್ಷೇತ್ರಕ್ಕೆ ಖಾಸಗಿ ಉದ್ಯಮಿಗಳನ್ನು ಒಳಗೊಂಡು ‘ವೇಸ್ಟ್ ಟು ಎನರ್ಜಿ’ ಮತ್ತು ‘ವೇಸ್ಟ್ ಟು ವೆಲ್ತ್’ಗೆ ಆದ್ಯತೆ ನೀಡಬೇಕು. ಎಲ್ಲಾ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಕೈಗಾರಿಕಾ ಅಸೋಸಿಯೇಷನ್ಗಳೊಂದಿಗೆ ಚರ್ಚಿಸಿ ವಿಕೇಂದ್ರೀಕೃತ ತ್ಯಾಜ್ಯ ವಿನಿಮಯಕ್ಕೆ ಕ್ರಮ ಕೈಗೊಳ್ಳಬೇಕು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಎಲ್ಲಾ ಅಧಿಕಾರಿಗಳು ಮತ್ತು ಸಾರ್ವಜನಿಕರು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ, ಘನ ತ್ಯಾಜ್ಯ ನಿರ್ವಹಣೆಯಲ್ಲಿ ಕರ್ನಾಟಕವನ್ನು ದೇಶದಲ್ಲೇ ‘ಮಾದರಿ ರಾಜ್ಯ’ವನ್ನಾಗಿ ಮಾಡಲು ಶ್ರಮಿಸಬೇಕು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕರೆ ನೀಡಿದರು.</p>.<p>ಘನತ್ಯಾಜ್ಯ ನಿರ್ವಹಣೆ ನಿಯಮಗಳು-2026 ಅನ್ನು ಅನುಷ್ಠಾನಗೊಳಿಸುವ ಕುರಿತು ರಾಜ್ಯಮಟ್ಟದ ಅಧಿಕಾರಿಗಳ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.</p>.<p>ಸುಪ್ರೀಂ ಕೋರ್ಟ್ ಆದೇಶದಂತೆ, ದೇಶದ ಎಲ್ಲಾ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಘನತ್ಯಾಜ್ಯ ನಿರ್ವಹಣೆ ನಿಯಮಗಳನ್ನು (2026) ಕಟ್ಟುನಿಟ್ಟಾಗಿ ಜಾರಿಗೆ ಸೂಚನೆ ನೀಡಲಾಗಿದೆ. ಅಧಿಕಾರಿಗಳು ಮತ್ತು ಸಾರ್ವಜನಿಕರು ತಮಗೆ ವಹಿಸಲಾದ ಜವಾಬ್ದಾರಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದರು.</p>.<p>ಮನೆಗಳಲ್ಲಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿನಿತ್ಯ ಉತ್ಪತ್ತಿಯಾಗುವ ಘನತ್ಯಾಜ್ಯವನ್ನು ಪರಿಣಾಮಕಾರಿಯಾಗಿ ನಿರ್ವಹಿಸದಿದ್ದಲ್ಲಿ, ತ್ಯಾಜ್ಯ ಕೊಳೆತು ಪರಿಸರಕ್ಕೆ ಭಾರಿ ಹಾನಿ ಉಂಟುಮಾಡುತ್ತದೆ. ಆದ್ದರಿಂದ, ಮನೆ-ಮನೆ ಕಸ ಸಂಗ್ರಹಣೆಗೆ ಹೊಸ ನಿಯಮಗಳ ಪ್ರಕಾರ ನಾಲ್ಕು ರೀತಿಯ ವಿಂಗಡಣೆಯನ್ನು ಜಾರಿಗೆ ತರಬೇಕು. ವಿಂಗಡಿಸಿದ ಕಸವನ್ನು ಪ್ರತ್ಯೇಕವಾಗಿ ಸಂಸ್ಕರಣಾ ಘಟಕಗಳಿಗೆ ತಲುಪಿಸಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಲು ಸಮಗ್ರ ಮೇಲ್ವಿಚಾರಣಾ ತಂತ್ರಜ್ಞಾನ ಹಾಗೂ ಮ್ಯಾಪಿಂಗ್ ವ್ಯವಸ್ಥೆ ರೂಪಿಸಬೇಕು ಎಂದು ತಿಳಿಸಿದರು.</p>.<p>ಸುಮಾರು 4,000 ಗ್ರಾಮ ಪಂಚಾಯಿತಿಗಳಲ್ಲಿ ಮಹಿಳಾ ಸ್ವ-ಸಹಾಯ ಗುಂಪುಗಳನ್ನು ‘ಸ್ವಚ್ಛತಾ ವಾಹಿನಿ'ಗಳನ್ನಾಗಿ ಯಶಸ್ವಿಯಾಗಿ ನಿಯೋಜಿಸಲಾಗಿದೆ. ಇದನ್ನು ರಾಜ್ಯದ ಎಲ್ಲಾ 6,000 ಗ್ರಾಮ ಪಂಚಾಯಿತಿಗಳಿಗೂ ವಿಸ್ತರಿಸಿ, ಅವರಿಗೆ ಘನ ತ್ಯಾಜ್ಯ ನಿರ್ವಹಣೆ ನಿಯಮಗಳ ಬಗ್ಗೆ ಸೂಕ್ತ ತರಬೇತಿ ನೀಡಬೇಕು. ಸುಪ್ರೀಂ ಕೋರ್ಟ್ ಈ ನಿಯಮಗಳ ಪಾಲನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ನಿಯಮಗಳನ್ನು ಸರಿಯಾಗಿ ಪಾಲಿಸದಿದ್ದರೆ ಸರ್ಕಾರ ಮತ್ತು ಸಾರ್ವಜನಿಕ ವಲಯಕ್ಕೆ ದಂಡ ಬೀಳಲಿದೆ ಎಂದು ಹೇಳಿದರು.</p>.<p>ಬೃಹತ್ ಪ್ರಮಾಣದ ತ್ಯಾಜ್ಯ ಉತ್ಪಾದಕರನ್ನು ಕಡ್ಡಾಯವಾಗಿ ಆನ್ಲೈನ್ನಲ್ಲಿ ನೋಂದಣಿ ಮಾಡಿಸಬೇಕು. ಅವರು ಎಷ್ಟು ತ್ಯಾಜ್ಯ ಸಂಗ್ರಹಣೆ ಹಾಗೂ ಸಂಸ್ಕರಣೆ ಮಾಡುತ್ತಿದ್ದಾರೆ ಮತ್ತು ಎಷ್ಟು ಬಾಕಿ ಉಳಿದಿದೆ ಎಂಬ ಬಗ್ಗೆ ಐಇಸಿ ಮೂಲಕ ತಿಳಿಸಬೇಕು. ಹೆಚ್ಚು ತ್ಯಾಜ್ಯ ಉತ್ಪತ್ತಿಯಾಗುವ ಸ್ಥಳಗಳಲ್ಲಿ ವೈಜ್ಞಾನಿಕ ಕಸ ವಿಂಗಡಣೆಗೆ ಆದ್ಯತೆ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.</p>.<h2> ಶಾಲಾ ವಿದ್ಯಾರ್ಥಿಗಳ ಭಾಗಿತ್ವ </h2><p>ಹಳ್ಳಿಗಳಲ್ಲಿ ಕೈಗೊಳ್ಳುವ ಸ್ವಚ್ಛತಾ ಕಾರ್ಯಕ್ರಮಗಳನ್ನು ಜನಸಾಮಾನ್ಯರ ಹಬ್ಬದಂತೆ ಆಚರಿಸುವ ಮೂಲಕ ಸಾರ್ವಜನಿಕರಲ್ಲಿ ಕಸ ವಿಂಗಡಣೆಯ ಬಗ್ಗೆ ಜಾಗೃತಿ ಮೂಡಿಸಬೇಕು. ಇದಕ್ಕಾಗಿ ತಳಮಟ್ಟದ ಐಇಸಿ ಚಟುವಟಿಕೆಗಳನ್ನು ತೀವ್ರಗೊಳಿಸಬೇಕು. ವಿಶೇಷವಾಗಿ ಶಾಲಾ ಹಂತದಲ್ಲಿಯೇ ಡಿಜಿಟಲ್ ಮಾಧ್ಯಮಗಳ ಮೂಲಕ ಸ್ವಚ್ಛತೆಯ ಬಗ್ಗೆ ತರಬೇತಿ ನೀಡಿ ವಿದ್ಯಾರ್ಥಿಗಳನ್ನು ಈ ಅಭಿಯಾನದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಶಾಲಿನಿ ರಜನೀಶ್ ತಿಳಿಸಿದರು. </p><p>ಪ್ಲಾಸ್ಟಿಕ್ ಬಾಟಲ್ ತ್ಯಾಜ್ಯ ಸ್ಯಾನಿಟರಿ ತ್ಯಾಜ್ಯ ಮತ್ತು ಬಯೊ-ಮೆಡಿಕಲ್ ತ್ಯಾಜ್ಯಗಳನ್ನು ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಎಂಪ್ಯಾನಲ್ ಆಗಿರುವ ಅಧಿಕೃತ ಏಜೆನ್ಸಿಗಳ ಮೂಲಕ ಸಮರ್ಪಕವಾಗಿ ವಿಲೇವಾರಿ ಮಾಡಬೇಕು. ಈ ಕ್ಷೇತ್ರಕ್ಕೆ ಖಾಸಗಿ ಉದ್ಯಮಿಗಳನ್ನು ಒಳಗೊಂಡು ‘ವೇಸ್ಟ್ ಟು ಎನರ್ಜಿ’ ಮತ್ತು ‘ವೇಸ್ಟ್ ಟು ವೆಲ್ತ್’ಗೆ ಆದ್ಯತೆ ನೀಡಬೇಕು. ಎಲ್ಲಾ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಕೈಗಾರಿಕಾ ಅಸೋಸಿಯೇಷನ್ಗಳೊಂದಿಗೆ ಚರ್ಚಿಸಿ ವಿಕೇಂದ್ರೀಕೃತ ತ್ಯಾಜ್ಯ ವಿನಿಮಯಕ್ಕೆ ಕ್ರಮ ಕೈಗೊಳ್ಳಬೇಕು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>