<p><strong>ಬೆಂಗಳೂರು:</strong> ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ವಸತಿ ಸಚಿವ ವಿ.ಸೋಮಣ್ಣ ತೀವ್ರ ವಾಗ್ದಾಳಿ ನಡೆಸಿದ್ದು, ‘ಅವರೊಂದು ಕೊಚ್ಚೆ. ಅದರ ಮೇಲೆ ಕಲ್ಲು ಹಾಕಲು ನಾನು ತಯಾರಿಲ್ಲ’ ಎಂದು ಟೀಕಿಸಿದ್ದಾರೆ.</p>.<p>‘ಕುಮಾರಸ್ವಾಮಿ ಅವರು ಮಠಾಧೀಶರ ಫೋನ್ ಕದ್ದಾಲಿಕೆ ಮಾಡಿಸಿದ್ದಾರೆ. ಬಿ.ಎಸ್.ಯಡಿಯೂರಪ್ಪ ಅವರಿಗೆ ಟೋಪಿಹಾಕಿ ಹೋಗಿದ್ದಾರೆ. ಅಂತಹವರಿಂದ ಏನು ನಿರೀಕ್ಷಿಸಲು ಸಾಧ್ಯ’ ಎಂದು ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನಿಸಿದರು.</p>.<p>‘ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಮಾರ್ಗದರ್ಶನದಲ್ಲಿ ಎಲ್ಲಾ ಪಕ್ಷಗಳೂ ಚುನಾವಣೆ ಎದುರಿಸಲಿ ಎಂದು ಸಲಹೆ ಮಾಡಿದ್ದೆ. ಆದರೆ ಜನತಾ ಬಜಾರ್ನಲ್ಲಿ ಬಟ್ಟೆ ಕಳ್ಳತನ ಮಾಡಿದ್ದೇನೆ ಎಂದು ನನ್ನ ವಿರುದ್ಧವೇ ಆರೋಪ ಮಾಡಿದ್ದಾರೆ’ ಎಂದರು.</p>.<p>‘ದೇವೇಗೌಡರ ಬಗ್ಗೆ ಯಾವತ್ತೂ ಕೆಟ್ಟದಾಗಿ ನಿಂದಿಸಿಲ್ಲ. ಅವರು ಹಿರಿಯರು. ಆದರೆ ಕುಮಾರಸ್ವಾಮಿ ಮಾತುಗಳಿಗೆ ಅಂದೇ ವಾಪಸ್ ಉತ್ತರ ಕೊಡಬಹುದಿತ್ತು. ಆದರೆ ಆ ರೀತಿ ಮಾಡಲಿಲ್ಲ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ವಸತಿ ಸಚಿವ ವಿ.ಸೋಮಣ್ಣ ತೀವ್ರ ವಾಗ್ದಾಳಿ ನಡೆಸಿದ್ದು, ‘ಅವರೊಂದು ಕೊಚ್ಚೆ. ಅದರ ಮೇಲೆ ಕಲ್ಲು ಹಾಕಲು ನಾನು ತಯಾರಿಲ್ಲ’ ಎಂದು ಟೀಕಿಸಿದ್ದಾರೆ.</p>.<p>‘ಕುಮಾರಸ್ವಾಮಿ ಅವರು ಮಠಾಧೀಶರ ಫೋನ್ ಕದ್ದಾಲಿಕೆ ಮಾಡಿಸಿದ್ದಾರೆ. ಬಿ.ಎಸ್.ಯಡಿಯೂರಪ್ಪ ಅವರಿಗೆ ಟೋಪಿಹಾಕಿ ಹೋಗಿದ್ದಾರೆ. ಅಂತಹವರಿಂದ ಏನು ನಿರೀಕ್ಷಿಸಲು ಸಾಧ್ಯ’ ಎಂದು ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನಿಸಿದರು.</p>.<p>‘ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಮಾರ್ಗದರ್ಶನದಲ್ಲಿ ಎಲ್ಲಾ ಪಕ್ಷಗಳೂ ಚುನಾವಣೆ ಎದುರಿಸಲಿ ಎಂದು ಸಲಹೆ ಮಾಡಿದ್ದೆ. ಆದರೆ ಜನತಾ ಬಜಾರ್ನಲ್ಲಿ ಬಟ್ಟೆ ಕಳ್ಳತನ ಮಾಡಿದ್ದೇನೆ ಎಂದು ನನ್ನ ವಿರುದ್ಧವೇ ಆರೋಪ ಮಾಡಿದ್ದಾರೆ’ ಎಂದರು.</p>.<p>‘ದೇವೇಗೌಡರ ಬಗ್ಗೆ ಯಾವತ್ತೂ ಕೆಟ್ಟದಾಗಿ ನಿಂದಿಸಿಲ್ಲ. ಅವರು ಹಿರಿಯರು. ಆದರೆ ಕುಮಾರಸ್ವಾಮಿ ಮಾತುಗಳಿಗೆ ಅಂದೇ ವಾಪಸ್ ಉತ್ತರ ಕೊಡಬಹುದಿತ್ತು. ಆದರೆ ಆ ರೀತಿ ಮಾಡಲಿಲ್ಲ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>