ವಿಚಾರಣೆ ವೇಳೆ ಸೋಮಶೇಖರ್ ಪರ ವಾದ ಮಂಡಿಸಿದ ಹಿರಿಯ ವಕೀಲ ಬಿ.ವಿ.ಆಚಾರ್ಯ ಅವರು, ‘ರಾಜ್ಯದ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಉರುಳಿಸಲು ಆಪರೇಷನ್ ಕಮಲ ನಡೆಸುವ ಯತ್ನ ನಡೆಸಿದ ಪ್ರಮುಖ ಸೂತ್ರಧಾರರಲ್ಲಿ ಸೋಮಶೇಖರ್ ಅವರೂ ಒಬ್ಬರು ಎಂದು ಮಾಧ್ಯಮಗಳು ವರದಿ ಮಾಡಿವೆ. ಇದಕ್ಕೆ, ಗುಪ್ತಚರ ಇಲಾಖೆಯ ಮೂಲಗಳನ್ನು ಉಲ್ಲೇಖಿಸಿವೆ’ ಎಂದು ವಿವರಿಸಿದರು.