<p><strong>ಬೆಂಗಳೂರು</strong>: ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು ಸಲ್ಲಿಸಿರುವ ದಾಖಲೆಗಳನ್ನು ಪರಿಶೀಲಿಸಲು ಕಾಲೇಜು ಶಿಕ್ಷಣ ಇಲಾಖೆ ಪ್ರಮಾಣಿತ ಕಾರ್ಯಾಚರಣೆ ವಿಧಾನವನ್ನು (ಎಸ್ಒಪಿ) ಪ್ರಕಟಿಸಿದೆ. </p><p>ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಬೋಧಕರಾಗಿ ಕೆಲಸ ಮಾಡುವವರು ಸ್ನಾತಕೋತ್ತರ ಪದವಿಯ ಜತೆಗೆ ರಾಷ್ಟ್ರೀಯ ಅರ್ಹತಾ ಪರೀಕ್ಷೆ(ಎನ್ಇಟಿ) ಅಥವಾ ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ (ಕೆ-ಸೆಟ್) ತೇರ್ಗಡೆಯಾಗಿರಬೇಕು, ಪಿಎಚ್.ಡಿ ಪಡೆದಿರಬೇಕು ಎಂದು ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ನಿಯಮ ರೂಪಿಸಿತ್ತು. ಹಾಗಾಗಿ, 2025–26ನೇ ಸಾಲಿನಲ್ಲಿ ಯುಜಿಸಿ ಅರ್ಹತೆ ಪಡೆದಿದ್ದ ಅಭ್ಯರ್ಥಿಗಳನ್ನೇ ನೇಮಕ ಮಾಡಿಕೊಳ್ಳಲಾಗಿತ್ತು.</p><p>ನೇಮಕವಾದ ಹಲವು ಅತಿಥಿ ಉಪನ್ಯಾಸಕರು ಸಲ್ಲಿಸಿದ್ದ ಪಿಎಚ್.ಡಿ ಸೇರಿದಂತೆ ಇತರೆ ಪ್ರಮಾಣಪತ್ರಗಳು ನಕಲಿಯಾಗಿವೆ ಎಂಬ ದೂರುಗಳು ಕೇಳಿ ಬಂದ ಕಾರಣ ಎಲ್ಲ ಕಾಲೇಜುಗಳಲ್ಲೂ ಪ್ರಮಾಣಪತ್ರಗಳ ನೈಜತೆಯನ್ನುದೃಢೀಕರಿಸಿಕೊಳ್ಳಲು ಪ್ರಾಂಶುಪಾಲರ ಅಧ್ಯಕ್ಷತೆಯಲ್ಲಿ ಎಸ್ಒಪಿ ಅಳವಡಿಸಿ<br>ಕೊಳ್ಳಲು ಆದೇಶ ಹೊರಡಿಸಲಾಗಿದೆ. </p><p>ವಿಶ್ವವಿದ್ಯಾಲಯ ಅನುದಾನ ಆಯೋಗದ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಪಡೆದ ಪ್ರಮಾಣ ಪತ್ರಗಳನ್ನಷ್ಟೇ ಪರಿಗಣಿಸಬೇಕು. ವಿಶ್ವವಿದ್ಯಾಲಯಗಳಿಗೆ ಪತ್ರ ಬರೆದು ಖಚಿತಪಡಿಸಿಕೊಳ್ಳಬೇಕು. ಪತ್ರ<br>ವ್ಯವಹಾರಗಳನ್ನು ಗೋಪ್ಯವಾಗಿಡಬೇಕು. ಪಿಎಚ್.ಡಿಗಳ ನೈಜತೆಗೆ ವಿಶೇಷ ಗಮನಕೊಡಬೇಕು. ಆಯಾ<br>ವಿಶ್ವವಿದ್ಯಾಲಯಗಳ ಪ್ರಕಟಣೆ, ಪಿಎಚ್.ಡಿ ಪ್ರವೇಶ, ಸಂಶೋಧನೆ, ಮಾರ್ಗದರ್ಶಕರ ವಿವರ ಸೇರಿದಂತೆ ಸಂಪೂರ್ಣ ಪ್ರಕ್ರಿಯೆಯ ವಿವರ ಕಲೆಹಾಕಬೇಕು. ನಕಲಿ ಎನ್ನುವುದು ಸಾಬೀತಾದರೆ ಅಂತಹ ಅತಿಥಿ ಉಪನ್ಯಾಸಕರನ್ನು ತಕ್ಷಣವೇ ಸೇವೆಯಿಂದ ಬಿಡುಗಡೆ ಮಾಡಬೇಕು. ಎಲ್ಲ ವಿವರಗಳನ್ನು ಕೇಂದ್ರ ಕಚೇರಿಗೆ ಸಲ್ಲಿಸಬೇಕು ಎಂದು ಸೂಚಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು ಸಲ್ಲಿಸಿರುವ ದಾಖಲೆಗಳನ್ನು ಪರಿಶೀಲಿಸಲು ಕಾಲೇಜು ಶಿಕ್ಷಣ ಇಲಾಖೆ ಪ್ರಮಾಣಿತ ಕಾರ್ಯಾಚರಣೆ ವಿಧಾನವನ್ನು (ಎಸ್ಒಪಿ) ಪ್ರಕಟಿಸಿದೆ. </p><p>ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಬೋಧಕರಾಗಿ ಕೆಲಸ ಮಾಡುವವರು ಸ್ನಾತಕೋತ್ತರ ಪದವಿಯ ಜತೆಗೆ ರಾಷ್ಟ್ರೀಯ ಅರ್ಹತಾ ಪರೀಕ್ಷೆ(ಎನ್ಇಟಿ) ಅಥವಾ ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ (ಕೆ-ಸೆಟ್) ತೇರ್ಗಡೆಯಾಗಿರಬೇಕು, ಪಿಎಚ್.ಡಿ ಪಡೆದಿರಬೇಕು ಎಂದು ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ನಿಯಮ ರೂಪಿಸಿತ್ತು. ಹಾಗಾಗಿ, 2025–26ನೇ ಸಾಲಿನಲ್ಲಿ ಯುಜಿಸಿ ಅರ್ಹತೆ ಪಡೆದಿದ್ದ ಅಭ್ಯರ್ಥಿಗಳನ್ನೇ ನೇಮಕ ಮಾಡಿಕೊಳ್ಳಲಾಗಿತ್ತು.</p><p>ನೇಮಕವಾದ ಹಲವು ಅತಿಥಿ ಉಪನ್ಯಾಸಕರು ಸಲ್ಲಿಸಿದ್ದ ಪಿಎಚ್.ಡಿ ಸೇರಿದಂತೆ ಇತರೆ ಪ್ರಮಾಣಪತ್ರಗಳು ನಕಲಿಯಾಗಿವೆ ಎಂಬ ದೂರುಗಳು ಕೇಳಿ ಬಂದ ಕಾರಣ ಎಲ್ಲ ಕಾಲೇಜುಗಳಲ್ಲೂ ಪ್ರಮಾಣಪತ್ರಗಳ ನೈಜತೆಯನ್ನುದೃಢೀಕರಿಸಿಕೊಳ್ಳಲು ಪ್ರಾಂಶುಪಾಲರ ಅಧ್ಯಕ್ಷತೆಯಲ್ಲಿ ಎಸ್ಒಪಿ ಅಳವಡಿಸಿ<br>ಕೊಳ್ಳಲು ಆದೇಶ ಹೊರಡಿಸಲಾಗಿದೆ. </p><p>ವಿಶ್ವವಿದ್ಯಾಲಯ ಅನುದಾನ ಆಯೋಗದ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಪಡೆದ ಪ್ರಮಾಣ ಪತ್ರಗಳನ್ನಷ್ಟೇ ಪರಿಗಣಿಸಬೇಕು. ವಿಶ್ವವಿದ್ಯಾಲಯಗಳಿಗೆ ಪತ್ರ ಬರೆದು ಖಚಿತಪಡಿಸಿಕೊಳ್ಳಬೇಕು. ಪತ್ರ<br>ವ್ಯವಹಾರಗಳನ್ನು ಗೋಪ್ಯವಾಗಿಡಬೇಕು. ಪಿಎಚ್.ಡಿಗಳ ನೈಜತೆಗೆ ವಿಶೇಷ ಗಮನಕೊಡಬೇಕು. ಆಯಾ<br>ವಿಶ್ವವಿದ್ಯಾಲಯಗಳ ಪ್ರಕಟಣೆ, ಪಿಎಚ್.ಡಿ ಪ್ರವೇಶ, ಸಂಶೋಧನೆ, ಮಾರ್ಗದರ್ಶಕರ ವಿವರ ಸೇರಿದಂತೆ ಸಂಪೂರ್ಣ ಪ್ರಕ್ರಿಯೆಯ ವಿವರ ಕಲೆಹಾಕಬೇಕು. ನಕಲಿ ಎನ್ನುವುದು ಸಾಬೀತಾದರೆ ಅಂತಹ ಅತಿಥಿ ಉಪನ್ಯಾಸಕರನ್ನು ತಕ್ಷಣವೇ ಸೇವೆಯಿಂದ ಬಿಡುಗಡೆ ಮಾಡಬೇಕು. ಎಲ್ಲ ವಿವರಗಳನ್ನು ಕೇಂದ್ರ ಕಚೇರಿಗೆ ಸಲ್ಲಿಸಬೇಕು ಎಂದು ಸೂಚಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>