‘ಸೌಂದರ್ಯ ಜಗದೀಶ್ ಅವರು ‘ಸೌಂದರ್ಯ ಕನ್ಸ್ಟ್ರಕ್ಷನ್’ ಕಂಪನಿ ನಡೆಸುತ್ತಿದ್ದರು. ವಿ.ಎಸ್. ಸುರೇಶ್, ಎಸ್.ಪಿ. ಹೊಂಬಣ್ಣ ಹಾಗೂ ಸುಧೀಂದ್ರ ಅವರು ಕಂಪನಿಯ ಪಾಲುದಾರರಾಗಿದ್ದರು. ತಮ್ಮ ಕೆಲ ಆಸ್ತಿಯನ್ನು ಬ್ಯಾಂಕ್ನಲ್ಲಿ ಅಡವಿಟ್ಟಿದ್ದ ಸೌಂದರ್ಯ ಜಗದೀಶ್, ₹60 ಕೋಟಿ ಸಾಲ ಪಡೆದು ಕಂಪನಿಯಲ್ಲಿ ಹೂಡಿಕೆ ಮಾಡಿದ್ದರು. ಕಂಪನಿ ನಷ್ಟದಲ್ಲಿರುವುದಾಗಿ ಹೇಳಿದ್ದ ಸಹ ಪಾಲುದಾರರು, ₹60 ಕೋಟಿ ವಂಚಿಸಿದ್ದರು. ಜೊತೆಗೆ, ಸೌಂದರ್ಯ ಜಗದೀಶ್ ಅವರಿಂದ ಹಲವು ದಾಖಲೆಗಳಿಗೆ ಸಹಿ ಪಡೆದುಕೊಂಡಿದ್ದರು. ಇದನ್ನು ಪ್ರಶ್ನಿಸಿದ್ದಕ್ಕೆ ಸಹ ಪಾಲುದಾರರು, ಜೀವ ಬೆದರಿಕೆಯೊಡ್ಡಿದ್ದರು. ಇವರ ಕಿರುಕುಳದಿಂದಲೇ ಸೌಂದರ್ಯ ಜಗದೀಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂಬುದಾಗಿ ಪತ್ನಿ ದೂರಿನಲ್ಲಿ ತಿಳಿಸಿದ್ದಾರೆ’ ಎಂದು ಮೂಲಗಳು ವಿವರಿಸಿವೆ.