ವಿಧಾನಸೌಧದಲ್ಲಿ ಬುಧವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ವಿಧಾನಸಭಾ ಚುನಾವಣೆಯಲ್ಲಿ ಮತ ಎಣಿಕೆ ಕೇಂದ್ರದ ಅಧಿಕಾರಿಗಳ ದೋಷಪೂರಿತ ನಿಲುವಿನಿಂದಾಗಿ ಸೌಮ್ಯಾ ರೆಡ್ಡಿ ಸೋಲು ಕಂಡಿದ್ದರು. ಫಲಿತಾಂಶ ಪ್ರಶ್ನಿಸಿ, ಈಗಾಗಲೇ ಕೋರ್ಟ್ ಮೆಟ್ಟಿಲೇರಲಾಗಿದೆ. ಶೀಘ್ರ ತೀರ್ಪು ಹೊರಬರಲಿದ್ದು, ಸೌಮ್ಯಾ ಮತ್ತೆ ಶಾಸಕಿಯಾಗುವ ಭರವಸೆ ಇದೆ. ಆದರೆ, ಪಕ್ಷದ ಎಲ್ಲ ನಾಯಕರ ಸಲಹೆಯಂತೆ ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ ಎಂದರು.