‘ದೊಡ್ಡ ಜಲಾಶಯಗಳ ಬದಲಿಗೆ, ಸಣ್ಣ ಜಲಾಶಯಗಳನ್ನು ನಿರ್ಮಿಸಬೇಕು. ಈ ಮಾದರಿಯನ್ನು ಗುಜರಾತ್ ರಾಜ್ಯದಲ್ಲಿ ಅನುಸರಿಸಲಾಗಿದೆ. ಆ ರೀತಿ ಇಲ್ಲಿಯೂ ಆಗಬೇಕು. ಕಾವೇರಿ, ತುಂಗಭದ್ರಾ ಮತ್ತು ಕೃಷ್ಣಾ ನದಿಗೆ ದೊಡ್ಡ ದೊಡ್ಡ ಜಲಾಶಯಗಳನ್ನು ಕಟ್ಟಲಾಗಿದೆ. ಆದರೆ, ನೀರಿನ ಕೊರತೆಯ ಸಮಸ್ಯೆ ಪರಿಹಾರವಾಗಿದೆಯೇ? ಚಿಕ್ಕ ಜಲಾಶಯಗಳಿಂದ ಆ ಭಾಗದಲ್ಲಿನ ಹೆಚ್ಚಿನ ಜನರಿಗೆ ಅನುಕೂಲವಾಗುತ್ತದೆ. ಹೀಗಾಗಿ, ಚಿಕ್ಕ ಜಲಾಶಯಗಳ ನಿರ್ಮಾಣಕ್ಕೆ ಆದ್ಯತೆ ಕೊಡಬೇಕು’ ಎಂದು ತಿಳಿಸಿದರು.