<p><strong>ಬೆಳಗಾವಿ</strong>: ಸರ್ಕಾರದ ಯಾವುದೇ ಇಲಾಖೆಗಳು, ನಿಗಮ ಮಂಡಳಿಗಳು ಸಭೆ ಸಮಾರಂಭಗಳಲ್ಲಿ ಇನ್ನು ಮುಂದೆ ಸ್ಮರಣಿಕೆ ಅಥವಾ ಟ್ರೋಫಿ ಬಳಸುವುದನ್ನು ನಿಷೇಧಿಸಿ ಸಿಬ್ಬಂದಿ ಮತ್ತು ಆಡಳಿಯ ಸುಧಾರಣಾ ಇಲಾಖೆ ಬುಧವಾರ ಆದೇಶ ಹೊರಡಿಸಿದೆ.</p><p>ಈಗಾಗಲೇ ಖರೀದಿಸಿರುವ ಸ್ಮರಣಿಕೆಗಳನ್ನು ಇಲಾಖಾ ಮುಖ್ಯಸ್ಥರ ಅನುಮತಿ ಪಡೆದು ವಿಲೇವಾರಿ ಅಥವಾ ದಾನ ಮಾಡಬಹುದು. ಭವಿಷ್ಯದಲ್ಲಿ ಇಂತಹ ಸಾಮಗ್ರಿಗಳನ್ನು ಖರೀದಿಸಲು ಬಜೆಟ್ನಲ್ಲಿಯೂ ಹಣ ಮೀಸಲಿಡುವುದಕ್ಕೆ ನಿರ್ಬಂಧ ವಿಧಿಸಲಾಗಿದೆ.</p><p>ಗಣ್ಯರ ಭೇಟಿ, ಸನ್ಮಾನ ಸೇರಿದಂತೆ ಸರ್ಕಾರದ ಎಲ್ಲ ಅಧಿಕೃತ ಕಾರ್ಯಕ್ರಮಗಳಿಗೆ ಈ ಆದೇಶ ಅನ್ವಯ ಆಗಲಿದೆ. ಕ್ರೀಡಾಪಟುಗಳಿಗೆ ನೀಡುವ ಟ್ರೋಫಿಗಳಿಗೆ ಮಾತ್ರ ವಿನಾಯಿತಿ ನೀಡಲಾಗಿದೆ. ಆದರೆ, ಅಂತಹ ಟ್ರೋಫಿಗಳು ಪ್ಲಾಸ್ಟಿಕ್ ಮುಕ್ತ ಆಗಿರಬೇಕು ಎಂಬ ಷರತ್ತು ವಿಧಿಸಲಾಗಿದೆ.</p><p>ಪರಿಸರಸ್ನೇಹಿ ಸಸ್ಯಗಳು, ಪುಸ್ತಕಗಳು, ಸ್ಥಳೀಯ ಕುಶಲಕರ್ಮಿಗಳು ತಯಾರಿಸಿದ ಕರಕುಶಲ ಸಾಮಗ್ರಿಗಳನ್ನು ಬಳಸಬಹುದು. ಮರು ಬಳಕೆಯ ಕಾಗದದ ಮೇಲೆ ಮೆಚ್ಚುಗೆ ಪ್ರಮಾಣಪತ್ರಗಳನ್ನು ಸಭೆ ಸಮಾರಂಭಗಳಲ್ಲಿ ವಿತರಣೆ ಮಾಡಬಹುದು ಎಂದೂ ಆದೇಶದಲ್ಲಿ ತಿಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ಸರ್ಕಾರದ ಯಾವುದೇ ಇಲಾಖೆಗಳು, ನಿಗಮ ಮಂಡಳಿಗಳು ಸಭೆ ಸಮಾರಂಭಗಳಲ್ಲಿ ಇನ್ನು ಮುಂದೆ ಸ್ಮರಣಿಕೆ ಅಥವಾ ಟ್ರೋಫಿ ಬಳಸುವುದನ್ನು ನಿಷೇಧಿಸಿ ಸಿಬ್ಬಂದಿ ಮತ್ತು ಆಡಳಿಯ ಸುಧಾರಣಾ ಇಲಾಖೆ ಬುಧವಾರ ಆದೇಶ ಹೊರಡಿಸಿದೆ.</p><p>ಈಗಾಗಲೇ ಖರೀದಿಸಿರುವ ಸ್ಮರಣಿಕೆಗಳನ್ನು ಇಲಾಖಾ ಮುಖ್ಯಸ್ಥರ ಅನುಮತಿ ಪಡೆದು ವಿಲೇವಾರಿ ಅಥವಾ ದಾನ ಮಾಡಬಹುದು. ಭವಿಷ್ಯದಲ್ಲಿ ಇಂತಹ ಸಾಮಗ್ರಿಗಳನ್ನು ಖರೀದಿಸಲು ಬಜೆಟ್ನಲ್ಲಿಯೂ ಹಣ ಮೀಸಲಿಡುವುದಕ್ಕೆ ನಿರ್ಬಂಧ ವಿಧಿಸಲಾಗಿದೆ.</p><p>ಗಣ್ಯರ ಭೇಟಿ, ಸನ್ಮಾನ ಸೇರಿದಂತೆ ಸರ್ಕಾರದ ಎಲ್ಲ ಅಧಿಕೃತ ಕಾರ್ಯಕ್ರಮಗಳಿಗೆ ಈ ಆದೇಶ ಅನ್ವಯ ಆಗಲಿದೆ. ಕ್ರೀಡಾಪಟುಗಳಿಗೆ ನೀಡುವ ಟ್ರೋಫಿಗಳಿಗೆ ಮಾತ್ರ ವಿನಾಯಿತಿ ನೀಡಲಾಗಿದೆ. ಆದರೆ, ಅಂತಹ ಟ್ರೋಫಿಗಳು ಪ್ಲಾಸ್ಟಿಕ್ ಮುಕ್ತ ಆಗಿರಬೇಕು ಎಂಬ ಷರತ್ತು ವಿಧಿಸಲಾಗಿದೆ.</p><p>ಪರಿಸರಸ್ನೇಹಿ ಸಸ್ಯಗಳು, ಪುಸ್ತಕಗಳು, ಸ್ಥಳೀಯ ಕುಶಲಕರ್ಮಿಗಳು ತಯಾರಿಸಿದ ಕರಕುಶಲ ಸಾಮಗ್ರಿಗಳನ್ನು ಬಳಸಬಹುದು. ಮರು ಬಳಕೆಯ ಕಾಗದದ ಮೇಲೆ ಮೆಚ್ಚುಗೆ ಪ್ರಮಾಣಪತ್ರಗಳನ್ನು ಸಭೆ ಸಮಾರಂಭಗಳಲ್ಲಿ ವಿತರಣೆ ಮಾಡಬಹುದು ಎಂದೂ ಆದೇಶದಲ್ಲಿ ತಿಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>