‘ಮಗಳನ್ನು ಕೊಲೆ ಮಾಡಿದವರು ಪ್ರಭಾವಿಗಳು. ಆದರೆ, ಅವರನ್ನು ಬಂಧಿಸಿಲ್ಲ. ಪ್ರಭಾವಿ ವ್ಯಕ್ತಿಗಳು ತನಿಖಾಧಿಕಾರಿಗಳು ಹಾಗೂ ಸರ್ಕಾರದ ಮೇಲೆ ಒತ್ತಡ ಹೇರಿ ಪ್ರಕರಣ ಮುಚ್ಚಿ ಹಾಕಿದ್ದಾರೆ. ಈ ಬಗ್ಗೆ ಸರ್ಕಾರಕ್ಕೆ ಹಾಗೂ ಸ್ಥಳೀಯ ಜನಪ್ರತಿನಿಧಿಗಳಿಗೆ ಹಲವು ಸಲ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಈ ಪ್ರಕರಣದ ನಿಷ್ಫಕ್ಷಪಾತ ತನಿಖೆ ಆಗಬೇಕು. ಆ ಮೂಲಕ ನ್ಯಾಯ ಕೊಡಿಸಬೇಕು’ ಎಂದು ಅವರು ಆಗ್ರಹಿಸಿದರು.