<p><strong>ಶಿರಾ (ತುಮಕೂರು):</strong> ಗಲಭೆ ಪ್ರಕರಣದಲ್ಲಿ ಕರ್ತವ್ಯ ಲೋಪದ ಆರೋಪದ ಮೇಲೆ ಅಮಾನತುಗೊಂಡಿರುವ ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪವನ್ ನೆಜ್ಜೂರ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ಸುದ್ದಿ ಹರಿದಾಡಿದ್ದು, ಇದು ಕೊನೆಗೆ ಸುಳ್ಳು ವದಂತಿ ಎಂಬುದು ಗೊತ್ತಾಗಿದೆ.</p><p>ಕೆಲಸದಿಂದ ಅಮಾನತುಗೊಂಡಿದ್ದರಿಂದ ಮನನೊಂದು ಶಿರಾ ತಾಲ್ಲೂಕಿನ ಬರಗೂರು ಬಳಿಯ ಸ್ನೇಹಿತರೊಬ್ಬರ ಫಾರ್ಮ್ಹೌಸ್ನಲ್ಲಿ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ವದಂತಿ ಹರಿದಾಡಿತ್ತು. ಫಾರ್ಮ್ಹೌಸ್ನಲ್ಲಿ ಪವನ್ ನೆಜ್ಜೂರ್ ವಿಶ್ರಾಂತಿ ಪಡೆಯುತ್ತಿದ್ದಾರೆ. ಆತ್ಮಹತ್ಯೆಗೆ ಪ್ರಯತ್ನಿಸಿಲ್ಲ ಎನ್ನಲಾಗಿದೆ.</p><p>‘ಆತ್ಮಹತ್ಯೆಗೆ ಪ್ರಯತ್ನಿಸಿರುವ ಬಗ್ಗೆ ಯಾವುದೇ ವರದಿಯಾಗಿಲ್ಲ. ಅವರು ಆಸ್ಪತ್ರೆಗೂ ದಾಖಲಾಗಿಲ್ಲ. ದೂರು ಸಹ ಬಂದಿಲ್ಲ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್ ಸ್ಪಷ್ಟಪಡಿಸಿದರು.</p><p>ಜ. 1ರಂದು ರಾತ್ರಿ ಬಳ್ಳಾರಿ ನಗರದಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಸಂಭವಿಸಿದ ಗಲಾಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರೊಬ್ಬರು ಮೃತಪಟ್ಟಿದ್ದರು. ಕರ್ತವ್ಯ ಲೋಪದ ಆರೋಪದ ಮೇಲೆ ಪವನ್ ನೆಜ್ಜೂರ್ ಅವರನ್ನು ಅಮಾನತು ಮಾಡಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಾ (ತುಮಕೂರು):</strong> ಗಲಭೆ ಪ್ರಕರಣದಲ್ಲಿ ಕರ್ತವ್ಯ ಲೋಪದ ಆರೋಪದ ಮೇಲೆ ಅಮಾನತುಗೊಂಡಿರುವ ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪವನ್ ನೆಜ್ಜೂರ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ಸುದ್ದಿ ಹರಿದಾಡಿದ್ದು, ಇದು ಕೊನೆಗೆ ಸುಳ್ಳು ವದಂತಿ ಎಂಬುದು ಗೊತ್ತಾಗಿದೆ.</p><p>ಕೆಲಸದಿಂದ ಅಮಾನತುಗೊಂಡಿದ್ದರಿಂದ ಮನನೊಂದು ಶಿರಾ ತಾಲ್ಲೂಕಿನ ಬರಗೂರು ಬಳಿಯ ಸ್ನೇಹಿತರೊಬ್ಬರ ಫಾರ್ಮ್ಹೌಸ್ನಲ್ಲಿ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ವದಂತಿ ಹರಿದಾಡಿತ್ತು. ಫಾರ್ಮ್ಹೌಸ್ನಲ್ಲಿ ಪವನ್ ನೆಜ್ಜೂರ್ ವಿಶ್ರಾಂತಿ ಪಡೆಯುತ್ತಿದ್ದಾರೆ. ಆತ್ಮಹತ್ಯೆಗೆ ಪ್ರಯತ್ನಿಸಿಲ್ಲ ಎನ್ನಲಾಗಿದೆ.</p><p>‘ಆತ್ಮಹತ್ಯೆಗೆ ಪ್ರಯತ್ನಿಸಿರುವ ಬಗ್ಗೆ ಯಾವುದೇ ವರದಿಯಾಗಿಲ್ಲ. ಅವರು ಆಸ್ಪತ್ರೆಗೂ ದಾಖಲಾಗಿಲ್ಲ. ದೂರು ಸಹ ಬಂದಿಲ್ಲ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್ ಸ್ಪಷ್ಟಪಡಿಸಿದರು.</p><p>ಜ. 1ರಂದು ರಾತ್ರಿ ಬಳ್ಳಾರಿ ನಗರದಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಸಂಭವಿಸಿದ ಗಲಾಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರೊಬ್ಬರು ಮೃತಪಟ್ಟಿದ್ದರು. ಕರ್ತವ್ಯ ಲೋಪದ ಆರೋಪದ ಮೇಲೆ ಪವನ್ ನೆಜ್ಜೂರ್ ಅವರನ್ನು ಅಮಾನತು ಮಾಡಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>