<p><strong>ಮಂಗಳೂರು:</strong> ಮೂಡುಬಿದಿರೆಯಿಂದ ಬೆಳ್ತಂಗಡಿಗೆ ತೆರಳುತ್ತಿದ್ದ ಡಿವೈಎಫ್ಐ ಮುಖಂಡ ರಿಯಾಜ್ ಹಾಗೂ ಅವರ ಸಹೋದರರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವೇಣೂರು ಠಾಣೆಯ ಹೆಡ್ ಕಾನ್ಸ್ಟೆಬಲ್ ತಾರಾನಾಥ ಅವರನ್ನು ಅಮಾನತು ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಆರ್. ರವಿಕಾಂತೇಗೌಡ, ಶುಕ್ರವಾರ ಆದೇಶ ಹೊರಡಿಸಿದ್ದಾರೆ.</p>.<p>ಇದೇ 2 ರಂದು ರಿಯಾಜ್ ಅವರು ತಮ್ಮ ಸಹೋದರನೊಂದಿಗೆ ಮೂಡುಬಿದಿರೆಯಿಂದ ವೇಣೂರು ಮೂಲಕ ಬೆಳ್ತಂಗಡಿಗೆ ತೆರಳುತ್ತಿದ್ದರು. ರಾತ್ರಿ ವೇಳೆ ತಪಾಸಣೆಯ ನೆಪದಲ್ಲಿ ರಿಯಾಜ್ ಹಾಗೂ ಅವರ ಸಹೋದರನನ್ನು ತಡೆದ ಪೊಲೀಸರು, ನಿಂದಿಸಿದ್ದರು. ಅಲ್ಲದೇ ಠಾಣೆಗೆ ಕರೆದೊಯ್ದು, ಹಲ್ಲೆ ನಡೆಸಿದ್ದರು ಎಂಬ ಆರೋಪ ಕೇಳಿ ಬಂದಿತ್ತು.</p>.<p>ಪ್ರಕರಣದ ಕುರಿತು ಕೂಡಲೇ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಡಿವೈಎಫ್ಐ ನಿಯೋಗ, ಪೊಲೀಸ್ ವರಿಷ್ಠಾಧಿಕಾರಿಯನ್ನು ಆಗ್ರಹಿಸಿತ್ತು. ಈ ಹಿನ್ನೆಲೆಯಲ್ಲಿ ವಿಚಾರಣೆ ನಡೆಸುವುದು ಡಾ.ಬಿ.ಆರ್. ರವಿಕಾಂತೇಗೌಡ ಭರವಸೆ ನೀಡಿದ್ದರು.</p>.<p>ವಿಚಾರಣೆ ನಡೆಸಿ ವರದಿ ಸಲ್ಲಿಸುವಂತೆ ಬೆಳ್ತಂಗಡಿ ಇನ್ಸ್ಪೆಕ್ಟರ್ಗೆ ಸೂಚನೆ ನೀಡಲಾಗಿತ್ತು. ಅವರ ವರದಿಯ ಆಧಾರದ ಮೇಲೆ, ಇಲಾಖಾ ವಿಚಾರಣೆ ಕಾಯ್ದಿರಿಸಿ, ಹೆಡ್ ಕಾನ್ಸ್ಟೆಬಲ್ ತಾರಾನಾಥ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ಮೂಡುಬಿದಿರೆಯಿಂದ ಬೆಳ್ತಂಗಡಿಗೆ ತೆರಳುತ್ತಿದ್ದ ಡಿವೈಎಫ್ಐ ಮುಖಂಡ ರಿಯಾಜ್ ಹಾಗೂ ಅವರ ಸಹೋದರರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವೇಣೂರು ಠಾಣೆಯ ಹೆಡ್ ಕಾನ್ಸ್ಟೆಬಲ್ ತಾರಾನಾಥ ಅವರನ್ನು ಅಮಾನತು ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಆರ್. ರವಿಕಾಂತೇಗೌಡ, ಶುಕ್ರವಾರ ಆದೇಶ ಹೊರಡಿಸಿದ್ದಾರೆ.</p>.<p>ಇದೇ 2 ರಂದು ರಿಯಾಜ್ ಅವರು ತಮ್ಮ ಸಹೋದರನೊಂದಿಗೆ ಮೂಡುಬಿದಿರೆಯಿಂದ ವೇಣೂರು ಮೂಲಕ ಬೆಳ್ತಂಗಡಿಗೆ ತೆರಳುತ್ತಿದ್ದರು. ರಾತ್ರಿ ವೇಳೆ ತಪಾಸಣೆಯ ನೆಪದಲ್ಲಿ ರಿಯಾಜ್ ಹಾಗೂ ಅವರ ಸಹೋದರನನ್ನು ತಡೆದ ಪೊಲೀಸರು, ನಿಂದಿಸಿದ್ದರು. ಅಲ್ಲದೇ ಠಾಣೆಗೆ ಕರೆದೊಯ್ದು, ಹಲ್ಲೆ ನಡೆಸಿದ್ದರು ಎಂಬ ಆರೋಪ ಕೇಳಿ ಬಂದಿತ್ತು.</p>.<p>ಪ್ರಕರಣದ ಕುರಿತು ಕೂಡಲೇ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಡಿವೈಎಫ್ಐ ನಿಯೋಗ, ಪೊಲೀಸ್ ವರಿಷ್ಠಾಧಿಕಾರಿಯನ್ನು ಆಗ್ರಹಿಸಿತ್ತು. ಈ ಹಿನ್ನೆಲೆಯಲ್ಲಿ ವಿಚಾರಣೆ ನಡೆಸುವುದು ಡಾ.ಬಿ.ಆರ್. ರವಿಕಾಂತೇಗೌಡ ಭರವಸೆ ನೀಡಿದ್ದರು.</p>.<p>ವಿಚಾರಣೆ ನಡೆಸಿ ವರದಿ ಸಲ್ಲಿಸುವಂತೆ ಬೆಳ್ತಂಗಡಿ ಇನ್ಸ್ಪೆಕ್ಟರ್ಗೆ ಸೂಚನೆ ನೀಡಲಾಗಿತ್ತು. ಅವರ ವರದಿಯ ಆಧಾರದ ಮೇಲೆ, ಇಲಾಖಾ ವಿಚಾರಣೆ ಕಾಯ್ದಿರಿಸಿ, ಹೆಡ್ ಕಾನ್ಸ್ಟೆಬಲ್ ತಾರಾನಾಥ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>