‘ನಮ್ಮಲ್ಲಿ ಪ್ರವಾಸಿಗರು ಕೇರಳಕ್ಕೆ ಹೋಗುತ್ತಾರೆ. ಅಲ್ಲಿಂದ ರೈಲು ಹತ್ತಿ ಗೋವಾಕ್ಕೆ ಹೋಗುತ್ತಾರೆ. ಕರ್ನಾಟಕದಲ್ಲಿ ಉದ್ದದ ಕರಾವಳಿ ಪ್ರದೇಶವಿದ್ದರೂ ಪ್ರವಾಸಿಗರ ಸಂಖ್ಯೆ ಕಡಿಮೆ. ಪರಿಸರ ಮತ್ತು ಸಾಹಸ ಪ್ರವಾಸೋದ್ಯಮ ಅಭಿವೃದ್ಧಿಗೆ ಉತ್ತೇಜನ ನೀಡಲು ಕರಾವಳಿ ಪ್ರವಾಸೋದ್ಯಮ ಸರ್ಕೀಟ್ ಯೋಜನೆ ರೂಪಿಸಿ. ಕರಾವಳಿಯ ಶಾಸಕರ ಜತೆ ಸಭೆ ನಡೆಸಿ, ಯೋಜನೆ ಅಂತಿಮಗೊಳಿಸಿ’ ಎಂದು ಸಚಿವ ಎಚ್.ಕೆ. ಪಾಟೀಲ ಅವರಿಗೆ ಸಲಹೆ ನೀಡಿದರು.