<p><strong>ಮಂಗಳೂರು:</strong> ವಿಧಾನಸಭೆಯ 224 ಶಾಸಕರಲ್ಲಿ ಕೆಲವು ಶಾಸಕರ ವರ್ತನೆ ಮಾತ್ರ ಅಶಿಸ್ತಿನಿಂದ ಇರುತ್ತದೆ. ಬೇರೆ ಶಾಸಕರ ವರ್ತನೆ ಈ ರೀತಿ ಇರುವುದಿಲ್ಲ. ಸದನದಲ್ಲಿ ತಪ್ಪು ಮಾಡಿದವರಿಂದಲೇ ಮತ್ತೆ ಅಂತಹ ತಪ್ಪುಗಳು ಪುನರಾವರ್ತನೆ (ಹೆಬಿಚುವಲ್ ಒಫೆಂಡರ್ಸ್) ಆಗುತ್ತಿರುತ್ತವೆ ಎಂದು ಸ್ಪೀಕರ್ ಯು.ಟಿ. ಖಾದರ್ ಹೇಳಿದರು.</p><p>ಶನಿವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಶಾಸಕ ಶಿವಲಿಂಗೇಗೌಡರು ಸದನದಲ್ಲಿ ಬಳಕೆ ಮಾಡಿರುವ ಪದಗಳ ಕುರಿತು ಆಕ್ಷೇಪ ವ್ಯಕ್ತವಾಗಿರುವ ಬಗ್ಗೆ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿದರು.</p><p>ಸದನ ಎಂದರೆ ಕುಟುಂಬ ಇದ್ದಂತೆ. ಇಂತಹ ಚರ್ಚೆಗಳು ಹಿಂದೆಯೂ ಆಗಿವೆ. ಪ್ರೀತಿಯಿಂದ ಮಾತಾಡುವಾಗ, ಅಣ್ಣ ತಮ್ಮಂದಿರ ನಡುವಿನ ಚರ್ಚೆಯಂತೆ ಆಚೀಚೆ ಆಗಿರಬಹುದು. </p><p>ಕೆಲವು ಸಂದರ್ಭಗಳಲ್ಲಿ ಪ್ರತಿಕ್ರಿಯಿಸುವಾಗ ಭಾವನಾತ್ಮಕ ಮಾತುಗಳು ಬಂದು ಬಿಡುತ್ತವೆ. ಅದನ್ನು ಬಗೆಹರಿಸಿಕೊಂಡು ಹೋಗುವುದು ಸದನದ ಸಂಸ್ಕೃತಿ ಎಂದರು. </p><p>ಸದನವನ್ನು ಶಿಸ್ತಿನಿಂದ ನಡೆಸುವುದು ಸಭಾಧ್ಯಕ್ಷರ ಜವಾಬ್ದಾರಿ ಮಾತ್ರವಲ್ಲ. ಎಲ್ಲ ಸದಸ್ಯರ ಜವಾಬ್ದಾರಿಯಾಗಿದೆ. ಜನರು ಸಭೆಯ ಕಲಾಪ ವೀಕ್ಷಿಸುತ್ತಾರೆ, ನಮ್ಮನ್ನು ಗಮನಿಸುತ್ತಾರೆ ಎನ್ನುವ ಅರಿವು ಪ್ರತಿ ಶಾಸಕನಲ್ಲೂ ಇರಬೇಕು. ಶಾಸಕರು ತಮ್ಮ ಗೌರವ ಉಳಿಸಿಕೊಳ್ಳಬೇಕು. </p><p>ಎಲ್ಲವನ್ನೂ ಕಾನೂನು, ನಿಯಮಗಳಿಂದಲೇ ಜಾರಿಗೆ ತರಲು ಸಾಧ್ಯವಾಗದು. ಶಾಸಕರಿಗೆ ತಮ್ಮ ಹೊಣೆಗಾರಿಕೆಯ ಅರಿವು ಇರಬೇಕು. ಕಾನೂನು ಮತ್ತು ನಿಯಮದ ಬಗ್ಗೆ ತಿಳಿವಳಿಕೆ ಇರುವವರೇ ಶಾಸಕರಾಗಿ ಆಯ್ಕೆಯಾಗಿ ಬರುವವರು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ವಿಧಾನಸಭೆಯ 224 ಶಾಸಕರಲ್ಲಿ ಕೆಲವು ಶಾಸಕರ ವರ್ತನೆ ಮಾತ್ರ ಅಶಿಸ್ತಿನಿಂದ ಇರುತ್ತದೆ. ಬೇರೆ ಶಾಸಕರ ವರ್ತನೆ ಈ ರೀತಿ ಇರುವುದಿಲ್ಲ. ಸದನದಲ್ಲಿ ತಪ್ಪು ಮಾಡಿದವರಿಂದಲೇ ಮತ್ತೆ ಅಂತಹ ತಪ್ಪುಗಳು ಪುನರಾವರ್ತನೆ (ಹೆಬಿಚುವಲ್ ಒಫೆಂಡರ್ಸ್) ಆಗುತ್ತಿರುತ್ತವೆ ಎಂದು ಸ್ಪೀಕರ್ ಯು.ಟಿ. ಖಾದರ್ ಹೇಳಿದರು.</p><p>ಶನಿವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಶಾಸಕ ಶಿವಲಿಂಗೇಗೌಡರು ಸದನದಲ್ಲಿ ಬಳಕೆ ಮಾಡಿರುವ ಪದಗಳ ಕುರಿತು ಆಕ್ಷೇಪ ವ್ಯಕ್ತವಾಗಿರುವ ಬಗ್ಗೆ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿದರು.</p><p>ಸದನ ಎಂದರೆ ಕುಟುಂಬ ಇದ್ದಂತೆ. ಇಂತಹ ಚರ್ಚೆಗಳು ಹಿಂದೆಯೂ ಆಗಿವೆ. ಪ್ರೀತಿಯಿಂದ ಮಾತಾಡುವಾಗ, ಅಣ್ಣ ತಮ್ಮಂದಿರ ನಡುವಿನ ಚರ್ಚೆಯಂತೆ ಆಚೀಚೆ ಆಗಿರಬಹುದು. </p><p>ಕೆಲವು ಸಂದರ್ಭಗಳಲ್ಲಿ ಪ್ರತಿಕ್ರಿಯಿಸುವಾಗ ಭಾವನಾತ್ಮಕ ಮಾತುಗಳು ಬಂದು ಬಿಡುತ್ತವೆ. ಅದನ್ನು ಬಗೆಹರಿಸಿಕೊಂಡು ಹೋಗುವುದು ಸದನದ ಸಂಸ್ಕೃತಿ ಎಂದರು. </p><p>ಸದನವನ್ನು ಶಿಸ್ತಿನಿಂದ ನಡೆಸುವುದು ಸಭಾಧ್ಯಕ್ಷರ ಜವಾಬ್ದಾರಿ ಮಾತ್ರವಲ್ಲ. ಎಲ್ಲ ಸದಸ್ಯರ ಜವಾಬ್ದಾರಿಯಾಗಿದೆ. ಜನರು ಸಭೆಯ ಕಲಾಪ ವೀಕ್ಷಿಸುತ್ತಾರೆ, ನಮ್ಮನ್ನು ಗಮನಿಸುತ್ತಾರೆ ಎನ್ನುವ ಅರಿವು ಪ್ರತಿ ಶಾಸಕನಲ್ಲೂ ಇರಬೇಕು. ಶಾಸಕರು ತಮ್ಮ ಗೌರವ ಉಳಿಸಿಕೊಳ್ಳಬೇಕು. </p><p>ಎಲ್ಲವನ್ನೂ ಕಾನೂನು, ನಿಯಮಗಳಿಂದಲೇ ಜಾರಿಗೆ ತರಲು ಸಾಧ್ಯವಾಗದು. ಶಾಸಕರಿಗೆ ತಮ್ಮ ಹೊಣೆಗಾರಿಕೆಯ ಅರಿವು ಇರಬೇಕು. ಕಾನೂನು ಮತ್ತು ನಿಯಮದ ಬಗ್ಗೆ ತಿಳಿವಳಿಕೆ ಇರುವವರೇ ಶಾಸಕರಾಗಿ ಆಯ್ಕೆಯಾಗಿ ಬರುವವರು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>