<p><strong>ಬೆಂಗಳೂರು</strong>: ವಿಧಾನಸಭೆಯ ಕಲಾಪವನ್ನು ಸುಗಮವಾಗಿ ನಡೆಸುವುದಕ್ಕೆ ಪೂರಕವಾಗಿ ನಿಯಮಗಳನ್ನು ರೂಪಿಸಲು ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕರೂ ಸೇರಿದಂತೆ ಹಲವು ಸದಸ್ಯರನ್ನು ಒಳಗೊಂಡಿರುವ ನೀತಿ ನಿರೂಪಣಾ ಸಮಿತಿಯನ್ನು ರಚಿಸಲಾಗಿದೆ ಎಂದು ವಿಧಾನಸಭೆಯ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.</p>.<p>ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ʼಸದನದ ಕಲಾಪವನ್ನು ಸುಗಮವಾಗಿ ನಡೆಸುವುದಕ್ಕೆ ಅಗತ್ಯ ನಿಯಮಗಳನ್ನು ರಚಿಸಬೇಕಿದೆ. ನೀತಿ ನಿರೂಪಣಾ ಸಮಿತಿಯ ಸಹಕಾರದಲ್ಲಿ ಈ ಕೆಲಸ ಮಾಡಲಾಗುವುದುʼ ಎಂದರು.</p>.<p>ಇದೇ 13ರಿಂದ ಹತ್ತು ದಿನಗಳ ಕಾಲ ವಿಧಾನಸಭೆಯ ಅಧಿವೇಶನ ನಡೆಯುತ್ತಿದೆ. ಆರು ತಿಂಗಳ ಬಳಿಕ ಅಧಿವೇಶನ ನಡೆಸಲಾಗುತ್ತಿದೆ. ಕೋವಿಡ್ ನಿಯಂತ್ರಣ ಮಾರ್ಗಸೂಚಿಗಳನ್ನು ಪಾಲಿಸಿಕೊಂಡು ಸದನದ ಕಲಾಪ ನಡೆಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.</p>.<p><strong>ಹಾಜರಿ ಕಡ್ಡಾಯ: </strong>ಕಲಾಪದ ಅವಧಿಯಲ್ಲಿ ಮುಖ್ಯಮಂತ್ರಿ ಮತ್ತು ಎಲ್ಲ ಸಚಿವರು ಹಾಜರಿರುವುದನ್ನು ಕಡ್ಡಾಯಗೊಳಿಸಲಾಗಿದೆ. ಅಧಿವೇಶನದ ಅವಧಿಯಲ್ಲಿ ಯಾವುದೇ ಇತರ ಕಾರ್ಯಕ್ರಮ ನಿಗದಿಪಡಿಸಿಕೊಳ್ಳಬಾರದು. ಸಚಿವರು ರಜೆ ಅರ್ಜಿ ಸಲ್ಲಿಸಬಾರದು. ನೆಪು ಹೇಳಿ ಕಲಾಪಕ್ಕೆ ಗೈರಾಗುವಂತಿಲ್ಲ ಎಂದು ಕಾಗೇರಿ ಹೇಳಿದರು.</p>.<p>ಕಲಾಪದ ಅವಧಿಯಲ್ಲಿ ಅಧಿಕಾರಿಗಳ ಹಾಜರಾತಿ ಕಡ್ಡಾಯ. ಸಕ್ರಿಯವಾಗಿ ಕಲಾಪದಲ್ಲಿ ಭಾಗವಹಿಸಿದ ಶಾಸಕರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ನೀಡಲಾಗುವುದು. ಪ್ರಶ್ನೋತ್ತರ ಅವಧಿಯನ್ನು ನಿರ್ದಿಷ್ಟವಾಗಿ ಅದೇ ಉದ್ದೇಶಕ್ಕೆ ಮೀಸಲಿಡಲು ಕೆಲವು ನಿಯಗಳನ್ನು ರೂಪಿಸಲಾಗಿದೆ ಎಂದರು.</p>.<p><strong>ಸಾರ್ವಜನಿಕರ ವೀಕ್ಷಣೆಗೆ ಅವಕಾಶ:</strong> ಕೋವಿಡ್ ಕಾರಣದಿಂದ ವಿಧಾನಸಭೆಯ ಕಲಾಪ ವೀಕ್ಷಣೆಗೆ ಸಾರ್ವಜನಿಕರು ಬರುವುದನ್ನು ನಿರ್ಬಂಧಿಸಲಾಗಿತ್ತು. ಈ ಬಾರಿ ಸಾರ್ವಜನಿಕರ ವೀಕ್ಷಣೆಗೆ ಅನುಮತಿ ನೀಡಲಾಗಿದೆ ಎಂದು ಸ್ಪೀಕರ್ ತಿಳಿಸಿದರು.</p>.<p>ಕೋವಿಡ್ ಸೋಂಕು ಪೂರ್ಣ ಪ್ರಮಾಣದಲ್ಲಿ ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ. ಆದ್ದರಿಂದ ಶಾಲಾ ಮಕ್ಕಳನ್ನು ಕಲಾಪ ವೀಕ್ಷಣೆಗೆ ಕರೆತರಬಾರದು ಎಂದು ಮನವಿ ಮಾಡಿದರು.</p>.<p><strong>ಜಂಟಿ ಅಧಿವೇಶನ: </strong>ಅಧಿವೇಶನದ ಕೊನೆಯ ದಿನವಾದ ಸೆಪ್ಟೆಂಬರ್ 24ರಂದು ಅರ್ಧ ದಿನ ಜಂಟಿ ಅಧಿವೇಶನ ನಡೆಸಲಾಗುವುದು. ಶಾಸನಸಭೆಗಳ ಕಲಾಪದಲ್ಲಿ ಗದ್ದಲ, ಅಹಿತಕರ ಘಟನೆ ತಡೆಯುವ ಕುರಿತು ಜಂಟಿ ಅಧಿವೇಶನದಲ್ಲಿ ಚರ್ಚಿಸಲಾಗುವುದು ಎಂದರು.</p>.<p>ಜಂಟಿ ಅಧಿವೇಶನಕ್ಕೆ ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರಿಗೆ ಆಹ್ವಾನ ನೀಡಲಾಗುವುದು. ಶಾಸನಸಭೆಗಳಲ್ಲಿ ಸದಸ್ಯರು ವರ್ತಿಸಬೇಕಾದ ರೀತಿ ಕುರಿತು ಅವರು ಮಾತನಾಡಲಿದ್ದಾರೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ವಿಧಾನಸಭೆಯ ಕಲಾಪವನ್ನು ಸುಗಮವಾಗಿ ನಡೆಸುವುದಕ್ಕೆ ಪೂರಕವಾಗಿ ನಿಯಮಗಳನ್ನು ರೂಪಿಸಲು ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕರೂ ಸೇರಿದಂತೆ ಹಲವು ಸದಸ್ಯರನ್ನು ಒಳಗೊಂಡಿರುವ ನೀತಿ ನಿರೂಪಣಾ ಸಮಿತಿಯನ್ನು ರಚಿಸಲಾಗಿದೆ ಎಂದು ವಿಧಾನಸಭೆಯ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.</p>.<p>ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ʼಸದನದ ಕಲಾಪವನ್ನು ಸುಗಮವಾಗಿ ನಡೆಸುವುದಕ್ಕೆ ಅಗತ್ಯ ನಿಯಮಗಳನ್ನು ರಚಿಸಬೇಕಿದೆ. ನೀತಿ ನಿರೂಪಣಾ ಸಮಿತಿಯ ಸಹಕಾರದಲ್ಲಿ ಈ ಕೆಲಸ ಮಾಡಲಾಗುವುದುʼ ಎಂದರು.</p>.<p>ಇದೇ 13ರಿಂದ ಹತ್ತು ದಿನಗಳ ಕಾಲ ವಿಧಾನಸಭೆಯ ಅಧಿವೇಶನ ನಡೆಯುತ್ತಿದೆ. ಆರು ತಿಂಗಳ ಬಳಿಕ ಅಧಿವೇಶನ ನಡೆಸಲಾಗುತ್ತಿದೆ. ಕೋವಿಡ್ ನಿಯಂತ್ರಣ ಮಾರ್ಗಸೂಚಿಗಳನ್ನು ಪಾಲಿಸಿಕೊಂಡು ಸದನದ ಕಲಾಪ ನಡೆಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.</p>.<p><strong>ಹಾಜರಿ ಕಡ್ಡಾಯ: </strong>ಕಲಾಪದ ಅವಧಿಯಲ್ಲಿ ಮುಖ್ಯಮಂತ್ರಿ ಮತ್ತು ಎಲ್ಲ ಸಚಿವರು ಹಾಜರಿರುವುದನ್ನು ಕಡ್ಡಾಯಗೊಳಿಸಲಾಗಿದೆ. ಅಧಿವೇಶನದ ಅವಧಿಯಲ್ಲಿ ಯಾವುದೇ ಇತರ ಕಾರ್ಯಕ್ರಮ ನಿಗದಿಪಡಿಸಿಕೊಳ್ಳಬಾರದು. ಸಚಿವರು ರಜೆ ಅರ್ಜಿ ಸಲ್ಲಿಸಬಾರದು. ನೆಪು ಹೇಳಿ ಕಲಾಪಕ್ಕೆ ಗೈರಾಗುವಂತಿಲ್ಲ ಎಂದು ಕಾಗೇರಿ ಹೇಳಿದರು.</p>.<p>ಕಲಾಪದ ಅವಧಿಯಲ್ಲಿ ಅಧಿಕಾರಿಗಳ ಹಾಜರಾತಿ ಕಡ್ಡಾಯ. ಸಕ್ರಿಯವಾಗಿ ಕಲಾಪದಲ್ಲಿ ಭಾಗವಹಿಸಿದ ಶಾಸಕರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ನೀಡಲಾಗುವುದು. ಪ್ರಶ್ನೋತ್ತರ ಅವಧಿಯನ್ನು ನಿರ್ದಿಷ್ಟವಾಗಿ ಅದೇ ಉದ್ದೇಶಕ್ಕೆ ಮೀಸಲಿಡಲು ಕೆಲವು ನಿಯಗಳನ್ನು ರೂಪಿಸಲಾಗಿದೆ ಎಂದರು.</p>.<p><strong>ಸಾರ್ವಜನಿಕರ ವೀಕ್ಷಣೆಗೆ ಅವಕಾಶ:</strong> ಕೋವಿಡ್ ಕಾರಣದಿಂದ ವಿಧಾನಸಭೆಯ ಕಲಾಪ ವೀಕ್ಷಣೆಗೆ ಸಾರ್ವಜನಿಕರು ಬರುವುದನ್ನು ನಿರ್ಬಂಧಿಸಲಾಗಿತ್ತು. ಈ ಬಾರಿ ಸಾರ್ವಜನಿಕರ ವೀಕ್ಷಣೆಗೆ ಅನುಮತಿ ನೀಡಲಾಗಿದೆ ಎಂದು ಸ್ಪೀಕರ್ ತಿಳಿಸಿದರು.</p>.<p>ಕೋವಿಡ್ ಸೋಂಕು ಪೂರ್ಣ ಪ್ರಮಾಣದಲ್ಲಿ ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ. ಆದ್ದರಿಂದ ಶಾಲಾ ಮಕ್ಕಳನ್ನು ಕಲಾಪ ವೀಕ್ಷಣೆಗೆ ಕರೆತರಬಾರದು ಎಂದು ಮನವಿ ಮಾಡಿದರು.</p>.<p><strong>ಜಂಟಿ ಅಧಿವೇಶನ: </strong>ಅಧಿವೇಶನದ ಕೊನೆಯ ದಿನವಾದ ಸೆಪ್ಟೆಂಬರ್ 24ರಂದು ಅರ್ಧ ದಿನ ಜಂಟಿ ಅಧಿವೇಶನ ನಡೆಸಲಾಗುವುದು. ಶಾಸನಸಭೆಗಳ ಕಲಾಪದಲ್ಲಿ ಗದ್ದಲ, ಅಹಿತಕರ ಘಟನೆ ತಡೆಯುವ ಕುರಿತು ಜಂಟಿ ಅಧಿವೇಶನದಲ್ಲಿ ಚರ್ಚಿಸಲಾಗುವುದು ಎಂದರು.</p>.<p>ಜಂಟಿ ಅಧಿವೇಶನಕ್ಕೆ ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರಿಗೆ ಆಹ್ವಾನ ನೀಡಲಾಗುವುದು. ಶಾಸನಸಭೆಗಳಲ್ಲಿ ಸದಸ್ಯರು ವರ್ತಿಸಬೇಕಾದ ರೀತಿ ಕುರಿತು ಅವರು ಮಾತನಾಡಲಿದ್ದಾರೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>