ಮುಖ್ಯಮಂತ್ರಿಯಾಗಿದ್ದ ಬಿ.ಎಸ್. ಯಡಿಯೂರಪ್ಪ ಅವರಿಗೆ ನೀಡುವುದಾಗಿ ಹೇಳಿ ಗುತ್ತಿಗೆದಾರ ಚಂದ್ರಕಾಂತ್ ರಾಮಲಿಂಗಂ ಅವರಿಂದ ₹ 12 ಕೋಟಿ ಲಂಚ ಪಡೆದ ಆರೋಪ ಹಿಂದೆ ಬಿಡಿಎ ಆಯುಕ್ತರಾಗಿದ್ದ ಪ್ರಕಾಶ್ ಮೇಲಿದೆ. ಈಗ ಮೈಸೂರು ಪ್ರಾದೇಶಿಕ ಆಯುಕ್ತರ ಹುದ್ದೆಯಲ್ಲಿರುವ ಅವರು, ಬಂಧನ ಭೀತಿಯಿಂದ ನಿರೀಕ್ಷಣಾ ಜಾಮೀನು ಕೋರಿ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.